ಪೆರುವಾಯಿ ನಾರಾಯಣ ಭಟ್ಟರಿಗೆ ಪಡ್ರೆ ಚಂದು ಪ್ರಶಸ್ತಿ


Team Udayavani, Feb 24, 2017, 3:50 AM IST

23-KALA-5.jpg

ತೆಂಕುತಿಟ್ಟು ಯಕ್ಷಗಾನ ಪರಂಪರೆಯನ್ನು ಸಮರ್ಥವಾಗಿ ಮುಂದುವರಿಸಲು ಮಾರ್ಗದರ್ಶಿ ಸಂಸ್ಥೆಯಾಗಿ ತಲೆಯೆತ್ತಿ ನಿಂತಿರುವ ಕಾಸರಗೋಡಿನ ಪೆರ್ಲದ ಪಡ್ರೆ ಚಂದು ಸ್ಮಾರಕ ಯಕ್ಷಗಾನ ನಾಟ್ಯ ತರಬೇತಿ ಕೇಂದ್ರಕ್ಕೆ ಇದೀಗ ಹನ್ನೆರಡನೇ ವರ್ಷದ ಸಂಭ್ರಮ. ಯಕ್ಷಗಾನ ಕಲಿಕೆಯ ಬಗೆಗೆ ಆಸಕ್ತಿಯುಳ್ಳವರಿಗೆ ಉಚಿತವಾಗಿ ಊಟ ಹಾಗೂ ವಸತಿಯ ಸಹಿತ ತರಬೇತಿ ಒದಗಿಸುತ್ತಿರುವ ತೆಂಕಿನ ಏಕೈಕ ಕಲಾ ಕೇಂದ್ರವೆಂಬ ಅಗ್ಗಳಿಕೆಯೂ ಈ ಸಂಸ್ಥೆಗಿದೆ. ಖ್ಯಾತ ಯಕ್ಷಗಾನ ಕಲಾವಿದ ಸಬ್ಬಣಕೋಡಿ ರಾಮ ಭಟ್ಟರಿಂದ ಮುನ್ನಡೆಸಲ್ಪಡುತ್ತಿರುವ ಈ ಸಂಸ್ಥೆ ಪ್ರತಿ ವರ್ಷವೂ ತನ್ನ ವಾರ್ಷಿಕೋತ್ಸವದಂದು ಅರ್ಹ ಯಕ್ಷಗಾನ ಕಲಾವಿದರಿಗೆ “ಪಡ್ರೆ ಚಂದು ಪ್ರಶಸ್ತಿ’ಯನ್ನು ನೀಡಿ ಗೌರವಿಸುತ್ತಾ ಬಂದಿದೆ. ಪ್ರಸ್ತುತ ವರ್ಷ ಈ ಗೌರವಕ್ಕೆ ಪಾತ್ರರಾಗಿರುವವರು ಕಟೀಲು ಮೇಳದ ಹಿರಿಯ ಮದ್ದಳೆ ವಾದಕ ಬಿ. ನಾರಾಯಣ ಭಟ್‌ ಪೆರುವಾಯಿ.

ಬಂಟ್ವಾಳ ತಾಲೂಕಿನ ಒಂದು ಮೂಲೆಯಲ್ಲಿರುವ ಪೆರುವಾಯಿಯ ಕಡೆಂಗೋಡ್ಲು ಬರೆಮನೆ ಎಂಬಲ್ಲಿ ಇವರ ಜನನವಾಯಿತು. ತಂದೆ ಮಹಾಲಿಂಗ ಭಟ್‌ ಹಾಗೂ ತಾಯಿ ಮೂಕಾಂಬಿಕಾ. ಓದಿದ್ದು ಪಿಯುಸಿ, ಸೆಳೆದದ್ದು ಯಕ್ಷಗಾನ!  ಹಿರಿಯ ಭಾಗವತ ತೆಂಕಬೈಲು ತಿರುಮಲೇಶ್ವರ ಶಾಸಿŒಗಳೊಡನೆ 1974ರಲ್ಲಿ ಸೊರ್ನಾಡು ಮೇಳದಲ್ಲಿ ತಿರುಗಾಟ ಆರಂಭಿಸಿದ ನಾರಾಯಣ ಭಟ್‌, 1975ರಲ್ಲಿ ಬಲಿಪ ನಾರಾಯಣ ಭಾಗವತರ ಶಿಫಾರಸಿನ ಮೇಲೆ ಕಟೀಲು ಮೇಳಕ್ಕೆ ಪದಾರ್ಪಣೆ ಮಾಡಿದವರು. ಇರಾ ಗೋಪಾಲಕೃಷ್ಣ ಭಾಗವತ, ನೆಡ್ಲೆ ನರಸಿಂಹ ಭಟ್ಟರಂತಹ ದಿಗ್ಗಜರೊಂದಿಗೆ ಮದ್ದಳೆಯ ಪಟ್ಟುಗಳನ್ನು ಅರಿತವರು. ಪರಿಣಾಮವಾಗಿಯೇ 1981ರಿಂದ ಕಟೀಲು ಎರಡನೇ ಮೇಳದಲ್ಲಿ ಪ್ರಧಾನ ಮದ್ದಳೆವಾದಕರಾಗಿ ಸೇವೆ ಸಲ್ಲಿಸುತ್ತಾ ಬಂದಿರುವವರು.

ಪಡ್ರೆ ಚಂದು, ಕೇದಗಡಿ ಗುಡ್ಡಪ್ಪ ಗೌಡ, ಬಣ್ಣದ ಮಾಲಿಂಗ, ಅಳಿಕೆ ರಾಮಯ್ಯರೈ, ಪೆರುವಾಯಿ ನಾರಾಯಣ ಶೆಟ್ಟಿ ಮೊದಲಾದ ಕಲಾವಿದರ ಒಡನಾಟ ಇವರನ್ನು ಮಾಗಿಸಿತು ಎಂಬುದರಲ್ಲಿ ಸಂಶಯವಿಲ್ಲ. ಹಲವಾರು ಕಡೆಗಳಲ್ಲಿ ಹಿಮ್ಮೇಳ ವಾದನದ ತರಗತಿಯನ್ನೂ ನಡೆಸಿ ಶಿಷ್ಯರನ್ನೂ ರೂಪಿಸಿದ ಹೆಗ್ಗಳಿಕೆ ಇವರದು. ಇವರಿಗೆ ಪಡ್ರೆ ಚಂದು ಪ್ರಶಸ್ತಿ ಅರ್ಹವಾಗಿಯೇ ಒಲಿದು ಬಂದಿದೆ.

ಪೂಕಳರಿಗೆ ಅಡ್ಕಸ್ಥಳ ಪ್ರಶಸ್ತಿ 
ಯಕ್ಷ ಗಾನ ಕೇಂದ್ರದ ವಾರ್ಷಿಕ ಉತ್ಸವ ದಂದು ಅಡ್ಕಸ್ಥಳ ಪ್ರಶಸ್ತಿ ಯನ್ನು ಹಿರಿಯ ಕಲಾವಿದ ಪೂಕಳ ಲಕ್ಷ್ಮೀನಾರಾಯಣ ಭಟ್ಟರಿಗೆ ನೀಡಲಾಗುತ್ತಿದೆ. ಖ್ಯಾತ ಅರ್ಥಧಾರಿ ಪೂಕಳ ಕೃಷ್ಣ ಭಟ್‌ ಹಾಗೂ ಶಂಕರಿ ಅಮ್ಮನವರ ಪುತ್ರನಾದ ಇವರು ಮೂವತ್ತೈದಕ್ಕೂ ಹೆಚ್ಚು ವರ್ಷಗಳಿಂದ ಕಲಾಸೇವೆಗೈಯುತ್ತಿದ್ದಾರೆ. ಪ್ರೇಕ್ಷಕರ, ಕಲಾವಿದರ, ಸಂಘಟಕರ ಹೀಗೆ ಎಲ್ಲರ ಮನಗೆದ್ದ ಈ ಕಲಾವಿದನಿಗೆ ಈ ಬಾರಿಯ ಅಡ್ಕಸ್ಥಳ ಪ್ರಶಸ್ತಿ ದೊರೆತಿದೆ. ಇದೇ ಸಂದರ್ಭದಲ್ಲಿ ಖ್ಯಾತ ಮೃದಂಗ ವಿದ್ವಾನ್‌ ಶಂಕರ ಭಟ್‌ ಕುಕ್ಕಿಲ ಅವರಿಗೆ ವಿಶೇಷ ಪ್ರಶಸ್ತಿ ನೀಡಲಾಗುತ್ತದೆ.

ಪಡ್ರೆ ಚಂದು ಸ್ಮಾರಕ ಯಕ್ಷಗಾನ ನಾಟ್ಯ ತರಬೇತಿ ಕೇಂದ್ರ     ಪೆರ್ಲದಲ್ಲಿ ಫೆಬ್ರವರಿ 25ರಂದು  ನಡೆಯಲಿದ್ದು, ಪ್ರಶಸ್ತಿ ಪ್ರದಾನ ಸಮಾರಂಭ ಸಹಿತ ವಿವಿಧ ಕಾರ್ಯಕ್ರಮಗಳು, ಯಕ್ಷಗಾನ ಪ್ರದರ್ಶನಗಳು ಜರಗಲಿವೆ.

ರಾಕೇಶ್‌ ಕುಮಾರ್‌ ಕಮ್ಮಜೆ

ಟಾಪ್ ನ್ಯೂಸ್

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ದೇಶಾಭಿಮಾನ ಸಾರುವ ಮಾನಸಗಂಗಾ

ದೇಶಾಭಿಮಾನ ಸಾರುವ ಮಾನಸಗಂಗಾ

karakushala-

ಪುಟ್ಟಕರಗಳಿಂದ ಮೂಡಿದ ಕರಕುಶಲ ಕಲಾಕೃತಿಗಳು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.