Special Article: ಜೋ ಅಂತ ಮಳೆ ತರುವ ಜೋಕುಮಾರ


Team Udayavani, Oct 15, 2023, 3:52 PM IST

Article: ಜೋ ಅಂತ ಮಳೆ ತರುವ ಜೋಕುಮಾರ

ಜೋಕುಮಾರಗೆ ಎಣ್ಣೆ ಬೆನ್ನಿ ಕೋಡಿರಪ್ಪ… ತಾಯವ್ವ…
ಅಡ್ಡಡ್ಡ ಮಳೆ ಬಂದು, ದೊಡ್ಡ ದೊಡ್ಡ ಕೆರೆ ತುಂಬಿ,
ದೊಡ್ಡೆಮ್ಮಿ ಗೊಡ್ಡೆಮ್ಮಿ ಹೈನಾಗಿ
ಮಡಿವಾಳ ಕೇರಿ ಹೊಕ್ಕಾನ, ಮುಡಿತುಂಬ ಹೂ ಮುಡಿದಾನ…
ಆಡುತಾ ಬಂದ ಜೋಕುಮಾರ, ಬೇಡುತಾ ಬಂದ ಜೋಕುಮಾರ..
ಲೋಕವಲ್ಲ ಬೆಳಗಲಿ, ಆಕಳು ಹಾಲು ಕರೆಯಲಿ
ಮನೆಮನೆಗಳಲ್ಲಿ, ನಿಮ್ಮ ಮನೆಗೆ ಜಯ ಜಯ
ಧನ ಧಾನ್ಯ ನೀಡಿದ ಮನೆತನಕ್ಕೆ ಒಳಿತಾಗಲಿ…

ಉತ್ತರ ಕರ್ನಾಟಕದ ಭಾಗದಲ್ಲಿ ಜೋಕುಮಾರ ಹುಣ್ಣಿಮೆಯನ್ನು ಗ್ರಾಮೀಣ ಭಾಗದ ಜನರು ಅತ್ಯಂತ ಶ್ರದ್ಧಾ ಭಕ್ತಿಯಿಂದ ಆಚರಿಸುತ್ತಾರೆ. ಭಾದ್ರಪದ ಮಾಸ ಶುಕ್ಲ ಪಕ್ಷದ ಚತುರ್ಥಿ ದಿನದಂದು ಗಣೇಶನ ಮೂರ್ತಿ ಪ್ರತಿಷ್ಠಾಪಿಸಲಾಗುತ್ತದೆ. 5 ದಿನಗಳ ಅನಂತರ ಗಣೇಶನನ್ನು ವಿಸರ್ಜನೆ ಮಾಡಿದ ಬಳಿಕ ಜೋಕುಮಾರ ಕುಂಬಾರ ಮನೆಯಲ್ಲಿ ಜನಿಸಿ, ತಳವಾರ ಮನೆಯಲ್ಲಿ ಮೇರೆದಾಡಿ, ಕೇರಿಯಲ್ಲಿ ಜಿಗದಾಡಿ ಕೊನೆಗೆ ದಾಸರ ಮನೆಯಲ್ಲಿ ಮರಣ ಹೊಂದುತ್ತಾನೆ ಎನ್ನುವ ಪ್ರತೀತಿ ಇದೆ. ಪೂರ್ವಜರು ಆಚರಿಸುತ್ತಾ ಬಂದಂತಹ ಧಾರ್ಮಿಕ ಕಾರ್ಯ ಕ್ರಮಗಳು ಇಂದಿಗೂ ನಮ್ಮಲ್ಲಿ ಆಚರಿಸಲಾಗುತ್ತಿದೆ. ಅವು ಗಳಲ್ಲಿ ಒಂದೆಂದರೆ ಜೋಕ್ಯಾನ ಹುಣ್ಣಿಮೆ. ತಳವಾರ ಸಮುದಾಯದ ಜೋಕುಮಾರನನ್ನು ಮಣ್ಣಿನಿಂದ ಗೊಂಬೆಯ ರೂಪದಲ್ಲಿ ಅಗಲವಾದ ಮುಖ, ಹುರಿಮೀಸೆ, ಗಿಡ್ಡ ಕಾಲುಗಳು, ಕೈಯಲ್ಲಿ ಕತ್ತಿ ಹಿಡಿದಿರುವಂತೆ ಮೂರ್ತಿ ತಯಾರಿಸಿ ಬೆಣ್ಣೆ, ಬೇವಿನ ತುಪ್ಪ, ಬೇವಿನ ಎಲೆಯ ಮೂಲಕ ಬುಟ್ಟಿಯಲ್ಲಿ ಇಟ್ಟು ಅಲಂಕರಿಸಿ ಹೆಣ್ಣುಮಕ್ಕಳು ತಲೆಮೇಲೆ ಹೊತ್ತು ಮನೆ ಮನೆಗೆ ಹೊತ್ತುಯ್ಯುತ್ತಾರೆ.

ಜೋಕುಮಾರನನ್ನು ಹೊತ್ತು ತಿರಗುವವರಿಗೆ ಜನ ಗೋಧಿ, ಜೋಳ, ಮೆಣಸಿನಕಾಯಿ ನೀಡುತ್ತಾರೆ. 7 ದಿನ ನಡೆಯುವ ಈ ಆಚರಣೆಯಲ್ಲಿ ಕೊನೆಯ ದಿನ ರಾತ್ರಿ ಊರಿನ ಎಲ್ಲ ಜನರು ಮಲಗಿದ ಅನಂತರ ಹೊಲೆಯರ ಕೇರಿಯಲ್ಲಿ ಇಟ್ಟು ಬರುತ್ತಾರೆ. ಇದಾದ ಬಳಿಕ ಜೋಕುಮಾರನ ಮೂರ್ತಿಯನ್ನು ಕೇರಿಯ ಬಾರಿಗಿಡದ ಕಂಟಿಯಿಂದ ಮುಚ್ಚಿ ಆತನ ಸುತ್ತಲೂ ಸುತ್ತುತ್ತಾರೆ.

ಸುತ್ತುವಾಗ ಬಾರಿಕಂಟಿಗೆ ಸೀರೆ ಸಿಲುಕಿದರೆ ಜೋಕುಮಾರನೆ ಸೀರೆ ಎಳೆದ ಎಂದು ಒನಕೆಯಿಂದ ಅವನ ತಲೆ ಒಡೆದು ಕಲ್ಲಿನಿಂದ ಹೊಡೆಯುತ್ತಾರೆ. ಆ ರುಂಡವು ಮುಖ ಮೇಲೆ ಮಾಡಿ ಬಿದ್ದರೆ ದೇಶಕ್ಕೆ ಮಳೆ ಬೆಳೆ ಸಮೃದ್ಧಿಯೂ, ಬೋರಲು ಬಿದ್ದರೆ ಅಶುಭವು ಎಂಬ ನಂಬಿಕೆ ಇದೆ. ಆ ಬುಟ್ಟಿಯನ್ನು ನದಿಯ ಬಳಿ ಹೋಗಿ ಬಿಟ್ಟು ಬರುತ್ತಾರೆ. ಮೂರು ದಿನಗಳ ಕಾಲ ನರಳಿ ಸಾಯುತ್ತಾನೆ ಎಂಬ ನಂಬಿಕೆ ಇದೆ. ಅಗಸರು ಆ ಮೂರು ದಿನ ಹೊಳೆಗೆ ಬಟ್ಟೆ ಒಗೆಯಲು ಹೋಗುವುದಿಲ್ಲ. ಜನಪದರು ಇಂದು ಜೋಕುಮಾರನ ಕಥೆಯನ್ನು ಮನೆಯಿಂದ ಮನೆಗೆ ಹಳ್ಳಿಯಿಂದ ಹಳ್ಳಿಗೆ ತಲೆಮಾರಿನಿಂದ ತಲೆಮಾರಿಗೆ ತಲುಪಿಸುತ್ತಿದ್ದಾರೆ.

ಕೆಲವು ನಂಬಿಕೆಯ ಪ್ರಕಾರ ಜೋಕುಮಾರ ಶಿವ ಪಾರ್ವತಿ ಮಗ. ಗಣೇಶನಂತೆ ಪಾರ್ವತಿ ಇವನನ್ನು ಸಹ ತನ್ನ ಮೈಯ ಮಣ್ಣಿನಿಂದ ಮಾಡಿದ್ದಳು. ಆದರೆ, ಅವಳು ಸ್ನಾನಕ್ಕೆ ಹೋದ ಸಮಯದಲ್ಲಿ ಶಿವ ಬಂದಾಗ ಜೋಕುಮಾರ ಅವನ ಸಿಟ್ಟಿಗೆ ಹೆದರಿ ತನ್ನ ಕರ್ತವ್ಯ ಮರೆತು ಓಡಿ ಹೋಗಿ ಪಾರ್ವತಿಯ ಹಿಂದೆ ಅಡಗಿ ಕೊಳ್ಳುತ್ತಾನೆ. ಈತನ ಅಲ್ಪತನಕ್ಕೆ ಅಲ್ಪಾಯುಷಿಯಾಗು ಎಂದು ಪಾರ್ವತಿ ಶಾಪ ಕೊಟ್ಟಳು ಎಂಬ ನಂಬಿಕೆ ಇದೆ. ಆದ್ದರಿಂದ ಭಾದ್ರಪದ ಮಾಸದ ಅಷ್ಟಮಿಯ ದಿನದಲ್ಲಿ ಹುಟ್ಟುವ ಜೋಕುಮಾರನ ಆಯುಷ್ಯ ಏಳು ದಿನ ಮಾತ್ರ.

- ಅಕ್ಷತಾ ನಂದಿಕೇಶ್ವರಮಠ, ವಿಜಯಪುರ

ಟಾಪ್ ನ್ಯೂಸ್

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-uv-fusion

Social Media and Youths: ಸಾಮಾಜಿಕ ಜಾಲತಾಣಗಳಲ್ಲಿ ಮುಳುಗಿ ಹೋದ ಯುವ ಸಮೂಹ

7-uv-fusion

Summer Heat: ಕಡುಬೇಸಗೆಯಲ್ಲಿರಲಿ ಪ್ರಾಣಿಪಕ್ಷಿಗಳ ಮೇಲೆ ಕರುಣೆ

10-uv-fusion

Lifestyle‌: ಕಳೆದು ಹೋಗುತ್ತಿರುವಂತಹ ಆರೋಗ್ಯಕರ ಜೀವನ ಶೈಲಿ

8-uv-fusion-2

Photographers: ನೆನಪಿನ ನಾವಿಕರಿಗೆ ಸಲಾಂ…

6-uv-fusion

Summer: ಬಿಸಿಲಿನ ತಾಪಕ್ಕೆ ಕಂಗಾಲಾಗಿರುವ ಜೀವ ಸಂಕುಲ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.