ಗೆದ್ದ ಖುಷಿಯಲ್ಲಿ ಶಿವಣ್ಣ


Team Udayavani, Jan 11, 2017, 11:13 AM IST

Srikanta-(26).jpg

“ಎರಡು ದಿನ ಆತಂಕವಿತ್ತು. ಅದೀಗ ದೂರವಾಗಿದೆ. ಫ್ಯಾಮಿಲಿ ಸಮೇತ ಬಂದು ಚಿತ್ರ ನೋಡುತ್ತಿದ್ದಾರೆ. ಈ ಖುಷಿಯಲ್ಲಿ ಏನು ಮಾತಾಡಬೇಕೋ ಗೊತ್ತಾಗುತ್ತಿಲ್ಲ…’ – ಹೀಗೆ ನಾನ್‌ಸ್ಟಾಪ್‌ ಮಾತುಗಳಲ್ಲಿ ಹೇಳಿಕೊಂಡಿದ್ದು ನಿರ್ದೇಶಕ ಮಂಜು ಸ್ವರಾಜ್‌. ಅವರು ಹೇಳಿದ್ದು ಯಶಸ್ವಿ ಪ್ರದರ್ಶನ ಕಾಣುತ್ತಿರುವ “ಶ್ರೀಕಂಠ’ ಚಿತ್ರದ ಬಗ್ಗೆ. ನಿರ್ದೇಶಕ ಮಂಜು ಸ್ವರಾಜ್‌ ಚಿತ್ರದ ಗಳಿಕೆ ಬಗ್ಗೆ ಹೇಳಲಿಲ್ಲ. ಅದ್ಭುತ ಯಶಸ್ಸು ಕಾಣುತ್ತಿದೆ ಎಂದಷ್ಟೇ ಹೇಳಿ, ಶಿವರಾಜ್‌ಕುಮಾರ್‌ ಅವರ ಸಹಕಾರ, ಪ್ರೋತ್ಸಾಹ ಇರದಿದ್ದರೆ ಇಂಥದ್ದೊಂದು ಸಿನಿಮಾ ಮಾಡಲು ಸಾಧ್ಯವಾಗುತ್ತಿರಲಿಲ್ಲ ಎನ್ನುತ್ತಾರೆ ಮಂಜು.

“ಚಿತ್ರದ ಹೆಸರು “ಶ್ರೀಕಂಠ’ ಅಂದಾಗ ಎಲ್ಲರಿಗೂ ಮಾಸ್‌ ಚಿತ್ರ ಅನಿಸಿತ್ತು. ಆದರೆ, ಇದೊಂದು ಕಂಪ್ಲೀಟ್‌ ಫ್ಯಾಮಿಲಿ ಸಿನಿಮಾ. ಶಿವರಾಜ್‌ಕುಮಾರ್‌ ಇರದಿದ್ದರೆ, ಈ ಸಿನಿಮಾ ಮಾಡಲು ಆಗುತ್ತಿರಲಿಲ್ಲ. ಒಬ್ಬ ಸೂಪರ್‌ಸ್ಟಾರ್‌ ಕಾಮನ್‌ ಮ್ಯಾನ್‌ ಆಗಿ ಕಾಣಿಸಿಕೊಳ್ಳುವುದೆಂದರೆ ಸುಲಭವಲ್ಲ. ಶಿವಣ್ಣ ಅವರ ಪ್ರೋತ್ಸಾಹವೇ ಸಿನಿಮಾ ಚೆನ್ನಾಗಿ ಬರಲು ಕಾರಣ. ಎಲ್ಲಾ ಕ್ರೆಡಿಟ್‌ ಅವರಿಗೇ ಹೋಗಬೇಕು. ಇನ್ನು, ನಾವು ಎಷ್ಟೇ ಟೆನನ್‌ನಲ್ಲಿದ್ದರೂ ಶಿವಣ್ಣ ಕೂಲ್‌ ಆಗಿ ಎಲ್ಲವನ್ನೂ ನಿಭಾಯಿಸುತ್ತಿದ್ದರು. ಟ್ರಾಫಿಕ್‌ ಇದ್ದರೂ, ಅವರೇ ನಿಂತು ಸಮಸ್ಯೆ ಬಗೆಹರಿಸುತ್ತಿದ್ದರು.

ಯಶವಂತಪುರದಲ್ಲಿರುವ ಸುಲಭ್‌ ಶೌಚಾಲಯದಲ್ಲಿ ಯಾವುದೇ ಮುಜುಗರ ಇಲ್ಲದೆ ಹೋಗಿ ಚಿತ್ರೀಕರಣಕ್ಕೆ ಸಹಕರಿಸಿದರು. ಇನ್ನೊಂದು ಗ್ರೇಟ್‌ ವಿಷಯವೆಂದರೆ, ವಿಜಯನಗರದಲ್ಲಿ ಭಿಕ್ಷುಕರು ಮಲಗುವ ಜಾಗದಲ್ಲಿ ರಾತ್ರಿ, ಅಲ್ಲೆ ಬಿದ್ದಿದ್ದ ಗೋಣಿ ಚೀಲ ಒದ್ದು ಮಲಗುವ ಸೀನ್‌ನಲ್ಲೂ ಕಾಣಿಸಿಕೊಂಡರು. ಅಲ್ಲೆಲ್ಲಾ ಕಸ ಬಿದ್ದಿದ್ದು, ಜಾಗ ಕೆಟ್ಟದ್ದಾಗಿದ್ದರೂ ಶಿವಣ್ಣ ಲೆಕ್ಕಿಸದೆ, ಸಿನಿಮಾ ಚೆನ್ನಾಗಿ ಬರಬೇಕು ಎಂಬ ಆಸೆಯಿಂದ ಒಬ್ಬ ನಟನಾಗಿ ಪರಿಪೂರ್ಣತೆಯಿಂದ ಕೆಲಸ ಮಾಡಿದ್ದಕ್ಕೆ ಈ ಗೆಲುವು ಸಿಗಲು ಕಾರಣ’ ಎಂಬುದು ಮಂಜು ಸ್ವರಾಜ್‌ ಅಭಿಪ್ರಾಯ.

ಶಿವರಾಜ್‌ಕುಮಾರ್‌ ಅವರಿಗೆ ವಿಮರ್ಶೆಗಳು ಚೆನ್ನಾಗಿ ಬಂದಿದ್ದನ್ನು ನೋಡಿ ಖುಷಿಯಾಯಿತಂತೆ. “ಒಂದು ಒಳ್ಳೇ ಕಥೆಗೆ ಸಿಕ್ಕ ಪ್ರತಿಫ‌ಲವಿದು. ಎಲ್ಲಾ ಕಡೆಯಿಂದಲೂ ಚಿತ್ರದ ಬಗ್ಗೆ ಒಳ್ಳೇ ಮಾತು ಕೇಳಿಬರುತ್ತಿವೆ. ನಾನೂ ಕಾಮನ್‌ ಮ್ಯಾನ್‌ ಆಗಿಯೇ ಸಿನಿಮಾ ನೋಡಿದೆ. ಮಂಜು ಇಡೀ ಕಥೆಯನ್ನು ಅದ್ಭುತವಾಗಿ ಕಟ್ಟಿಕೊಟ್ಟಿದ್ದಾರೆ. ಬರುವ ಪ್ರತಿಯೊಂದು ಪಾತ್ರಗಳು ವಿಶೇಷ ಎನಿಸುತ್ತವೆ. ಸಮುದ್ರದ ಅಲೆಗಳಂತೆ ಎಮೋಷನ್ಸ್‌ ಹೃದಯಕ್ಕೆ ಬಡಿದು ಹೋಗುತ್ತವೆ. ಇಂಥದ್ದೊಂದು ಸಿನಿಮಾ ಕೊಟ್ಟ ಇಡೀ ಟೀಮ್‌ಗೆ ಥ್ಯಾಂಕ್ಸ್‌.

ಒಳ್ಳೇ ತಂಡ ಇದ್ದರೆ, ಇಂತಹ ಒಳ್ಳೇ ಸಿನಿಮಾಗಳು ಬರುತ್ತವೆ. ನಾನು ಪ್ರಯೋಗಕ್ಕೆ ಒಳಪಡದೆ ಸಹಜವಾಗಿ ಅಭಿನಯಿಸಿದ್ದೇನೆ. ಯಾಕೆಂದರೆ, ನಾನು ಸ್ಟಾರ್‌ ಎಂಬ ಭಾವನೆ ಇಟ್ಟುಕೊಂಡಿಲ್ಲ. ನಮ್ಮ ಫ್ಯಾಮಿಲಿಯಲ್ಲಿ ಹಾಗೆ ಬೆಳೆಸಿದ್ದಾರೆ. ಡಾ.ರಾಜ್‌ಕುಮಾರ್‌ ಮಗ ಅನ್ನುವುದಕ್ಕಿಂತ ಮುತ್ತುರಾಜ್‌ ಮಗನಾಗಿ ಬೆಳೆದೆ. ಹಾಗಾಗಿ ಅದು ಸಾಧ್ಯವಾಗಿದೆ’ ಎನ್ನುತ್ತಾರೆ ಶಿವಣ್ಣ. ಮುಂದಿನ ದಿನಗಳಲ್ಲಿ ಲಂಡನ್‌, ಯುಎಸ್‌ ಮತ್ತು ಯುಎಇ ದೇಶಗಳಲ್ಲಿ ಚಿತ್ರವನ್ನು ಬಿಡುಗಡೆ ಮಾಡುವ ಯೋಚನೆ ನಿರ್ಮಾಪಕ ಮನು ಗೌಡಗಿದೆ.

ಟಾಪ್ ನ್ಯೂಸ್

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.