Viral Video: ನಿರೂಪಕಿ ಕತ್ತಿಗೆ ಬಲವಂತವಾಗಿ ಹಾರ ಹಾಕಿದ ನಟ; ಕಿರುಕುಳ ಎಂದ ನೆಟ್ಟಿಗರು


Team Udayavani, Sep 20, 2023, 1:19 PM IST

Viral Video: ನಿರೂಪಕಿ ಕತ್ತಿಗೆ ಬಲವಂತವಾಗಿ ಹಾರ ಹಾಕಿದ ನಟ; ಕಿರುಕುಳ ಎಂದ ನೆಟ್ಟಿಗರು

ಚೆನ್ನೈ: ಕಾರ್ಯಕ್ರಮ ನಡೆಸಿಕೊಡುತ್ತಿದ್ದ ನಿರೂಪಕಿ ಜೊತೆ ವೇದಿಕೆಯಲ್ಲಿ ಅನುಚಿತವಾಗಿ ವರ್ತಿಸಿದ ನಟನ ವಿರುದ್ಧ ನೆಟ್ಟಿಗರು ಗರಂ ಆಗಿದ್ದಾರೆ. ಕಾಲಿವುಡ್‌ ಸಿನಿಮಾರಂಗದ ಬಹುತೇಕ ಪ್ರೇಕ್ಷಕರಿಗೆ ಹಾಗೂ ಕಲಾವಿದರಿಗೆ ಕೂಲ್‌ ಸುರೇಶ್‌ ಅವರ ಗುರುತು ಪರಿಚಯವಿದೆ. ಯೂಟ್ಯೂಬ್ ನಲ್ಲಿ ಸಂಚಲನ ಸೃಷ್ಟಿಸಿರುವ ಸುರೇಶ್‌ ಮತ್ತೆ ಸುದ್ದಿಯಾಗಿದ್ದಾರೆ.

ಯಾರು ಈ ಕೂಲ್‌ ಸುರೇಶ್? ಕೆಲವರು ಥಿಯೇಟರ್‌ ನಲ್ಲಿ ಸಿನಿಮಾ ವೀಕ್ಷಿಸಿದ ಬಳಿಕ ಹೊರಗೆ ಬಂದು ನಾಲ್ಕೈದು ಡೈಲಾಗ್ಸ್‌ ಗಳನ್ನು ಹೊಡೆದು ಫೇಮಸ್‌ ಆಗುತ್ತಾರೆ. ಜನರ ಗಮನ ಸೆಳೆದು ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಾರೆ. ಅಂಥವರಲ್ಲಿ ಒಬ್ಬರು ಈ ಕೂಲ್‌ ಸುರೇಶ್.‌ ಸಿನಿಮಾವನ್ನು ನೋಡಿದ ಬಳಿಕ ಅದರ ಪಾಸಿಟಿವ್‌ – ನೆಗೆಟಿವ್‌ ಗಳನ್ನು ಒಂದು ಬಗೆಯಲ್ಲಿ ವ್ಯಂಗ್ಯವಾಗಿ ಹೇಳುವ ಸುರೇಶ್‌ ನಟ ಸಿಂಬು ಅವರ ದೊಡ್ಡ ಅಭಿಮಾನಿ ಎಂದು ಹೇಳಿಕೊಂಡಿದ್ದಾರೆ.

ಥಿಯೇಟರ್‌ ಮುಂದೆ ಸಿನಿಮಾಗಳ ಮಾತನಾಡಿಕೊಂಡೇ ಫೇಮಸ್‌ ಆದ ಸುರೇಶ್ ಇತ್ತೀಚೆಗಷ್ಟೇ ಸಿಂಬು ಅಭಿನಯದ ‘ಬಂದು ತಾನಿಂದು ಕಾದು’ ಚಿತ್ರಕ್ಕೆ ಮಾಡಿದ್ದ ಪ್ರಚಾರ ಮಾಡಿದ್ದು ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿತ್ತು.

ಇದನ್ನೂ ಓದಿ: Shivamogga: ಕಾಂಗ್ರೆಸ್ ನ ಗುಂಪುಗಾರಿಕೆಯೇ ಅವರ 100 ದಿನದ ಸಾಧನೆ : ಈಶ್ವರಪ್ಪ ಕಿಡಿ

ಅವರ ಖ್ಯಾತಿಯಿಂದಲೇ ಕಾಲಿವುಡ್‌ ಸಿನಿಮಾಗಳಾದ ‘ಕಾಖ ಕಾಖಾ’, ‘ಮಾಚಿ’ ಮತ್ತು ‘ಕಾದಲ್ ಅಜಿವತಿಲ್ಲೈ’ ಸಿನಿಮಾಗಳಲ್ಲಿ  ಕೂಲ್ ಸುರೇಶ್ ತಮಿಳು ಚಿತ್ರಗಳಲ್ಲಿ ಪೋಷಕ ಪಾತ್ರಗಳಲ್ಲಿ ಕಾಣಸಿಕೊಂಡಿದ್ದಾರೆ.

ಕೂಲ್‌ ಸುರೇಶ್‌ ಅವರನ್ನು ಅನೇಕ ಸಿನಿಮಾ ತಂಡದವರು ಪ್ರಚಾರ ಮಾಡಲು ಆಹ್ವಾನಿಸುತ್ತಾರೆ. ಬುಧವಾರ (ಸೆ.20 ರಂದು) ‘ಸರಕ್ಕುʼ ಎನ್ನುವ ಸಿನಿಮಾದ ಆಡಿಯೋ ಬಿಡುಗಡೆ ಸಮಾರಂಭಕ್ಕೆ ಆಗಮಿಸಿದ ವೇಳೆ ಅವರು ನಿರೂಪಕಿಯೊಂದಿಗೆ ವರ್ತಿಸಿದ ರೀತಿಗೆ ನೆಟ್ಟಿಗರು ಗರಂ ಆಗಿದ್ದಾರೆ.

ಈ ಕಾರ್ಯಕ್ರಮದಲ್ಲಿ ನಿರೂಪಕಿ ವೇದಿಕೆಗೆ ಕೂಲ್‌ ಸುರೇಶ್‌ ಅವರನ್ನು ಆಹ್ವಾನಿಸಿದ್ದಾರೆ. ಈ ವೇಳೆ ಸುರೇಶ್‌ ತಮ್ಮ ಕೈಯಲ್ಲಿದ್ದ ಹಾರವನ್ನು ಏಕಾಏಕಿ ಬಲವಂತವಾಗಿ ನಿರೂಪಕಿಯ ಕತ್ತಿಗೆ ಹಾಕಿದ್ದಾರೆ. ಇದರಿಂದ ನಿರೂಪಕಿ ಎಲ್ಲರ ಎದುರು ಮುಜುಗರಕ್ಕೆ ಒಳಗಾಗಿದ್ದು,ಸಿಟ್ಟಾಗಿದ್ದಾರೆ. ಹಾರವನ್ನು ತೆಗೆದು ನಿರೂಪಕಿ ಬಿಸಾಕಿದ್ದಾರೆ.

ಆ ಬಳಿಕ ಈ ಸಮಾರಂಭದಲ್ಲಿ ನಿರೂಪಕಿಯ ಕೆಲಸವನ್ನು ಪ್ರಶಂಸಿಸಬೇಕಾಗಿದೆ ಎಂದು ಅವರು ಹೇಳಿದ್ದಾರೆ. ಮಜುಗರದ ಸನ್ನಿವೇಶವನ್ನು ಅರಿತುಕೊಂಡ ನಟ ಮನ್ಸೂರ್ ಅಲಿಖಾನ್ ವೇದಿಕೆಗೆ ಬಂದು ಸುರೇಶ್ ಅವರ ಪರವಾಗಿ ನಿರೂಪಕಿ ಬಳಿ ಕ್ಷಮೆಯಾಚಿಸಿದ್ದಾರೆ. ಸುರೇಶ್‌ ಅವರ ಬಳಿ ಕ್ಷಮೆ ಕೇಳುವಂತೆ ಕೇಳಿದ್ದಾರೆ. ಆದರೆ ಸುರೇಶ್‌ ಕ್ಷಮೆ ಕೇಳುವ ಬದಲು ನಾನು ಇದನ್ನು  ‘ಕಂಟೆಂಟ್’ಗಾಗಿ ಮಾಡಿದ್ದೇನೆ ಎಂದಿದ್ದಾರೆ.

ಕೂಲ್ ಸುರೇಶ್ ಅವರ ಈ ವರ್ತನೆಗೆ ನೆಟ್ಟಿಗರು ಗರಂ ಆಗಿದ್ದು, ಇದು ನಿಂದನೆ ಮತ್ತು ಕಿರುಕುಳ ಎಂದು ನಟನ ವರ್ತನೆಯನ್ನು ಖಂಡಿಸಿದ್ದಾರೆ.

ಇನ್ನು ಮುಂದೆ ಇಂತಹ ಕಾರ್ಯಕ್ರಮಗಳಿಗೆ ಅವರನ್ನು ಆಹ್ವಾನಿಸಬೇಡಿ ಎಂದು ಹಲವು ಬಳಕೆದಾರರು ಮತ್ತು ಪತ್ರಕರ್ತರು ಸಿನಿಮಾ ನಿರ್ಮಾಪಕರಿಗೆ ಮನವಿ ಮಾಡಿದ್ದಾರೆ.

 

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-eqewwqe

Deepfake video ವಿರುದ್ಧ ನಟ ರಣ್‌ವೀರ್‌ ಸಿಂಗ್‌ ದೂರು

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

Big B: ʼಕಲ್ಕಿʼಗಾಗಿ ʼಅಶ್ವತ್ಥಾಮʼನ ಅವತಾರ ತಾಳಿದ ಬಿಗ್‌ ಬಿ; ಗಮನ ಸೆಳೆದ ಪಾತ್ರದ ಝಲಕ್

Big B: ʼಕಲ್ಕಿʼಗಾಗಿ ʼಅಶ್ವತ್ಥಾಮʼನ ಅವತಾರ ತಾಳಿದ ಬಿಗ್‌ ಬಿ; ಗಮನ ಸೆಳೆದ ಪಾತ್ರದ ಝಲಕ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.