ದ್ವಿತೀಯ ವಾರ್ಷಿಕೋತ್ಸವ ಸಂಭ್ರಮ:ಬ್ರಾಮರೀ ಯಕ್ಷಮಿತ್ರರು ವಾಟ್ಸಪ್‌ ಬಳಗ


Team Udayavani, Aug 18, 2017, 9:20 AM IST

18-KALA-7.jpg

ಆಧುನಿಕ ಸಂವಹನ ತಂತ್ರಜ್ಞಾನದ ಉತ್ಪನ್ನವಾದ ವಾಟ್ಸಾಪ್‌ ಇಂದು ಪ್ರಬಲ ಮಾಹಿತಿ ಮಾಧ್ಯಮವಾಗಿ ಗುರುತಿಸಿಕೊಂಡಿದೆ. ಕ್ಷಣಾರ್ಧದಲ್ಲಿ ಲಕ್ಷಾಂತರ ಮಂದಿಗೆ ಸಂದೇಶ ಅಥವಾ ಫೋಟೋ ಕಳಿಸಬಲ್ಲ ವಾಟ್ಸಾಪ್‌ ಇಂದು ಎಲ್ಲ ವರ್ಗದ ಜನರ ನಡುವೆ ಜನಪ್ರಿಯವಾಗಿದೆ. ಯಕ್ಷಗಾನವೂ ವಾಟ್ಸಾಪ್‌ನ ಪ್ರಭಾವಕ್ಕೆ ಒಡ್ಡಿಕೊಂಡಿದೆ. ವಾಟ್ಸಾಪ್‌ನಲ್ಲಿ ಯಕ್ಷಗಾನ ಸಂಬಂಧಿ ಗುಂಪುಗಳು ಗಮನಾರ್ಹ ಪ್ರಮಾಣದಲ್ಲಿವೆ. ಒಂದು ಗುಂಪಿನಲ್ಲಿ ತಲಾ 256 ಮಂದಿ ಸದಸ್ಯರನ್ನು ಹೊಂದಿರಬಲ್ಲ ಈ ಸಾಮಾಜಿಕ ವೇದಿಕೆಯಲ್ಲಿ ಯಕ್ಷಗಾನಕ್ಕೆ ಮೀಸಲಾದ ಸಾವಿರಕ್ಕೂ ಮಿಕ್ಕು ಗುಂಪುಗಳಿವೆ.

ಇಂಥ ಯಕ್ಷಗಾನ ವಾಟ್ಸಾಪ್‌ ಗುಂಪುಗಳಲ್ಲಿ ಬ್ರಾಮರೀ ಯಕ್ಷಮಿತ್ರರು (ರಿ.) ಮಂಗಳೂರು ಒಂದು. 2015ರ ಫೆಬ್ರವರಿ 16ರಂದು ವಿನಯಕೃಷ್ಣ ಕುರ್ನಾಡ್‌ ಅವರಿಂದ “ಯಕ್ಷಮಿತ್ರರು’ ಎಂಬ ಹೆಸರಿನಲ್ಲಿ ವಾಟ್ಸಾಪ್‌ ಗುಂಪು ಆಗಿನ ನಿಯಮದಂತೆ ನೂರು ಮಂದಿ ಸದಸ್ಯರನ್ನೊಳಗೊಂಡು ಸ್ಥಾಪಿಸಲ್ಪಟ್ಟಿತು. ಇದೀಗ ಹೊಸ ನಿಯಮದಂತೆ ಬಳಗ ಹಲವಾರು ಸದಸ್ಯರ ಸೇರ್ಪಡೆಯೊಂದಿಗೆ ವಿಸ್ತಾರವಾಗಿ ಬೆಳೆದಿದೆ. ಸಮಾನ ಆಸಕ್ತಿಯ ಗೆಳೆಯರೆಲ್ಲ ಒಂದೆಡೆ ಸೇರುವಂತೆ ಮಾಡಿದೆ ಈ ವೇದಿಕೆ. “ಯಕ್ಷಮಿತ್ರರು’ ಅನ್ನುವ ಹೆಸರಲ್ಲಿ ಹಲವಾರು ಬಳಗಗಳು ಇರುವ ಕಾರಣಕ್ಕೆ ಹೊಸ ನಾಮಧೇಯ ಬೇಕೆಂಬ ಹಂಬಲದೊಂದಿಗೆ “ಬ್ರಾಮರೀ ಯಕ್ಷಮಿತ್ರರು’ ಮಂಗಳೂರು ಎಂಬುದಾಗಿ ನಾಮಕರಣ ಮಾಡಿ ನೋಂದಾಯಿಸಲಾಗಿದೆ.

ಯಕ್ಷವೈಭವದ ಕುರಿತು
ಬಳಗದ ಸದಸ್ಯರಲ್ಲೊಬ್ಬರು ಕಳೆದ ವರ್ಷ ಯಕ್ಷಗಾನ ಸಂಬಂಧಿ ಮಾಹಿತಿ ಹಂಚೋಣಕ್ಕಷ್ಟೇ ಸೀಮಿತವಾಗುವ ಬದಲು ಯಕ್ಷಗಾನ ಪ್ರದರ್ಶನ ಸಂಘಟಿಸಬಾರದೇಕೆ ಎಂಬ ಆಲೋಚನೆಯನ್ನು ಗುಂಪಿನಲ್ಲಿ ಹರಿಯಬಿಟ್ಟುದು “ಯಕ್ಷ ವೈಭವ’ವನ್ನು ಸಂಘಟಿಸುವುದಕ್ಕೆ ನಾಂದಿಯಾಯಿತು. ಬಳಗದ ಸರ್ವ ಸದಸ್ಯರ ಪ್ರೋತ್ಸಾಹ, ಹಿತೈಷಿ ಕಲಾಪೋಷಕರ ಕೃಪೆ, ಕಲಾವಿದರ ಸಹಕಾರದೊಂದಿಗೆ 2016ರ ಆಗÓr… 20ರಂದು ಮಂಗಳೂರಿನ ಪುರಭವನದಲ್ಲಿ ಯಶಸ್ವೀ ಯಕ್ಷಗಾನ ಪ್ರದರ್ಶನ ನಡೆಯಿತು. ಈ ಸಂದರ್ಭದಲ್ಲಿ ಹಿರಿಯ ಕಲಾವಿದ ಸಂಪಾಜೆ ಶೀನಪ್ಪ ರೈ ಅವರಿಗೆ “ಭಾÅಮರೀ ಯಕ್ಷಮಣಿ’ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು. ಅದನ್ನು ಮುಂದುವರಿಸುವ ನಿಟ್ಟಿನಲ್ಲಿ ಈ ಬಾರಿಯೂ ಯಕ್ಷ ವೈಭವ ಆಗಸ್ಟ್‌ 19, 2017ರಂದು ರಾತ್ರಿ ಎಂಟರಿಂದ ಮಂಗಳೂರಿನ ಪುರಭವನದಲ್ಲಿ ತೆಂಕುತಿಟ್ಟಿನ ಸುಪ್ರಸಿದ್ಧ ಕಲಾವಿದರ ಕೂಡುವಿಕೆಯಲ್ಲಿ ನಾಲ್ಕು ಪೌರಾಣಿಕ ಪ್ರಸಂಗಗಳೊಂದಿಗೆ ಆಯೋಜನೆಗೊಂಡಿದೆ. ಈ ಸಂದರ್ಭದಲ್ಲಿ ಯಕ್ಷಗಾನ ಪ್ರಸಂಗಕರ್ತ, ಛಾಂದಸ,  ಹಿಮ್ಮೇಳದ ಸವ್ಯಸಾಚಿ ಕಲಾವಿದ  ಗಣೇಶ್‌ ಕೊಲೆಕಾಡಿ ಅವರಿಗೆ ಭಾÅಮರೀ ಯಕ್ಷಮಣಿ ಪ್ರಶಸ್ತಿ ನೀಡಿ ಗೌರವಿಸಲಾಗುವುದು. 

ಗಣೇಶ್‌ ಕೊಲೆಕಾಡಿಯವರು ಛಂದಸ್ಸಿನಲ್ಲಿ ಅಪಾರ ಸಾಧನೆ ಮಾಡಿದವರು. ಅಭಿನವ ನಾಗವರ್ಮ  ಬಿರುದಾಂಕಿತರಾದ  ಡಾ| ಶಿಮಂತೂರು ನಾರಾಯಣ ಶೆಟ್ಟರ ಶಿಷ್ಯರಾಗಿ, ಯಕ್ಷಗಾನ ಛಂದಸ್ಸುಗಳ ಕುರಿತು ಆಳವಾದ ಸಂಶೋಧನೆ ಮಾಡಿದವರು. 40ಕ್ಕೂ ಹೆಚ್ಚು ಯಕ್ಷಗಾನ ಪ್ರಸಂಗ ರಚನೆ, ಹಿಮ್ಮೇಳ ಹಾಗೂ ಮುಮ್ಮೇಳಗಳ ಸಮರ್ಥ ಕಲಾವಿದರಾಗಿಯೂ ಪ್ರಸಿದ್ಧಿ ಗಳಿಸಿದವರು. ನೂರಾರು ವಿದ್ಯಾರ್ಥಿಗಳಿಗೆ ಹಿಮ್ಮೇಳ ಹಾಗೂ ಛಂದಸ್ಸನ್ನು ಉಚಿತವಾಗಿ  ಕಲಿಸುತ್ತಿದ್ದಾರೆ.

ಪ್ರಸಂಗ ರಚನೆ, ಯಕ್ಷಗಾನ ಕಮ್ಮಟಗಳಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸುವಿಕೆ ಮುಂತಾದ ಯಕ್ಷಗಾನೀಯ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ, ಅಪಾರ ಶಿಷ್ಯವರ್ಗವನ್ನು ಹೊಂದಿರುವ ಅಪೂರ್ವ ಸಾಧಕರು ಕೊಲೆಕಾಡಿಯವರು. 

ಯಕ್ಷ ವೈಭವದ ಇದೇ ಸಂದರ್ಭದಲ್ಲಿ ಯಕ್ಷಗಾನದ ಬಣ್ಣದಮನೆಯಲ್ಲಿ ಸೇವೆಗೈಯುತ್ತಿರುವ ನೇಪಥ್ಯ ಕಲಾವಿದರು ಹಾಗೂ ರಂಗ ಸಹಾಯಕ ಕಟೀಲು ಮೇಳದ ಶಿವಣ್ಣ ಸರಪಾಡಿ ಹಾಗೂ ಬಪ್ಪನಾಡು ಮೇಳದ ಕೊರಗಪ್ಪ ಇವರನ್ನೂ ಗೌರವಿಸಲಾಗುವುದು. 

ಎಂ. ಶಾಂತರಾಮ ಕುಡ್ವ

ಟಾಪ್ ನ್ಯೂಸ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ದೇಶಾಭಿಮಾನ ಸಾರುವ ಮಾನಸಗಂಗಾ

ದೇಶಾಭಿಮಾನ ಸಾರುವ ಮಾನಸಗಂಗಾ

karakushala-

ಪುಟ್ಟಕರಗಳಿಂದ ಮೂಡಿದ ಕರಕುಶಲ ಕಲಾಕೃತಿಗಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.