ವಾಯವ್ಯ ಸಾರಿಗೆಯಲ್ಲಿ 4,600 ವಲಸಿಗರ ಪ್ರಯಾಣ


Team Udayavani, May 9, 2020, 9:59 AM IST

huballi-tdy-3

ಹುಬ್ಬಳ್ಳಿ: ಲಾಕ್‌ಡೌನ್‌ ಪರಿಣಾಮ ಅಲ್ಲಲ್ಲಿ ಸಿಲುಕೊಂಡಿದ್ದ ಸುಮಾರು 4,600 ವಲಸಿಗರನ್ನು ಜಿಲ್ಲಾಡಳಿತಗಳ ನೆರವಿನೊಂದಿಗೆ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ ಅವರ ತವರು ಜಿಲ್ಲೆಗಳಿಗೆ ತಲುಪಿಸಿದ್ದು, ಕೋವಿಡ್ 19 ಸೋಂಕಿನ ಭೀತಿಯ ನಡುವೆಯೂ ಚಾಲಕ, ನಿರ್ವಾಹಕ ಹಾಗೂ ಇನ್ನಿತರ ಸಿಬ್ಬಂದಿ ಕರ್ತವ್ಯಪ್ರಜ್ಞೆ ಮೆರೆದಿದ್ದಾರೆ.

ರಾಜ್ಯ ಸರಕಾರದ ಸೂಚನೆ ಮೇರೆಗೆ ನಾಲ್ಕು ದಿನಗಳ ಕಾಲ ಈ ಉಚಿತ ಬಸ್‌ ಸೇವೆ ಅಲ್ಲಲ್ಲಿ ಸಿಲುಕಿಕೊಂಡಿದ್ದವರಿಗೆ ವರದಾನವಾಯಿತು. ಸರಕಾರದ ಆದೇಶದಂತೆ ವಾಯವ್ಯ ಸಾರಿಗೆ ಸಂಸ್ಥೆ ತನ್ನ ವ್ಯಾಪ್ತಿಯ ಧಾರವಾಡ, ಬೆಳಗಾವಿ, ಹಾವೇರಿ, ಗದಗ, ಉತ್ತರ ಕನ್ನಡ ಹಾಗೂ ಬಾಗಲಕೋಟೆ ಜಿಲ್ಲೆಗಳಲ್ಲಿ ಸಿಲುಕಿದ್ದ 4,600 ಪ್ರಯಾಣಿಕರನ್ನು 387 ಬಸ್‌ಗಳ ಮೂಲಕ ತವರು ಜಿಲ್ಲೆಗಳಿಗೆ ಸುರಕ್ಷಿತವಾಗಿ ತಲುಪಿಸುವ ಕಾರ್ಯ ಮಾಡಿದೆ. ಜಿಲ್ಲಾ ಕೇಂದ್ರಗಳಿಗೆ ಆಗಮಿಸಿದ ಪ್ರಯಾಣಿಕರನ್ನು ಆಯಾ ಗ್ರಾಮಗಳಿಗೆ ತಲುಪಿಸುವ ಕೆಲಸ ಆಯಾ ವಿಭಾಗಗಳ ವ್ಯಾಪ್ತಿಯಲ್ಲಿ ನಡೆದಿದೆ. ಸುಮಾರು 600 ಚಾಲನಾ, ತಾಂತ್ರಿಕ ಹಾಗೂ ಅಧಿಕಾರಿಗಳು ಮತ್ತು ಇತರೆ ಸಿಬ್ಬಂದಿ ನಾಲ್ಕು ದಿನಗಳ ಕಾರ್ಯನಿರ್ವಹಿಸಿದ್ದಾರೆ.

ಹೊರಗಡೆಯಿಂದ ಬಂದಿದ್ದೇ ಹೆಚ್ಚು: ಸಂಸ್ಥೆ ವ್ಯಾಪ್ತಿಯ ಆರು ಜಿಲ್ಲೆಗಳಿಂದ ಹೊರ ಜಿಲ್ಲೆಗಳಿಗೆ ಹೋದ ವಲಸಿಗರಿಗಿಂತ ಬಂದವರೇ ಹೆಚ್ಚು. ರಾಜ್ಯದ ವಿವಿಧ ಜಿಲ್ಲೆಗಳಿಂದ 6,481 ಜನರು ಆಗಮಿಸಿದ್ದಾರೆ.

ಬಸ್‌ ನಿಲ್ದಾಣಗಳಲ್ಲಿ ಸ್ಥಾಪಿಸಿದ್ದ ಆರೋಗ್ಯ ತಪಾಸಣಾ ಕೇಂದ್ರಗಳಲ್ಲಿ ವೈದ್ಯಕೀಯ ಸಿಬ್ಬಂದಿ ಪ್ರತಿಯೊಬ್ಬರ ಮಾಹಿತಿ ಸಂಗ್ರಹಿಸಿ ಥರ್ಮಲ್‌ ಸ್ಕ್ರಿನಿಂಗ್‌ಗೆ ಒಳಪಡಿಸಿದ್ದಾರೆ. ಬಂದವರನ್ನೆಲ್ಲಾ ಹೋಂ ಕ್ವಾರಂಟೈನ್‌ಗೆ ಒಳಪಡಿಸಿ ಆರೋಗ್ಯ ಸಲಹೆ ನೀಡುವ ಕೆಲಸ ಮಾಡಿದ್ದಾರೆ. ಆಗಮಿಸಿದ ಇಷ್ಟು ಜನರಲ್ಲಿ ಶೇ.70 ಜನ ಬೆಂಗಳೂರು ಹಾಗೂ ಮಂಗಳೂರು ಜಿಲ್ಲೆಗಳಿಗೆ ದುಡಿಯಲು ಹೋಗಿದ್ದ ಕಾರ್ಮಿಕರೇ ಹೆಚ್ಚು. ಬೆಂಗಳೂರಿನಲ್ಲಿ ನೆಲೆಸಿದ್ದ ವಲಸಿಗರಿಗೆ ಸಂಸ್ಥೆಯ ವಿವಿಧ ವಿಭಾಗಗಳಿಂದ ಬಸ್‌ಗಳನ್ನು ಕಳುಹಿಸಿ ಕರೆದುಕೊಂಡು ಬರುವ ವ್ಯವಸ್ಥೆ ಮಾಡಲಾಗಿತ್ತು.

ಹು-ಧಾ ಜನರೇ ಹೆಚ್ಚು: ಸಂಸ್ಥೆಯ ವ್ಯಾಪ್ತಿಯ ಆರು ಜಿಲ್ಲೆಗಳ ಪೈಕಿ ಬೇರೆ ಜಿಲ್ಲೆಗಳಿಗೆ ಪ್ರಯಾಣ ಮಾಡಿದವರಲ್ಲಿ ಹುಬ್ಬಳ್ಳಿ-ಧಾರವಾಡದವರೇ ಹೆಚ್ಚು. ಕಳೆದ ನಾಲ್ಕು ದಿನಗಳಿಂದ 136 ಬಸ್‌ ಗಳ ಮೂಲಕ ಬರೋಬ್ಬರಿ 2,950 ಜನ ವಿವಿಧ ಜಿಲ್ಲೆಗಳಿಗೆ ಪ್ರಯಾಣ ಮಾಡಿದ್ದು, ಬಹುತೇಕರು ಬೆಂಗಳೂರು, ಮಂಗಳೂರು ಹಾಗೂ ಕಲಬುರಗಿ ಜಿಲ್ಲೆಗಳಿಗೆ ತೆರಳಿದ್ದಾರೆ. ಇಲ್ಲಿಂದಲೇ ಗುಜರಾತನ ಅಹ್ಮದಾಬಾದ್‌ಗೂ ಕೂಡ ಬಸ್‌ ಮೂಲಕ ತೆರಳಿದ್ದಾರೆ. ಕೋವಿಡ್ 19 ಸೋಂಕು ಪ್ರಕರಣಗಳು ಹೆಚ್ಚಿರುವ ರಾಜ್ಯಗಳಿಗೆ ತೆರಳಿದ್ದ ಚಾಲನಾ ಸಿಬ್ಬಂದಿ ಸ್ವಯಂ ಕ್ವಾರಂಟೈನ್‌ ಆಗಿ ಸಂಸ್ಥೆಯ ಪ್ರತ್ಯೇಕ ಸ್ಥಳದಲ್ಲಿ ದಿನಗಳನ್ನು ಕಳೆದು ಪ್ರಯೋಗಾಲಯದ ವರದಿ ನೆಗೆಟಿವ್‌ ಬಂದ ನಂತರ ತಮ್ಮ ಮನೆಗಳಿಗೆ ತೆರಳಿದ್ದಾರೆ. ಬಂದವರಿಗೆ ಉಪಾಹಾರ, ಊಟ, ಬಿಸ್ಕೀಟ್‌, ನೀರು, ಮಾಸ್ಕ್ ನೀಡಿ ವಿವಿಧ ಸಂಘ-ಸಂಸ್ಥೆ ಮಾನವೀಯತೆ ತೋರಿದವು.

ಸರಕಾರದ ಆದೇಶದ ಮೇರೆಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರ ಮಾರ್ಗದರ್ಶನದ ಮೇರೆಗೆ ವಲಸಿಗರನ್ನು ಅವರ ಜಿಲ್ಲೆಗಳಿಗೆ ಸುರಕ್ಷಿತವಾಗಿ ತಲುಪಿಸುವ ಕಾರ್ಯ ಮಾಡಲಾಗಿದೆ. ಸಂಸ್ಥೆಯ ಕಾರ್ಯ ತುರ್ತು ಸೇವೆಯಡಿ ಬರುವುದರಿಂದ ಸೋಂಕಿನ ಭೀತಿಯ ನಡುವೆ ಸಿಬ್ಬಂದಿ ಅಧಿಕಾರಿಗಳು ನಿಯೋಜಿಸಿದ ಕರ್ತವ್ಯ ಹಾಗೂ ಜಿಲ್ಲೆಗಳಿಗೆ ತೆರಳಿ ಪ್ರಯಾಣಿಕರನ್ನು ತಲುಪಿಸುವ ಕೆಲಸ ಮಾಡಿದ್ದಾರೆ.-ಸಂತೋಷಕುಮಾರ, ಮುಖ್ಯ ಸಂಚಾರ ವ್ಯವಸ್ಥಾಪಕ

 

-ಹೇಮರಡ್ಡಿ ಸೈದಾಪುರ

ಟಾಪ್ ನ್ಯೂಸ್

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

prahlad-joshi

BJP; ಈಶ್ವರಪ್ಪ ಅವರು ಬದ್ಧತೆ ಇರುವ ವ್ಯಕ್ತಿ: ಪ್ರಹ್ಲಾದ ಜೋಶಿ

ರೈತರ ಸಂಕಷ್ಟಕ್ಕೆ ನೆರವಾಗದ ರಾಜಕೀಯ ಪಕ್ಷಗಳು ಮತ ಕೇಳಲು ಬಂದರೆ ಛೀಮಾರಿ ಹಾಕಿ: ಕುರುಬೂರು

ರೈತರ ಸಂಕಷ್ಟಕ್ಕೆ ನೆರವಾಗದ ರಾಜಕೀಯ ಪಕ್ಷಗಳು ಮತ ಕೇಳಲು ಬಂದರೆ ಛೀಮಾರಿ ಹಾಕಿ: ಕುರುಬೂರು

ಧಾರವಾಡ: ದೇಶದ ರಾಜಕೀಯದಲ್ಲಿ ಮಹಿಳೆಗೆ ಮಹತ್ವದ ಸ್ಥಾನ

ಧಾರವಾಡ: ದೇಶದ ರಾಜಕೀಯದಲ್ಲಿ ಮಹಿಳೆಗೆ ಮಹತ್ವದ ಸ್ಥಾನ

Belagavi ಟಿಕೆಟ್‌ ಗೊಂದಲ: ಜಗದೀಶ್‌ ಶೆಟ್ಟರ್‌ ದಿಲ್ಲಿಗೆ

Belagavi ಟಿಕೆಟ್‌ ಗೊಂದಲ: ಜಗದೀಶ್‌ ಶೆಟ್ಟರ್‌ ದಿಲ್ಲಿಗೆ

Hubli; ಕೆ.ಎಸ್. ಈಶ್ವರಪ್ಪ ಬಂಡಾಯ ಶೀಘ್ರ ಶಮನ: ಪ್ರಲ್ಹಾದ ಜೋಶಿ

Hubli; ಕೆ.ಎಸ್. ಈಶ್ವರಪ್ಪ ಬಂಡಾಯ ಶೀಘ್ರ ಶಮನ: ಪ್ರಲ್ಹಾದ ಜೋಶಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.