ಕಲರ್ಸ್‌ ವಾಹಿನಿಯಲ್ಲಿ ರಾಧಾರಮಣ


Team Udayavani, Jan 16, 2017, 11:17 AM IST

Radha-Ramana-2.jpg

ಕಿರುತೆರೆಯಲ್ಲೀಗ ಧಾರಾವಾಹಿಗಳ ಕಲರವ ಜೋರಾಗಿದೆ. ಹೊಸ ಬಗೆಯ ಧಾರಾವಾಹಿಗಳ ಸಂಖ್ಯೆ ದಿನ ಕಳೆದಂತೆ ಹೆಚ್ಚುತ್ತಲೇ ಇದೆ. ಆ ಸಾಲಿಗೆ ಈಗ ಕಲರ್ಸ್‌ ಕನ್ನಡದಲ್ಲಿ “ರಾಧಾ ರಮಣ’ ಸೇರಿದೆ. ಜನವರಿ 16 ರಂದು ಶುರುವಾಗುವ ಈ ಧಾರಾವಾಹಿ, ಸೋಮವಾರದಿಂದ ಶುಕ್ರವಾರದವರೆಗೆ ಪ್ರತಿ ದಿನ ರಾತ್ರಿ 9 ಕ್ಕೆ ಪ್ರಸಾರವಾಗಲಿದೆ. ಇದು ಒಡಹುಟ್ಟಿದವರ ಬಾಂಧವ್ಯ ಬೆಸೆಯುವ ಕಥೆ. ಇಲ್ಲಿ ದಾಯಾದಿಗಳ ಹಗೆತನ ಇಲ್ಲ. ಕೋಟಿ ಕೋಟಿ ದುಡ್ಡಿದೆ.

ಆದರೆ ಕೋಟಿಗಿಂತಲೂ ಮಿಗಿಲಾದ ಪ್ರೀತಿ ಇದೆ. ವಿಶೇಷವಾಗಿ ಆ ಮನೆಯ ಅಣ್ಣ , ತಂಗಿಯರನ್ನು ನೋಡಿದರೆ ಎಂಥವರಿಗೂ ಹೊಟ್ಟೆ ಕಿಚ್ಚಾಗುವಷ್ಟು ಪ್ರೀತಿ ಇದೆ. ಸಂಬಂಧಗಳು ಮೌಲ್ಯ ಕಳೆದುಕೊಳುತ್ತಿರುವ ಸಂದರ್ಭದಲ್ಲಿ, ಜವಾಬ್ದಾರಿಗಳಿಂದ ದೂರ ಸರಿಯುವ ಒಡಹುಟ್ಟಿದವರಿಗೆ ಹೇಳಿ ಮಾಡಿಸಿರುವ ಧಾರಾವಾಹಿ ಇದು ಎಂಬುದು ಧಾರಾವಾಹಿ ತಂಡದ ಮಾತು. ಈವರೆಗೆ ಕಲರ್ಸ್‌ ಕನ್ನಡ  ಹೊಸಬಗೆಯ ಧಾರಾವಾಹಿಗಳನ್ನು ನೀಡಿದೆ. “ರಾಧಾ ರಮಣ’ ಆ ಸಾಲಿಗೆ ಹೊಸ ಸೇರ್ಪಡೆಯಾಗಿದೆ.

ಕನ್ನಡ ಪ್ರಾಧ್ಯಾಪಕಿ ಆರಾಧನಾ ಮತ್ತು ಬ್ಯುಸಿನೆಸ್‌ನಲ್ಲಿ ತೊಡಗಿರುವ ಇಂಗ್ಲಿಷ್‌ ಹುಡುಗ ರಮಣನ ನಡುವೆ ನಡೆಯುವ ಕಥೆ. ಆರಾಧನಾ ಅಣ್ಣ ಮತ್ತು ರಮಣನ ತಂಗಿಗೆ ನಡೆಯುವ ಮದುವೆ ಜೊತೆ ಆರಂಭವಾಗುವ ಈ ಧಾರಾವಾಹಿ, ಕನ್ನಡ ಮನಸುಗಳಿಗೆ ಹತ್ತಿರವಾಗುತ್ತೆ ಎಂಬ ವಿಶ್ವಾಸ ಧಾರಾವಾಹಿ ತಂಡದ್ದು. ರಮಣ ಒಬ್ಬ ಪಫೆìಕ್ಟ್ ಹುಡುಗ. ಆದರೆ ಜೀವನದಲ್ಲಿ ಎಲ್ಲವೂ ಪರಿಪೂರ್ಣವಾಗಿರಲು ಹೇಗೆ ಸಾಧ್ಯ? ತನ್ನ ತಂಗಿ ಅನ್ವಿತಾಳಿಗೆ ಪ್ರತಿಯೊಂದೂ ಬೆಸ್ಟ್‌ ಸಿಗಬೇಕು ಎನ್ನುವುದು ಅವನ ಕಾಳಜಿ. ಈ ಕಡೆ ಅನ್ವಿತಾ ಒಬ್ಬ ಪಫೆಕ್ಟ್ ಹುಡುಗನನ್ನು ಹುಡುಕಿದ್ದಾಳೆ.

ಅವನೇ ಆದಿತ್ಯ! ಮುಂದೆ ಏನೆಂಬುದನ್ನು ಧಾರಾವಾಹಿಯಲ್ಲೇ ನೋಡಬೇಕು. ಈ ಧಾರಾವಾಹಿಗೆ ವಿಶಾಲ ರಾಜಪುರೋಹಿತ್‌ ಕಥೆ ಬರೆದಿದ್ದಾರೆ. ಡಾ.ಮಾಲತಿ ಬೇಳೂರು ಸಂಭಾಷಣೆ ಬರೆದರೆ, ಎಂ. ಸುಬ್ರಹ್ಮಣ್ಯ ನಿರ್ಮಾಪಕರು. ಶಿವ ಪೂಜೇನ ಅಗ್ರಹಾರ ನಿರ್ದೇಶನವಿದೆ. ಶ್ವೇತಾ ಪ್ರದೀಪ್‌, ಸ್ಕಂದ, ರಕ್ಷಾ, ಸಿಬ್ಬು, ಸುಜಾತ, ಸುಚಿತ್ರಾ, ರಾಜ್‌ಗೊàಪಾಲ್‌ ಜೋಷಿ ಇತರರು ನಟಿಸುತ್ತಿದ್ದಾರೆ. ಧಾರಾವಾಹಿಗೆ  ಕಾರ್ತಿಕ್‌ ಶರ್ಮಾ ಸಂಗೀತವಿದೆ. ವಿಕಾಸ್‌ ನೇಗಿಲೋಣಿ ಶೀರ್ಷಿಕೆ ಸಾಹಿತ್ಯವಿದೆ. 

ಟಾಪ್ ನ್ಯೂಸ್

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

police crime

Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Checkbounce case: ಆರೋಪಿ ಮಹಿಳೆ ಖುಲಾಸೆ

Checkbounce case: ಆರೋಪಿ ಮಹಿಳೆ ಖುಲಾಸೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.