ಮಂಗಳಮುಖಿಯರಿಂದ ಅನೈತಿಕ ದಂಧೆ; ಕಾರ್ಯಾಚರಣೆಗಿಳಿದ ಉಡುಪಿ ಎಸ್ಪಿ
ಇಬ್ಬರು ಪಿಂಪ್ ಪೊಲೀಸ್ ವಶಕ್ಕೆ
Team Udayavani, Dec 16, 2022, 11:32 AM IST
ಉಡುಪಿ: ಸಿಟಿ ಬಸ್ ನಿಲ್ದಾಣ ಸಮೀಪ ಮಂಗಳಮುಖಿಯರನ್ನು ಅನೈತಿಕ ದಂಧೆಯಲ್ಲಿ ತೊಡಗಿಸಿಕೊಳ್ಳುತ್ತಿರುವ ಕುರಿತ ದೂರಿನ ಹಿನ್ನೆಲೆಯಲ್ಲಿ ಡಿ.15ರಂದು ತಡರಾತ್ರಿ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಅಕ್ಷಯ್ ಹಾಕೇ ಮಚ್ಚಿಂದ್ರ ಸ್ವತಃ ತಾವೇ ಕಾರ್ಯಾಚರಣೆ ನಡೆಸಿದ್ದಾರೆ.
ಈ ವೇಳೆ ಇಬ್ಬರು ಪಿಂಪ್ಗಳನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ನಗರದ ಸಿಟಿ ಬಸ್ ನಿಲ್ದಾಣ ಹಾಗೂ ಸರ್ವಿಸ್ ನಿಲ್ದಾಣದ ಸಮೀಪ ಅನೈತಿಕ ದಂಧೆಯಲ್ಲಿ ತೊಡಗಿಸಿಕೊಂಡಿರುವ ಕೆಲವು ಮಂಗಳಮುಖಿಯರು, ವಾಹನಗಳನ್ನು ಅಡ್ಡ ಹಾಕಿ ಸಾರ್ವಜನಿಕರಿಗೆ ತೊಂದರೆ ಕೊಡುತ್ತಾರೆ, ದಾರಿದೀಪವನ್ನು ಒಡೆದು ಹಾಕಿದ್ದಾರೆ ಮತ್ತು ಜನರಿಂದ ಹಣ ವಸೂಲಿ ಮಾಡುತ್ತಾರೆಂಬ ದೂರಿನ ಹಿನ್ನೆಲೆಯಲ್ಲಿ ಎಸ್ಪಿ ಈ ಕಾರ್ಯಾಚರಣೆಗೆ ಇಳಿದಿದ್ದರು. ಸ್ವತಃ ಎಸ್ಪಿಯವರೇ ಸ್ಥಳಕ್ಕೆ ಆಗಮಿಸಿ ಮಂಗಳಮುಖಿಯನ್ನು ಅಲ್ಲಿಂದ ತೆರವುಗೊಳಿಸಲು ಮುಂದಾದರು.
ಎಸ್ಪಿ ಎಂಬುದನ್ನು ತಿಳಿಯದ ಕೆಲ ಮಂಗಳಮುಖಿಯರು ಎಸ್ಪಿ ಜೊತೆ ವಾಗ್ವಾದಕ್ಕೆ ಇಳಿದು ಅವಾಚ್ಯ ಶಬ್ದಗಳಿಂದ ಬೈದರೆನ್ನಲಾಗಿದೆ. ಈ ವೇಳೆ ಸ್ಥಳಕ್ಕೆ ಆಗಮಿಸಿದ ಪೊಲೀಸರು ಎಲ್ಲರನ್ನು ಚದುರಿಸಿದರು.
ಈ ವೇಳೆ ಕೆಲಕಾಲ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಇದೇ ವೇಳೆ ಗ್ರಾಹಕರನ್ನು ರಿಕ್ಷಾದಲ್ಲಿ ಕರೆ ತಂದು ಅನೈತಿಕ ದಂಧೆಯಲ್ಲಿ ತೊಡಗಿಸಿಕೊಳ್ಳುತ್ತಿದ್ದ ಇಬ್ಬರು ಪಿಂಪ್ಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಅವರ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್ ಸೇದಿದ ಆಟಗಾರನ ವಿಡಿಯೋ ವೈರಲ್
ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ
Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು
Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ
Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?