ಹೆಣ್ಣು-ಗಂಡೆಂಬ ಭೇದ ಬೇಡ : ಹೆಣ್ಣುಮಕ್ಕಳಿಗೆ ಉನ್ನತ ಶಿಕ್ಷಣ ನೀಡಿ – ಪ್ರೋತ್ಸಾಹಿಸಿ
Team Udayavani, Jan 17, 2021, 2:57 PM IST
ಹಾವೇರಿ: ಹೆಣ್ಣು-ಗಂಡು ಎಂಬ ಭೇದಬೇಡ. ಹೆಣ್ಣು ಮಕ್ಕಳಿಗೆ ಉನ್ನತ ಶಿಕ್ಷಣ ನೀಡಿ ಸರ್ಕಾರಿ ಹಾಗೂ ಖಾಸಗಿ ವಲಯಗಳಲ್ಲಿ ಉನ್ನತ ಹುದ್ದೆಗಳಲ್ಲಿ ಕೆಲಸ ಮಾಡುವಂತೆ ಪ್ರೋತ್ಸಾಹಿಸಬೇಕು ಎಂದು ಶಾಸಕ ನೆಹರು ಓಲೇಕಾರ ಹೇಳಿದರು. ನಗರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ಸಹಯೋಗದಲ್ಲಿ “ಮಗಳನ್ನು
ಉಳಿಸಿ ಮಗಳನ್ನು ಓದಿಸಿ’ ಯೋಜನೆ ಅಂಗವಾಗಿ ಶುಕ್ರವಾರ ಆಯೋಜಿಸಲಾದ ಹೆಣ್ಣು ಮಕ್ಕಳ ಹುಟ್ಟುಹಬ್ಬದ ಆಚರಣೆ
ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶೈಲಾ ಕುರಹಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿ, ಹೆಣ್ಣು ಮಕ್ಕಳ ಲಿಂಗಾನುಪಾತವನ್ನು ಹೆಚ್ಚಿಸುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ. ಇಲಾಖೆಯಿಂದ ಬೀದಿ ನಾಟಕ, ಜಾಗೃತಿ ಜಾಥಾಗಳು, ಭಿತ್ತಿ ಪತ್ರಗಳ ಮೂಲಕ ಹೆಣ್ಣು ಮಗುವಿನ ರಕ್ಷಣೆ ಕುರಿತಾಗಿ ಅರಿವು ಮೂಡಿಸಲಾಗುತ್ತಿದೆ ಹೇಳಿದರು.
ಇದೇ ಸಂದರ್ಭದಲ್ಲಿ ಜನವರಿ ಮಾಹೆಯಲ್ಲಿ ಜನಿಸಿದ ಅಂಗನವಾಡಿ ಹೆಣ್ಣು ಮಕ್ಕಳೊಂದಿಗೆ ಕೇಕ್ ಕತ್ತರಿಸಿದರು. ಬೇಟಿ ಬಚಾವೋ ಬೇಟಿ ಪಡಾವೋ ಯೋಜನೆ ಅಡಿಯಲ್ಲಿ 5 ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನದ ಚೆಕ್ ಮತ್ತು 5 ಫಲಾನುಭವಿಗಳಿಗೆ ಭಾಗ್ಯ ಲಕ್ಷ್ಮಿ ಬಾಂಡ್ಗಳನ್ನು ಸಾಂಕೇತಿಕವಾಗಿ ವಿತರಿಸಲಾಯಿತು.
ಇದನ್ನೂ ಓದಿ:ಬರ್ತ್ಡೇ ಬದಲು ಪುಣ್ಯದ ಕೆಲಸದಲ್ಲಿ ಕೈ ಜೋಡಿಸಿ: ದುನಿಯಾ ವಿಜಯ್ ಮನವಿ
ತಾಪಂ ಸದಸ್ಯ ವಿರೂಪಾಕ್ಷಪ್ಪ ಹುಲ್ಲೂರು, ನಿಗಮ ಮಂಡಳಿ ಮಾಜಿ ಅಧ್ಯಕ್ಷ ಭೋಜರಾಜ ಕೆರೂಡಿ, ಕೆ.ಸಿ. ಕೋರಿ, ತಾಪಂ ಇಒ ಬಸರಾಜ ಡಿ.ಸಿ., ಬಿಇಒ ಎಂ.ಎಚ್. ಪಾಟೀಲ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮಲ್ಲಿಕಾರ್ಜುನ ಕೆಂಪಳ್ಳೆರ,
ಮೇಲ್ವಿಚಾರಕಿಯರು ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ
ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ
Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್
ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು
ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…
MUST WATCH
ಹೊಸ ಸೇರ್ಪಡೆ
ಇಂಡಿಯನ್ ಆಯಿಲ್ ಕಂಪನಿಗೆ ನಿರ್ದೇಶಕರಾಗಿ (ಎಚ್ಆರ್) ರಶ್ಮಿ ಗೋವಿಲ್ ಅಧಿಕಾರ ಸ್ವೀಕಾರ
OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?
Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್ ಎಫ್ ಕೆನಡಿ ಹಿಟ್ಲರ್ ನನ್ನು ಬಂಧಿಸಿದ್ದು!
ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್ ರೋಲ್ ನಲ್ಲಿ ಫಾಫಾ
ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ