ಕಷ್ಟಪಟ್ಟರೆ ಸಿಗಲಿದೆ ಸುಖದ ಸುಪ್ಪತ್ತಿಗೆ
Team Udayavani, Feb 7, 2017, 1:25 PM IST
ಜಮಖಂಡಿ: ಬದಲಾದ ಸನ್ನಿವೇಶದಲ್ಲಿ ಮಹಿಳೆಗೆ ಶಿಕ್ಷಣ ಮತ್ತು ಉದ್ಯೋಗ ಅಗತ್ಯಗಳು ಅವಶ್ಯವಾಗಿವೆ. ಕೌಟುಂಬಿಕ ಜವಾಬ್ದಾರಿ ಹಾಗೂ ಕರ್ತವ್ಯದ ಹುದ್ದೆಯ ಹೊಣೆ ಸಮರ್ಪಕವಾಗಿ ನಿರ್ವಹಿಸುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಜಿಎಲ್ಬಿಸಿ ಕಾರ್ಯನಿರ್ವಾಹಕ ಎಂಜಿನಿಯರ್ ಪದ್ಮಾ ಜೋಶಿ ಹೇಳಿದರು.
ನಗರದ ಬಿಎಲ್ಡಿಇ ಸಂಸ್ಥೆಯ ಕಾಲೇಜಿನ ಸಭಾಭವನದಲ್ಲಿ ವಿದ್ಯಾರ್ಥಿನಿಯರ ವಸತಿ ನಿಲಯದ ವಾರ್ಷಿಕೋತ್ಸವ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು. ಜೀವನ ಸರಳವಿಲ್ಲ. ಎಲ್ಲರಿಗೂ ಸುಖದ ಸುಪತ್ತಿಗೆ ಸಿಗುವುದಿಲ್ಲ. ತಮ್ಮ ಎಲ್ಲ ಶಕ್ತಿ, ಸಾಮರ್ಥ್ಯವನ್ನು ಒಗ್ಗೂಡಿಸಿ ಕೆಲಸಕ್ಕೆ ಒಳ್ಳೆಯ ಪ್ರತಿಫಲ ಲಭಿಸುತ್ತದೆ.
ಸಹನಶೀಲತೆಯ ಭಾವನೆ ಮೂಲಕ ಶ್ರಮವಹಿಸಿ ದುಡಿಯುವ ಮನಸ್ಸು ಬೆಳೆಸಿಕೊಳ್ಳಬೇಕು. ಇಂದಿನ ಗಳಿಕೆ ಮುಂದಿನ ಜೀವನಕ್ಕೆ ಬುತ್ತಿ ಎಂಬ ಸಂಗತಿಯನ್ನು ಅರಿಯಬೇಕು. ಸಮಯ ಕಳೆಯಲು, ಕಾಲ ಹರಣ ಮಾಡಲು ವಸತಿ ನಿಲಯದಲ್ಲಿ ವಿದ್ಯಾರ್ಥಿಗಳು ಇರಬಾರದು.
ವಿದ್ಯಾರ್ಥಿ ಜೀವನದಲ್ಲಿ ಅರಿತು ಕಲಿತದ್ದು ಭವಿಷ್ಯದ ದಿನಗಳಲ್ಲಿ ಪ್ರಯೋಜನಕ್ಕೆ ಬರುತ್ತದೆ. ಗುರಿ ಸಾಧನೆಯಲ್ಲಿ ಸದಾ ಗಮನ ಇರಬೇಕು ಎಂದು ಹೇಳಿದರು. ಪ್ರಾಚಾರ್ಯ ಡಾ| ಎಸ್.ಸಿ. ಹಿರೇಮಠ ಮಾತನಾಡಿ, ವಿದ್ಯಾರ್ಥಿನಿಯರು ಒಳ್ಳೆಯ ಹುದ್ದೆಗಳಲ್ಲಿ ಇರಬೇಕು.
ವಿದ್ಯಾರ್ಥಿನಿಯರು ತಮ್ಮ ವೈಯಕ್ತಿಕ, ಕೌಟುಂಬಿಕ ಮತ್ತು ವೃತ್ತಿ ಬದುಕಿನಲ್ಲಿ ಯಶಸ್ಸು ಕಾಣಬೇಕೆಂಬ ಕನಸು ನಮ್ಮದಾಗಿದೆ ಎಂದರು. ಅನಿತಾ ಶಹಾ ಅಧ್ಯಕ್ಷತೆ ವಹಿಸಿದ್ದರು. ಪ್ರಾಚಾರ್ಯ ನಾರಾಯಣಕರ, ವಸತಿ ನಿಲಯದ ಡೀನ್ ಪೂರ್ಣಿಮಾ ಸುರಪುರ ಇದ್ದರು.
ವಸತಿ ನಿಲಯ ವಿದ್ಯಾರ್ಥಿನಿಯರಾದ ಅಕ್ಷತಾ ಕಸ್ತೂರಿ, ಸಂಗೀತಾ ಚೌಧರಿ, ಪ್ರಿಯಾಂಕಾ ಬೋಸಲೆ, ಸುಪ್ರಿಯಾ ಸಂಕೋನಟ್ಟಿ ತಮ್ಮ ಅನಿಸಿಕೆ ಹಂಚಿಕೊಂಡರು. ಶ್ರೇಯಾ ಘಂಟಿ ಪ್ರಾರ್ಥಿಸಿದರು. ಸಾದ್ವಿ ಪೂಜಾರ ಸ್ವಾಗತಿಸಿದರು. ಪ್ರಿಯಾಂಕಾ ಮಾನೆ ಅತಿಥಿಗಳನ್ನು ಪರಿಚಯಿಸಿದರು. ಸುಪ್ರಿಯಾ ಹರಳೆ, ಪವಿತ್ರಾ ಮುನ್ಯಾಳ, ಸಹನಾ ಬಂಟವಾಳಕರ ನಿರೂಪಿಸಿದರು. ಪ್ರೀತಿ ಕೊಟ್ಟಲಗಿ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್ ಈಗ “ಸಂಯುಕ್ತ’
Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್
Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ
Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು
ತಾಕತ್ತಿದ್ದರೆ ಯತ್ನಾಳ್ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್
MUST WATCH
ಹೊಸ ಸೇರ್ಪಡೆ
PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು
Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ
Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ