ಗಣೇಶ್‌ ಚಮಕ್‌ಗೆ ಕಿರಿಕ್‌ ರಶ್ಮಿಕಾ


Team Udayavani, Jan 12, 2017, 11:33 AM IST

bal-hashmika-mandanna.jpg

ರಶ್ಮಿಕಾ ಮಂದಣ್ಣ ನಿಜಕ್ಕೂ ತುಂಬಾ ಲಕ್ಕಿ. ಆಕೆ ನಟಿಸಿದ ಮೊದಲ ಚಿತ್ರದ ಟ್ರೇಲರ್‌ ಬಿಡುಗಡೆಯಾದಾಗ ಸ್ಟಾರ್‌ ಸಿನಿಮಾವೊಂದು ಸಿಕ್ಕಿತ್ತು. ಈಗ ಸಿನಿಮಾ ಬಿಡುಗಡೆಯಾದಾಗ ಮತ್ತೂಂದು ಸ್ಟಾರ್‌ ಸಿನಿಮಾ ಸಿಕ್ಕಿದೆ. ಇಂತಹ ಅವಕಾಶ ಯಾರಿಗೆ ಸಿಗುತ್ತೆ ಹೇಳಿ. ರಶ್ಮಿಕಾ ಮಾತ್ರ ತಮಗೆ ಇಷ್ಟವಾದ ಸಿನಿಮಾಗಳನ್ನು ಒಪ್ಪಿಕೊಳ್ಳುತ್ತಿದ್ದಾರೆ. ಯಾವ ರಶ್ಮಿಕಾ ಎಂದರೆ “ಕಿರಿಕ್‌ ಪಾರ್ಟಿ’ ಸಿನಿಮಾ ತೋರಿಸಬೇಕು.

ರಕ್ಷಿತ್‌ ಶೆಟ್ಟಿ ನಾಯಕರಾಗಿರುವ “ಕಿರಿಕ್‌ ಪಾರ್ಟಿ’ ಚಿತ್ರದ ಇಬ್ಬರು ನಾಯಕಿಯರಲ್ಲಿ ರಶ್ಮಿಕಾ ಕೂಡಾ ಒಬ್ಬರು. ಸಾನ್ವಿ ಪಾತ್ರದ ಮೂಲಕ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿರುವ ರಶ್ಮಿಕಾ ಈಗ ಗಣೇಶ್‌ ನಾಯಕರಾಗಿರುವ ಸಿನಿಮಾವೊಂದರಲ್ಲಿ ನಟಿಸುತ್ತಿದ್ದಾರೆ. ಅದು “ಚಮಕ್‌’ ಚಿತ್ರದಲ್ಲಿ. ಸುನಿ ನಿರ್ದೇಶನದ “ಚಮಕ್‌’ ಚಿತ್ರದಲ್ಲಿ ಗಣೇಶ್‌ ನಾಯಕರಾಗಿ ನಟಿಸುತ್ತಿರೋದು ನಿಮಗೆ ಗೊತ್ತೇ ಇದೆ.

ಈ ಚಿತ್ರಕ್ಕೆ ನಾಯಕಿಯ ಆಯ್ಕೆಯಾಗಿರಲಿಲ್ಲ. ನಾಯಕಿಯ ಹುಡುಕಾಟದಲ್ಲಿದ್ದ ಸುನಿ ಕಣ್ಣಿಗೆ ಬಿದ್ದಿದ್ದು ರಶ್ಮಿಕಾ. “ಕಿರಿಕ್‌ ಪಾರ್ಟಿ’ ಸಿನಿಮಾ ನೋಡಿದ ಸುನಿಗೆ ರಶ್ಮಿಕಾ ಪರ್‌ಫಾರ್ಮೆನ್ಸ್‌ ಇಷ್ಟವಾಗಿದೆ. ತಮ್ಮ “ಚಮಕ್‌’ ಕಥೆಗೆ ಹೊಂದಿಕೆಯಾಗುವ ಹುಡುಗಿ ಎಂದುಕೊಂಡು ರಶ್ಮಿಕಾ ಅವರನ್ನು ಕೇಳಿದಾಗ, ಆಕೆ ಕೂಡಾ ಖುಷಿಯಿಂದಲೇ ಒಪ್ಪಿಕೊಂಡಿದ್ದಾರೆ. ಮುಂದಿನ ತಿಂಗಳಿನಿಂದ ಚಿತ್ರೀಕರಣ ಆರಂಭವಾಗಲಿದೆ.

ಸುನಿ ಸಿನಿಮಾದಲ್ಲಿ ನಾಯಕಿಯರಿಗೂ ಹೆಚ್ಚಿನ ಪ್ರಾಮುಖ್ಯತೆ ಇರುತ್ತದೆ. ಅದರಂತೆ ಈ ಸಿನಿಮಾದಲ್ಲಿ ರಶ್ಮಿಕಾಗೂ ಒಳ್ಳೆಯ ಪಾತ್ರ ಸಿಕ್ಕಿದೆಯಂತೆ. ಈಗಾಗಲೇ ರಶ್ಮಿಕಾ ದರ್ಶನ್‌ ನಾಯಕರಾಗಿರುವ “ಮಿಲನ’ ಪ್ರಕಾಶ್‌ ನಿರ್ದೇಶನದ ಸಿನಿಮಾಕ್ಕೆ ನಾಯಕಿಯಾಗಿ ಆಯ್ಕೆಯಾಗಿದ್ದಾರೆ. “ಕಿರಿಕ್‌ ಪಾರ್ಟಿ’ ಚಿತ್ರದ ಟ್ರೇಲರ್‌ ಬಿಡುಗಡೆಯಾಗುತ್ತಿದ್ದಂತೆ ರಶ್ಮಿಕಾಗೆ ದರ್ಶನ್‌ ಸಿನಿಮಾ ಸಿಕ್ಕಿತ್ತು. ಈಗ ಪೂರ್ತಿ ಸಿನಿಮಾ ಬಿಡುಗಡೆಯಾಗುತ್ತಿದ್ದಂತೆ ಗಣೇಶ್‌ ಸಿನಿಮಾ ಸಿಕ್ಕಿದೆ. 

ಮೂಲತಃ ವಿರಾಜಪೇಟೆಯ ರಶ್ಮಿಕಾ ಮಾಡೆಲಿಂಗ್‌ನಿಂದ ಬಂದವರು. ರಶ್ಮಿಕಾ ಫೋಟೋ ನೋಡಿದ ತಂಡ “ಕಿರಿಕ್‌ ಪಾರ್ಟಿ’ಗೆ ಆಯ್ಕೆ ಮಾಡಿಕೊಂಡಿತ್ತು. ಈಗ ಆ ಅವಕಾಶ ರಶ್ಮಿಕಾ ಅದೃಷ್ಟದ ಬಾಗಿಲು ತೆರೆಯುವಂತೆ ಮಾಡಿದೆ. ಸದ್ಯ ಸುನಿ ನಿರ್ದೇಶನದ “ಆಪರೇಷನ್‌ ಅಲಮೇಲಮ್ಮ’  ಬಿಡುಗಡೆಗೆ ಸಿದ್ಧವಾಗಿದೆ. ಅದು ಬಿಡುಗಡೆಯಾಗುತ್ತಿದ್ದಂತೆ “ಚಮಕ್‌’ ಆರಂಭವಾಗಿದೆ.

ಟಾಪ್ ನ್ಯೂಸ್

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.