ಲವ್ವಿಗೆ ಶುಕ್ರದೆಸೆ, ರಾಜಕೀಯಕ್ಕೆ ವಕ್ರದೆಸೆ


Team Udayavani, Jan 10, 2017, 11:09 AM IST

shukra-desde.jpg

ಹೊಸಬರಿಗೆ ಶುಕ್ರದೆಸೆ ಶುರುವಾಗಿದೆ. ಹೊಸಬರ ಹೊಸ ಕಾನ್ಸೆಪ್ಟ್ನ ಸಿನಿಮಾಗಳು ಚಿತ್ರಮಂದಿರಗಳಲ್ಲಿ ಗಟ್ಟಿಯಾಗಿ ನಿಲ್ಲುತ್ತಿವೆ, ಗೆಲ್ಲುತ್ತಿವೆ. ಹಾಗಾಗಿ, ಶುಕ್ರದೆಸೆ ಸ್ಟಾರ್ಟ್‌ ಎನ್ನಬಹುದು. ಈಗ ಈ ಶುಕ್ರದೆಸೆಯೇ ಸಿನಿಮಾವೊಂದರ ಟೈಟಲ್‌ ಆಗಿದೆ. ಅದು “ಶುಕ್ರದೆಸೆ ಸ್ಟಾರ್ಟ್‌’. ಹೌದು, “ಶುಕ್ರದೆಸೆ ಸ್ಟಾರ್ಟ್‌’ ಎನ್ನುವ ಸಿನಿಮಾವೊಂದು ಆರಂಭವಾಗುತ್ತಿದೆ. ಜೋಸೆಫ್ ನೀನಾಸಂ ಎನ್ನುವವರು ಈ ಸಿನಿಮಾ ಮೂಲಕ ನಿರ್ದೇಶಕರಾಗುತ್ತಿದ್ದಾರೆ.

ಇವರಿಗೆ ನಿರ್ದೇಶನ ಹೊಸದು. ಆದರೆ, ರಂಗಭೂಮಿ ಹೊಸದಲ್ಲ. ಅನೇಕ ವರ್ಷಗಳಿಂದ ರಂಗಭೂಮಿಯಲ್ಲಿ ತೊಡಗಿಸಿಕೊಂಡಿರುವ ಜೋಸೆಫ್ ಅನೇಕ ನಾಟಕಗಳನ್ನು ನಿರ್ದೇಶಿಸಿದ್ದಾರೆ. ಕನ್ನಡ, ಮಲಯಾಳಂ, ಹಿಂದಿ, ಇಂಡೋ ಯುರೋಪಿಯನ್‌ ಮುಂತಾದ ಹಲವು ಸಿನಿಮಾ ಕ್ಷೇತ್ರಗಳಲ್ಲಿ ಜೋಸೆಫ್ ಗುರುತಿಸಿಕೊಂಡಿದ್ದಾರೆ. ಅಲ್ಲದೇ, ಇಂದು ಕನ್ನಡ ಚಿತ್ರರಂಗದಲ್ಲಿ ಬಿಝಿ ನಟರಾಗಿರುವ ಅನೇಕರಿಗೆ ನಟನೆಯ ತಗರಬೇತಿ ನೀಡಿದ್ದಾರೆ.

ಇಂತಿಪ್ಪ ಜೋಸೆಫ್ ಈಗ “ಶುಕ್ರದೆಸೆ ಸ್ಟಾರ್ಟ್‌’ ಸಿನಿಮಾ ಮೂಲಕ ನಿರ್ದೇಶಕರಾಗುತ್ತಿದ್ದಾರೆ. ಹೋಬಳಿಯೊಂದರಲ್ಲಿ ನಡೆಯುವ ಘಟನೆಗಳನ್ನಿಟ್ಟುಕೊಂಡು ಕಥೆ ಹೆಣೆದಿದ್ದು, ರಾಜಕೀಯ ಹಿನ್ನೆಲೆಯಲ್ಲಿ ಸಾಗುವ ಲವ್‌ಸ್ಟೋರಿಯೊಂದನ್ನು ಹೇಳಲು ಹೊರಟಿದ್ದಾರೆ. ಸಣ್ಣ ಊರಿನಲ್ಲಿ ನಡೆಯುವ ರಾಜಕೀಯ ಸಂಘರ್ಷದಲ್ಲಿ ಅಮಾಯಕರ ಜೀವನ ಹೇಗೆ ಹಾಳಾಗುತ್ತದೆ. ಆ ರಾಜಕೀಯ ಕಿಚ್ಚಿಗೆ ಹೇಗೆ ಅವರು ತಮ್ಮ ಜೀವನ ಕಳೆದುಕೊಳ್ಳುತ್ತಾರೆಂಬ ಅಂಶದ ಜೊತೆಗೆ ಅಮಾಯಕರ ರಿವೆಂಜ್‌ಸ್ಟೋರಿಯನ್ನು ಇಲ್ಲಿ ಹೇಳಲಾಗಿದೆಯಂತೆ.

“ಚಿತ್ರದಲ್ಲಿ ಕಥೆಯೇ ಹೀರೋ. ಹೊಸ ಬಗೆಯ ನಿರೂಪಣೆಯೊಂದಿಗೆ ಈ ಸಿನಿಮಾವನ್ನು ಕಟ್ಟಿಕೊಡಲಿದ್ದೇನೆ. ಅದಕ್ಕಾಗಿ ಸಾಕಷ್ಟು ಪೂರ್ವತಯಾರಿ ಕೂಡಾ ನಡೆಯುತ್ತಿದೆ’ ಎನ್ನುತ್ತಾರೆ ಜೋಸೆಫ್. ಅನಿಲ್‌ ನಾಯಕರಾಗಿ ನಟಿಸುತ್ತಿದ್ದಾರೆ. ಇವರಿಗೆ ಕನ್ನಡದಲ್ಲಿ ಇದು ಮೊದಲ ಸಿನಿಮಾ.

ಮುಂಬೈನ ಅನುಪಮ್‌ ಖೇರ್‌ ಸಂಸ್ಥೆಯಲ್ಲಿ ನಟನಾ ತರಬೇತಿ ಪಡೆದಿರುವ ಅನಿಲ್‌ ಈಗಾಗಲೇ ತಮಿಳು ಸಿನಿಮಾವೊಂದರಲ್ಲಿ ನಟಿಸಿದ್ದಾರೆ. ಅಮೃತಾ ಈ ಚಿತ್ರದ ನಾಯಕಿ. ಕನ್ನಡ ಮೂಲದ ಮುಂಬೈ ಬೆಡಗಿ ಅಮೃತಾಗೂ ಇಲ್ಲಿ ಒಳ್ಳೆಯ ಪಾತ್ರವಿದೆಯಂತೆ. ಚಿತ್ರವನ್ನು ವಿಮಲ್‌ ಜೈನ್‌ ಹಾಗೂ ಅರ್ಜುನ್‌ ಗೌಡ ನಿರ್ಮಿಸುತ್ತಿದ್ದು, ಬಿಜಿ ಬಾಳ್‌ ಅವರ ಸಂಗೀತ ಚಿತ್ರಕ್ಕಿದೆ. 

ಟಾಪ್ ನ್ಯೂಸ್

Mangaluru: ಕಳವು ಮಾಡಿದ ಯುವಕನಿಗೆ ಹಲ್ಲೆ… ವೀಡಿಯೋ ವೈರಲ್‌

Mangaluru: ಕಳವು ಮಾಡಿದ ಯುವಕನಿಗೆ ಹಲ್ಲೆ… ವೀಡಿಯೋ ವೈರಲ್‌

yatnal

LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Mangaluru: ಕಳವು ಮಾಡಿದ ಯುವಕನಿಗೆ ಹಲ್ಲೆ… ವೀಡಿಯೋ ವೈರಲ್‌

Mangaluru: ಕಳವು ಮಾಡಿದ ಯುವಕನಿಗೆ ಹಲ್ಲೆ… ವೀಡಿಯೋ ವೈರಲ್‌

orangrapady

Udupi: ಕಾರು ಢಿಕ್ಕಿ… ಗಂಭೀರ ಗಾಯಗೊಂಡಿದ್ದ ಸ್ಕೂಟರ್‌ ಸವಾರ ಮೃತ್ಯು

yatnal

LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.