ಪ್ರತಿಭಾ ವಿಕಸನದಲ್ಲಿ ಸಂಭ್ರಮಿಸಿದ ಎಳೆಯರು


Team Udayavani, May 12, 2017, 3:45 AM IST

11-KALA-4.jpg

ಮಕ್ಕಳು ಇಡೀ ವಿಶ್ವದ ಆಸ್ತಿ ಎಂದರೆ ತಪ್ಪಾಗಲಾರದು. ಹಾಗಾಗಿ ಎಳೆಯರಿಗೆ ಉತ್ತಮವಾದ ಶಿಕ್ಷಣದೊಂದಿಗೆ ಸರಿಯಾದ ಮಾರ್ಗದರ್ಶನ ದೊರಕಿದಾಗ ವಿಶ್ವವೇ ಶಾಂತಿ, ಸಮೃದ್ಧಿಯಿಂದ ಇರಬಲ್ಲುದು. ಎಳೆಯರಲ್ಲಿ ಸಹಜವಾಗಿ ಅನುಕರಣಶೀಲತೆ ಮತ್ತು ಸೃಜನಶೀಲ ಮನೋಭಾವವಿರುವುದರಿಂದ ಹಿರಿಯರಾದ ನಾವು ಅದಕ್ಕೆ ಪ್ರೋತ್ಸಾಹ ನೀಡಿದ್ದೇ ಆದಲ್ಲಿ ಅದಕ್ಕಿಂತ ದೊಡ್ಡ ಕೊಡುಗೆ ಇನ್ನೊಂದಿಲ್ಲ. ಬೇಸಗೆ ಶಿಬಿರಗಳಲ್ಲಿ ಇಂತಹ ಅವಕಾಶವಿರುತ್ತದೆ. 

ತೀರಾ ಗ್ರಾಮೀಣ ಭಾಗದ ಎಳೆಯರಿಗೂ ಇಂತಹ ಅವಕಾಶ ಸಿಗಬೇಕೆನ್ನುವ ದೃಷ್ಟಿಯಿಂದ ಬ್ರಹ್ಮಾವರ ಸಮೀಪದ ಪೇತ್ರಿಯ ವಿದ್ಯಾ ಟ್ಯುಟೋರಿಯಲ್‌ ಕಾಲೇಜಿನಲ್ಲಿ ಮೂರು ವರುಷದಿಂದ ಹದಿನಾರು ವರುಷ ವಯೋಮಾನದ  ಮಕ್ಕಳಿಗೆ ಹತ್ತು ದಿನಗಳ ಪ್ರತಿಭಾ ವಿಕಸನ ಶಿಬಿರವನ್ನು ಆಯೋಜಿಸಿದ್ದರು. ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಂಪನ್ಮೂಲ ವ್ಯಕ್ತಿಗಳಿಂದ ಭರತನಾಟ್ಯ, ಸಂಗೀತ, ಚಿತ್ರಕಲೆ, ಪೇಪರ್‌ ಕ್ರಾಪ್ಟ್, ಕ್ಲೇ ಮಾಡೆಲ್‌, ಪಾಟ್‌ ಪೈಂಟಿಂಗ್‌, ಯೋಗ, ಶ್ಲೋಕ, ಕರಾಟೆ, ಒರಿಗಾಮಿ, ಭಾಷಣ ಕಲೆ ಮುಂತಾದವುಗಳ ಬಗ್ಗೆ ಎಳೆಯರ ಮನಸ್ಸಿಗೆ ಮುದ ನೀಡುವಂತೆ ತರಬೇತಿ ನೀಡಲಾಯಿತು. ಜತೆಗೆ ಪ್ರತಿದಿನ ಸಾಮಾನ್ಯ ಜ್ಞಾನ ವೃದ್ಧಿಗಾಗಿ ಪರಿಸರದ ನರ್ಸರಿ, ಕಾರ್ಖಾನೆ, ಐತಿಹಾಸಿಕ ಸ್ಥಳಗಳ ಸಂದರ್ಶನ ಮತ್ತು ಉರಗ ತಜ್ಞ ಗುರುರಾಜ ಸನಿಲ್‌ ಅವರಿಂದ ಹಾವು-ನಾವು  ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು. 

ಶಿಬಿರದ ಕೊನೆಯ ದಿನ ಎಳೆಯರು ತಾವು ಕಲಿತ ಸಂಗೀತ, ಭರತನಾಟ್ಯ, ಕರಾಟೆ, ಕಿರು ಪ್ರಹಸನ, ಯೋಗ, ಭಾಷಣ ಕಲೆ ಮುಂತಾದವು ಗಳನ್ನು ಅತಿಥಿ ಗಣ್ಯರ, ಪೋಷಕರ, ಪಾಲಕರ ಮತ್ತು ಪ್ರೇಕ್ಷಕರ ಮುಂದೆ ಪ್ರದರ್ಶಿಸುವುದರೊಂದಿಗೆ ಸಭಾಂಗಣದ ಅಂಚಿನಲ್ಲಿ ತಾವು ರಚಿಸಿದ ಚಿತ್ರಕಲೆ, ಮುಖವಾಡ, ಪಾಟ್‌ ಪೈಂಟಿಂಗ್‌, ಕರಕುಶಲ ವಸ್ತುಗಳನ್ನು ಕಲಾತ್ಮಕವಾಗಿ ಜೋಡಿಸಿ ತಮ್ಮ ಪ್ರತಿಭೆಗಳನ್ನು ಅನಾವರಣಗೊಳಿಸಿದ್ದು ಕಂಡಾಗ, ಗ್ರಾಮೀಣ ಭಾಗದ ಎಳೆಯರಿಗೋಸ್ಕರ ನಡೆದ ಈ ಶಿಬಿರ ನಿಜವಾಗಿಯೂ ಅರ್ಥಪೂರ್ಣ ವೆನಿಸಿತು. ಕಳೆದ ಮೂರು ವರುಷಗಳಿಂದ ಈ ಶಿಬಿರವನ್ನು ಆಯೋಜಿಸುತ್ತಿರುವ ಈ ಕಾಲೇಜಿನ ಸಂಚಾಲಕರಾದ ಕಮಲಾಕ್ಷ ಹೆಬ್ಟಾರ್‌, ಸಹನಾ ಕೆ. ಹೆಬ್ಟಾರ್‌, ಪ್ರಸನ್ನ ಪಿ. ಭಟ್‌ ಮತ್ತು ಬಳಗವು, ಗ್ರಾಮೀಣ ಭಾಗದಲ್ಲಿನ ಎಳೆಯರನ್ನು ಯಾವುದೇ ಪ್ರೋತ್ಸಾಹಿಸುತ್ತಿರುವುದು ಅಭಿನಂದನೀಯ.

ಕೆ. ದಿನಮಣಿ ಶಾಸ್ತ್ರೀ

ಟಾಪ್ ನ್ಯೂಸ್

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ದೇಶಾಭಿಮಾನ ಸಾರುವ ಮಾನಸಗಂಗಾ

ದೇಶಾಭಿಮಾನ ಸಾರುವ ಮಾನಸಗಂಗಾ

karakushala-

ಪುಟ್ಟಕರಗಳಿಂದ ಮೂಡಿದ ಕರಕುಶಲ ಕಲಾಕೃತಿಗಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.