Viral Video: ನಿರೂಪಕಿ ಕತ್ತಿಗೆ ಬಲವಂತವಾಗಿ ಹಾರ ಹಾಕಿದ ನಟ; ಕಿರುಕುಳ ಎಂದ ನೆಟ್ಟಿಗರು


Team Udayavani, Sep 20, 2023, 1:19 PM IST

Viral Video: ನಿರೂಪಕಿ ಕತ್ತಿಗೆ ಬಲವಂತವಾಗಿ ಹಾರ ಹಾಕಿದ ನಟ; ಕಿರುಕುಳ ಎಂದ ನೆಟ್ಟಿಗರು

ಚೆನ್ನೈ: ಕಾರ್ಯಕ್ರಮ ನಡೆಸಿಕೊಡುತ್ತಿದ್ದ ನಿರೂಪಕಿ ಜೊತೆ ವೇದಿಕೆಯಲ್ಲಿ ಅನುಚಿತವಾಗಿ ವರ್ತಿಸಿದ ನಟನ ವಿರುದ್ಧ ನೆಟ್ಟಿಗರು ಗರಂ ಆಗಿದ್ದಾರೆ. ಕಾಲಿವುಡ್‌ ಸಿನಿಮಾರಂಗದ ಬಹುತೇಕ ಪ್ರೇಕ್ಷಕರಿಗೆ ಹಾಗೂ ಕಲಾವಿದರಿಗೆ ಕೂಲ್‌ ಸುರೇಶ್‌ ಅವರ ಗುರುತು ಪರಿಚಯವಿದೆ. ಯೂಟ್ಯೂಬ್ ನಲ್ಲಿ ಸಂಚಲನ ಸೃಷ್ಟಿಸಿರುವ ಸುರೇಶ್‌ ಮತ್ತೆ ಸುದ್ದಿಯಾಗಿದ್ದಾರೆ.

ಯಾರು ಈ ಕೂಲ್‌ ಸುರೇಶ್? ಕೆಲವರು ಥಿಯೇಟರ್‌ ನಲ್ಲಿ ಸಿನಿಮಾ ವೀಕ್ಷಿಸಿದ ಬಳಿಕ ಹೊರಗೆ ಬಂದು ನಾಲ್ಕೈದು ಡೈಲಾಗ್ಸ್‌ ಗಳನ್ನು ಹೊಡೆದು ಫೇಮಸ್‌ ಆಗುತ್ತಾರೆ. ಜನರ ಗಮನ ಸೆಳೆದು ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಾರೆ. ಅಂಥವರಲ್ಲಿ ಒಬ್ಬರು ಈ ಕೂಲ್‌ ಸುರೇಶ್.‌ ಸಿನಿಮಾವನ್ನು ನೋಡಿದ ಬಳಿಕ ಅದರ ಪಾಸಿಟಿವ್‌ – ನೆಗೆಟಿವ್‌ ಗಳನ್ನು ಒಂದು ಬಗೆಯಲ್ಲಿ ವ್ಯಂಗ್ಯವಾಗಿ ಹೇಳುವ ಸುರೇಶ್‌ ನಟ ಸಿಂಬು ಅವರ ದೊಡ್ಡ ಅಭಿಮಾನಿ ಎಂದು ಹೇಳಿಕೊಂಡಿದ್ದಾರೆ.

ಥಿಯೇಟರ್‌ ಮುಂದೆ ಸಿನಿಮಾಗಳ ಮಾತನಾಡಿಕೊಂಡೇ ಫೇಮಸ್‌ ಆದ ಸುರೇಶ್ ಇತ್ತೀಚೆಗಷ್ಟೇ ಸಿಂಬು ಅಭಿನಯದ ‘ಬಂದು ತಾನಿಂದು ಕಾದು’ ಚಿತ್ರಕ್ಕೆ ಮಾಡಿದ್ದ ಪ್ರಚಾರ ಮಾಡಿದ್ದು ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿತ್ತು.

ಇದನ್ನೂ ಓದಿ: Shivamogga: ಕಾಂಗ್ರೆಸ್ ನ ಗುಂಪುಗಾರಿಕೆಯೇ ಅವರ 100 ದಿನದ ಸಾಧನೆ : ಈಶ್ವರಪ್ಪ ಕಿಡಿ

ಅವರ ಖ್ಯಾತಿಯಿಂದಲೇ ಕಾಲಿವುಡ್‌ ಸಿನಿಮಾಗಳಾದ ‘ಕಾಖ ಕಾಖಾ’, ‘ಮಾಚಿ’ ಮತ್ತು ‘ಕಾದಲ್ ಅಜಿವತಿಲ್ಲೈ’ ಸಿನಿಮಾಗಳಲ್ಲಿ  ಕೂಲ್ ಸುರೇಶ್ ತಮಿಳು ಚಿತ್ರಗಳಲ್ಲಿ ಪೋಷಕ ಪಾತ್ರಗಳಲ್ಲಿ ಕಾಣಸಿಕೊಂಡಿದ್ದಾರೆ.

ಕೂಲ್‌ ಸುರೇಶ್‌ ಅವರನ್ನು ಅನೇಕ ಸಿನಿಮಾ ತಂಡದವರು ಪ್ರಚಾರ ಮಾಡಲು ಆಹ್ವಾನಿಸುತ್ತಾರೆ. ಬುಧವಾರ (ಸೆ.20 ರಂದು) ‘ಸರಕ್ಕುʼ ಎನ್ನುವ ಸಿನಿಮಾದ ಆಡಿಯೋ ಬಿಡುಗಡೆ ಸಮಾರಂಭಕ್ಕೆ ಆಗಮಿಸಿದ ವೇಳೆ ಅವರು ನಿರೂಪಕಿಯೊಂದಿಗೆ ವರ್ತಿಸಿದ ರೀತಿಗೆ ನೆಟ್ಟಿಗರು ಗರಂ ಆಗಿದ್ದಾರೆ.

ಈ ಕಾರ್ಯಕ್ರಮದಲ್ಲಿ ನಿರೂಪಕಿ ವೇದಿಕೆಗೆ ಕೂಲ್‌ ಸುರೇಶ್‌ ಅವರನ್ನು ಆಹ್ವಾನಿಸಿದ್ದಾರೆ. ಈ ವೇಳೆ ಸುರೇಶ್‌ ತಮ್ಮ ಕೈಯಲ್ಲಿದ್ದ ಹಾರವನ್ನು ಏಕಾಏಕಿ ಬಲವಂತವಾಗಿ ನಿರೂಪಕಿಯ ಕತ್ತಿಗೆ ಹಾಕಿದ್ದಾರೆ. ಇದರಿಂದ ನಿರೂಪಕಿ ಎಲ್ಲರ ಎದುರು ಮುಜುಗರಕ್ಕೆ ಒಳಗಾಗಿದ್ದು,ಸಿಟ್ಟಾಗಿದ್ದಾರೆ. ಹಾರವನ್ನು ತೆಗೆದು ನಿರೂಪಕಿ ಬಿಸಾಕಿದ್ದಾರೆ.

ಆ ಬಳಿಕ ಈ ಸಮಾರಂಭದಲ್ಲಿ ನಿರೂಪಕಿಯ ಕೆಲಸವನ್ನು ಪ್ರಶಂಸಿಸಬೇಕಾಗಿದೆ ಎಂದು ಅವರು ಹೇಳಿದ್ದಾರೆ. ಮಜುಗರದ ಸನ್ನಿವೇಶವನ್ನು ಅರಿತುಕೊಂಡ ನಟ ಮನ್ಸೂರ್ ಅಲಿಖಾನ್ ವೇದಿಕೆಗೆ ಬಂದು ಸುರೇಶ್ ಅವರ ಪರವಾಗಿ ನಿರೂಪಕಿ ಬಳಿ ಕ್ಷಮೆಯಾಚಿಸಿದ್ದಾರೆ. ಸುರೇಶ್‌ ಅವರ ಬಳಿ ಕ್ಷಮೆ ಕೇಳುವಂತೆ ಕೇಳಿದ್ದಾರೆ. ಆದರೆ ಸುರೇಶ್‌ ಕ್ಷಮೆ ಕೇಳುವ ಬದಲು ನಾನು ಇದನ್ನು  ‘ಕಂಟೆಂಟ್’ಗಾಗಿ ಮಾಡಿದ್ದೇನೆ ಎಂದಿದ್ದಾರೆ.

ಕೂಲ್ ಸುರೇಶ್ ಅವರ ಈ ವರ್ತನೆಗೆ ನೆಟ್ಟಿಗರು ಗರಂ ಆಗಿದ್ದು, ಇದು ನಿಂದನೆ ಮತ್ತು ಕಿರುಕುಳ ಎಂದು ನಟನ ವರ್ತನೆಯನ್ನು ಖಂಡಿಸಿದ್ದಾರೆ.

ಇನ್ನು ಮುಂದೆ ಇಂತಹ ಕಾರ್ಯಕ್ರಮಗಳಿಗೆ ಅವರನ್ನು ಆಹ್ವಾನಿಸಬೇಡಿ ಎಂದು ಹಲವು ಬಳಕೆದಾರರು ಮತ್ತು ಪತ್ರಕರ್ತರು ಸಿನಿಮಾ ನಿರ್ಮಾಪಕರಿಗೆ ಮನವಿ ಮಾಡಿದ್ದಾರೆ.

 

ಟಾಪ್ ನ್ಯೂಸ್

1-wqewqeqwe

Prajwal ಪೆನ್ ಡ್ರೈವ್ ಬಿಡುಗಡೆ ಮಾಡಿದ್ದ ದೇವರಾಜೇ ಗೌಡ ಅರೆಸ್ಟ್

1-qewqeqwe

I am back ; ಜೈಲಿನಿಂದ ಬಿಡುಗಡೆಗೊಂಡು ಚುನಾವಣ ಪ್ರಚಾರಕ್ಕೆ ಧುಮುಕಿದ ಕೇಜ್ರಿವಾಲ್

D. K. Shivakumar-ಎಚ್‌ಡಿಕೆ ಜಗಳದಲ್ಲಿ ಬಿಜೆಪಿ ತಲೆಹಾಕಲ್ಲ: ಆರ್‌.ಅಶೋಕ್‌

D. K. Shivakumar-ಎಚ್‌ಡಿಕೆ ಜಗಳದಲ್ಲಿ ಬಿಜೆಪಿ ತಲೆಹಾಕಲ್ಲ: ಆರ್‌.ಅಶೋಕ್‌

JDS ಜತೆ ಮೈತ್ರಿ, ಅವಲೋಕನ ಸಭೆಯಲ್ಲಿ ನಿರ್ಧಾರ: ಮಹೇಶ ಟೆಂಗಿನಕಾಯಿ

JDS ಜತೆ ಮೈತ್ರಿ, ಅವಲೋಕನ ಸಭೆಯಲ್ಲಿ ನಿರ್ಧಾರ: ಮಹೇಶ ಟೆಂಗಿನಕಾಯಿ

ಮೇಲ್ಮನೆ ಚುನಾವಣೆ: ಬಲಗೈ ತೋರು ಬೆರಳಿಗೆ ಶಾಯಿ

Election Commission ಮೇಲ್ಮನೆ ಚುನಾವಣೆ: ಬಲಗೈ ತೋರು ಬೆರಳಿಗೆ ಶಾಯಿ

Gundlupete ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳ ಸಾವು

Gundlupete ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳ ಸಾವು

ಖರ್ಗೆ

ECI; ಮತದಾನದ ಅಂಕಿಅಂಶಗಳ ಆರೋಪ ಮಾಡಿದ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಆಯೋಗದ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1

Sikandar Movie: ಸಲ್ಮಾನ್‌ ಖಾನ್‌ ʼಸಿಕಂದರ್‌ʼಗೆ ರಶ್ಮಿಕಾ ಮಂದಣ್ಣ ನಾಯಕಿ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Met Gala 2024: ಇವೆಂಟ್‌ನಲ್ಲಿ ಭಾಗಿಯಾಗದ ಖ್ಯಾತ ಸೆಲೆಬ್ರಿಟಿಗಳ ಡೀಪ್‌ ಫೇಕ್‌ ಫೋಟೋ ವೈರಲ್

Met Gala 2024: ಇವೆಂಟ್‌ನಲ್ಲಿ ಭಾಗಿಯಾಗದ ಖ್ಯಾತ ಸೆಲೆಬ್ರಿಟಿಗಳ ಡೀಪ್‌ ಫೇಕ್‌ ಫೋಟೋ ವೈರಲ್

Arrested: ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಐದನೇ ಆರೋಪಿ ಬಂಧನ

Arrested: ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಐದನೇ ಆರೋಪಿ ಬಂಧನ

Housefull 5: ಕಾಮಿಡಿ ಜರ್ನಿಯ ‌ʼಹೌಸ್‌ ಫುಲ್‌ʼ ಕುಟುಂಬಕ್ಕೆ ಅಭಿಷೇಕ್‌ ಬಚ್ಚನ್ ಎಂಟ್ರಿ

Housefull 5: ಕಾಮಿಡಿ ಜರ್ನಿಯ ‌ʼಹೌಸ್‌ ಫುಲ್‌ʼ ಕುಟುಂಬಕ್ಕೆ ಅಭಿಷೇಕ್‌ ಬಚ್ಚನ್ ಎಂಟ್ರಿ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

1-wqewqeqwe

Prajwal ಪೆನ್ ಡ್ರೈವ್ ಬಿಡುಗಡೆ ಮಾಡಿದ್ದ ದೇವರಾಜೇ ಗೌಡ ಅರೆಸ್ಟ್

1-qewqeqwe

I am back ; ಜೈಲಿನಿಂದ ಬಿಡುಗಡೆಗೊಂಡು ಚುನಾವಣ ಪ್ರಚಾರಕ್ಕೆ ಧುಮುಕಿದ ಕೇಜ್ರಿವಾಲ್

D. K. Shivakumar-ಎಚ್‌ಡಿಕೆ ಜಗಳದಲ್ಲಿ ಬಿಜೆಪಿ ತಲೆಹಾಕಲ್ಲ: ಆರ್‌.ಅಶೋಕ್‌

D. K. Shivakumar-ಎಚ್‌ಡಿಕೆ ಜಗಳದಲ್ಲಿ ಬಿಜೆಪಿ ತಲೆಹಾಕಲ್ಲ: ಆರ್‌.ಅಶೋಕ್‌

JDS ಜತೆ ಮೈತ್ರಿ, ಅವಲೋಕನ ಸಭೆಯಲ್ಲಿ ನಿರ್ಧಾರ: ಮಹೇಶ ಟೆಂಗಿನಕಾಯಿ

JDS ಜತೆ ಮೈತ್ರಿ, ಅವಲೋಕನ ಸಭೆಯಲ್ಲಿ ನಿರ್ಧಾರ: ಮಹೇಶ ಟೆಂಗಿನಕಾಯಿ

ಮೇಲ್ಮನೆ ಚುನಾವಣೆ: ಬಲಗೈ ತೋರು ಬೆರಳಿಗೆ ಶಾಯಿ

Election Commission ಮೇಲ್ಮನೆ ಚುನಾವಣೆ: ಬಲಗೈ ತೋರು ಬೆರಳಿಗೆ ಶಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.