ಸೆನ್ಸಾರ್‌ ಮಂಡಳಿಯಲ್ಲಿ ಸಮಸ್ಯೆಯಲ್ಲದ ಸಮಸ್ಯೆ!


Team Udayavani, Feb 16, 2017, 11:21 AM IST

Vardhana.jpg

ಸೆನ್ಸಾರ್‌ ಮಂಡಳಿಯಲ್ಲಿ ಸಮಸ್ಯೆ ಇದೆಯಾ? – ಹೀಗೊಂದು ಪ್ರಶ್ನೆ ಇದೀಗ ಗಾಂಧಿನಗರಿಗರನ್ನು ಕಾಡದೇ ಇರದು. ಅದಕ್ಕೆ ಕಾರಣ, ಈಗ ಸೆನ್ಸಾರ್‌ ಆಗದೆ ಕೂತಿರುವ ಸಾಲು ಸಾಲು ಸಿನಿಮಾಗಳು. ಹೌದು, ಬರೋಬ್ಬರಿ 13 ಸಿನಿಮಾಗಳು ಸೆನ್ಸಾರ್‌ ಮಂಡಳಿಯಲ್ಲಿ ಸೆನ್ಸಾರ್‌ ಸರ್ಟಿಫಿಕೆಟ್‌ಗೊàಸ್ಕರ ಕಾದು ಕೂತಿವೆ ಎನ್ನಲಾಗುತ್ತಿದೆ. ಹಾಗಾದರೆ, ಸೆನ್ಸಾರ್‌ ಮಂಡಳಿಯಲ್ಲಿ ಏನಾಗುತ್ತಿದೆ? ಅಂಥದ್ದೇನೂ ಆಗಿಲ್ಲ. ಆದರೆ, ಸಿನಿಮಾ ನೋಡೋಕೆ ಅಲ್ಲಿ ಸದಸ್ಯರೇ ಇಲ್ಲ ಎಂಬ ಮಾತು ಕೇಳಿಬರುತ್ತಿದೆ.

ಸದಸ್ಯರು ಇದ್ದರೂ, ಕಾರಣಾಂತರಗಳಿಂದ ಅವರು ಸಿಗುತ್ತಿಲ್ಲ. ಹಾಗಾಗಿ, ಸಿನಿಮಾ ಬಿಡುಗಡೆಗೆ ದಿನಾಂಕ ಘೋಷಣೆ ಮಾಡಿದವರು ಇದೀಗ ಫ‌ಜೀತಿ ಪಡುವಂತಾಗಿದೆ. ಎಸ್‌.ನಾರಾಯಣ್‌ ನಿರ್ದೇಶನದ “ಪಂಟ’ ಸಿನಿಮಾ ಫೆ.17 ರಂದು ರಿಲೀಸ್‌ ಡೇಟ್‌ ಅನೌನ್ಸ್‌ ಮಾಡಿತ್ತು. ಆದರೆ, ಅದು ಅಂದು ಬಿಡುಗಡೆಯಾಗುತ್ತಿಲ್ಲ. ಅದಕ್ಕೆ ಬೇರೆಯದ್ದೇ ಕಾರಣವಿದೆ. ಆದರೆ, “ಶ್ರೀನಿವಾಸ ಕಲ್ಯಾಣ’ ಮತ್ತು “ವರ್ಧನ’ ಚಿತ್ರಗಳು ಈಗಾಗಲೇ ಫೆ 17 ರಂದು ತಮ್ಮ ರಿಲೀಸ್‌ ಡೇಟ್‌ ಅನೌನ್ಸ್‌ ಮಾಡಿದ್ದರೂ, ಬುಧವಾರ ರಾತ್ರಿಯವರೆಗೂ ಸೆನ್ಸಾರ್‌ ಸರ್ಟಿಫಿಕೆಟ್‌ ಸಿಕ್ಕಿಲ್ಲ.

ವಿಚಿತ್ರವೆಂದರೆ, ನಿನ್ನೆ ಮಧ್ಯಾಹ್ನದವರೆಗೂ ಸಿನಿಮಾ ನೋಡುವುದೇ ಅನುಮಾನ ಎಂಬ ಸ್ಥಿತಿ ಇತ್ತು. ಒಂದು ಪಕ್ಷ ಸಂಜೆ ಅಥವಾ ರಾತ್ರಿ ಈ ಎರಡು ಸಿನಿಮಾಗಳನ್ನು ನೋಡಿದ್ದರೂ, ಇಂದು ಸಿಗುವ ಸಾಧ್ಯತೆಗಳಿವೆ. ಇಷ್ಟಕ್ಕೆಲ್ಲಾ ಕಾರಣ, ಸೆನ್ಸಾರ್‌ ಮಂಡಳಿಯಲ್ಲಿ ಸಿನಿಮಾ ನೋಡಲು ಸದಸ್ಯರಿಲ್ಲ ಎಂಬುದು. ಹೀಗಾದರೆ ಈ ವಾರ ರಿಲೀಸ್‌ಗೆ ರೆಡಿಯಾಗಿರುವ ಸಿನಿಮಾಗಳ ಗತಿ ಏನು? ಸೆನ್ಸಾರ್‌ ಆಗದೇ ಇರುವುದಕ್ಕೆ ಮುಖ್ಯ ಕಾರಣವಾದರೂ ಏನು?

ಈ ಕುರಿತು ಸೆನ್ಸಾರ್‌ ಮಂಡಳಿಯ ಪ್ರಾದೇಶಿಕ ಅಧಿಕಾರಿ ಶ್ರೀನಿವಾಸಪ್ಪ “ಉದಯವಾಣಿ’ಗೆ ಉತ್ತರಿಸಿದ್ದಿಷ್ಟು. “ಸೆನ್ಸಾರ್‌ ಮಂಡಳಿಯಲ್ಲಿರುವ ಹತ್ತು ಮಂದಿ ಪುರುಷ ಸದಸ್ಯರು ಅವರವರ ವೈಯಕ್ತಿಕ ಕಾರಣಗಳಿಂದ ಹೊರಗಡೆ ಇದ್ದಾರೆ. ಉಳಿದ ನಾಲ್ಕೈದು ಮಹಿಳಾ ಸದಸ್ಯರು ಸಹ ಕೆಲ ವೈಯಕ್ತಿಕ ಕಾರಣಗಳಿಂದ ಬರಲಾಗುತ್ತಿಲ್ಲ. ಹೀಗಾಗಿ ಸಿನಿಮಾ ನೋಡಲು ಸಾಧ್ಯವಾಗುತ್ತಿಲ್ಲ. ಅದೂ ಅಲ್ಲದೆ, ಮಂಡಳಿಯಲ್ಲೊಂದು ಕಾನೂನು ಇದೆ.

ಯಾವುದೇ ಒಂದು ಸಿನಿಮಾಗೆ ಸೆನ್ಸಾರ್‌ ಮಂಡಳಿ ಸರ್ಟಿಫಿಕೆಟ್‌ ಕೊಡಬೇಕಾದರೆ, ಆ ಚಿತ್ರಕ್ಕೆ ಸಂಬಂಧಿಸಿದವರು, ಸಿನಿಮಾದ ದಾಖಲೆಗಳ ಸಮೇತ ಅರ್ಜಿ ಹಾಕಬೇಕು. 21 ದಿನಗಳ ಒಳಗೆ ಆ ಚಿತ್ರವನ್ನು ವೀಕ್ಷಿಸಿ, ಕಸರ್ಟಿಫಿಕೆಟ್‌ ಕೊಡುವುದು ವಾಡಿಕೆ.  ಸೆನ್ಸಾರ್‌ ಮಂಡಳಿ ಕೊಟ್ಟ ಸರ್ಟಿಫಿಕೆಟ್‌ಗೆ ಸಮಾಧಾನ ಇಲ್ಲವಾದರೆ, ರಿವೈಸಿಂಗ್‌ ಕಮಿಟಿಗೆ ಮೊರೆ ಹೋಗಬಹುದು. ಆದರೆ, ಇಲ್ಲಿ ಉದ್ಭವಿಸಿರುವ ಸಮಸ್ಯೆಯೆಂದರೆ, ಈಗಾಗಲೇ ಸೆನ್ಸಾರ್‌ ಮಂಡಳಿಗೆ ಬಂದಿರುವ ಸಾಕಷ್ಟು ಚಿತ್ರಗಳಿವೆ.

ಅವುಗಳನ್ನು ಒಂದೊಂದೇ ವೀಕ್ಷಿಸಲಾಗುತ್ತಿದೆ. ಆದರೆ, ಕೆಲ ಸಿನಿಮಾಗಳು ಈ ವಾರ ಡೇಟ್‌ ಅನೌನ್ಸ್‌ ಮಾಡಿ, ನಮ್ಮ ಚಿತ್ರ ನೋಡಲು ಸದಸ್ಯರೇ ಇಲ್ಲ ಅಂತ ಹೇಳಿಕೊಂಡರೆ ಏನು ಮಾಡಲಿ. ಅವರು ಅರ್ಜಿ ಹಾಕಿ ಒಂದು ವಾರವೂ ಆಗಿಲ್ಲ. ಅಂಥವರ ಚಿತ್ರ ನೋಡಿ ಸರ್ಟಿಫಿಕೆಟ್‌ ಕೊಡುವುದಾದರೂ ಹೇಗೆ? ನಮ್ಮಲ್ಲಿ ಯಾರು ಮೊದಲು ಬಂದಿರುತ್ತಾರೋ, ಅವರಿಗೆ ಮೊದಲ ಆದ್ಯತೆ. 21 ದಿನಗಳವರೆಗೂ ನಮಗೆ ಚಿತ್ರ ನೋಡಿ ಸರ್ಟಿಫಿಕೆಟ್‌ ನೀಡಲು ಅವಕಾಶ ಇದೆ. 

ಕೆಲವರು ಡೇಟ್‌ ಅನೌನ್ಸ್‌ ಮಾಡಿ, ನಮ್ಮ ಚಿತ್ರ ನೋಡಿ, ಸರ್ಟಿಫಿಕೆಟ್‌ ಕೊಡಿ ಅಂದರೆ, ಮೊದಲು ಬಂದ ಚಿತ್ರಗಳ ಗತಿ ಏನು?  ಮಂಡಳಿಯಲ್ಲಿ ಸದಸ್ಯರೇ ಇಲ್ಲ ಅಂತ ಹೇಳಿಕೆ ನೀಡಿ, ವಿನಾಕಾರಣ ಸಮಸ್ಯೆ ಹುಟ್ಟುಹಾಕೋದು ಸರಿಯಲ್ಲ. ಸಮಸ್ಯೆ ಇದ್ದರೂ, ಅದನ್ನು ನಾವು ಮೇಲಿನ ಅಧಿಕಾರಿಗಳ ಗಮನಕ್ಕೆ ತಂದಿದ್ದೇವೆ. ಎಲ್ಲದ್ದಕ್ಕೂ ಸ್ವಲ್ಪ ಕಾಲವಕಾಶ ಬೇಕಾಗುತ್ತದೆ. ಹಾಗಂತ, ಇಲ್ಲಿ ಯಾವುದೇ ಕೆಲಸಗಳು ನಿಧಾನವಾಗಿ ನಡೆಯುತ್ತಿಲ್ಲ. ಯಾವುದಕ್ಕೂ ತೊಂದರೆ ಆಗುತ್ತಿಲ್ಲ. ಈಗ ಡೇಟ್‌ ಅನೌನ್ಸ್‌ ಮಾಡಿರುವ ಸಿನಿಮಾಗಳ ನಿರ್ದೇಶಕ, ನಿರ್ಮಾಪಕರು ಅವಸರ ಮಾಡಿದರೆ, ಏನು ಮಾಡಲಿ? ಸೆನ್ಸಾರ್‌ ಆಗದೆ ಡೇಟ್‌ ಅನೌನ್ಸ್‌ ಮಾಡಿದ್ದು ಅವರ ತಪ್ಪು.

21 ದಿನಗಳ ಬಳಿಕ ಸರ್ಟಿಫಿಕೆಟ್‌ ನೀಡದಿದ್ದರೆ ಅದು ನಮ್ಮ ತಪ್ಪು. ಆದರೆ, ಇಲ್ಲಿ ಅವರದೇ ತಪ್ಪು ಇಟ್ಟುಕೊಂಡು, ಸೆನ್ಸಾರ್‌ ಮಂಡಳಿ ಸಿನಿಮಾ ನೋಡುತ್ತಿಲ್ಲ ಎಂದರೆ ಹೇಗೆ? ಈಗಲೂ ಅವರಿಗೆ ಒಂದು ಅವಕಾಶ ಕೊಟ್ಟಿದ್ದೇನೆ. ಮೊದಲು ಬಂದಿರುವ ಸಿನಿಮಾಗಳ ನಿರ್ದೇಶಕ, ನಿರ್ಮಾಪಕರ ಬಳಿ ಹೋಗಿ, ಎನ್‌ಓಸಿ ತಂದರೆ, ನಮ್ಮದೇನೂ ಅಭ್ಯಂತರವಿಲ್ಲ. ಅವರ ಚಿತ್ರ ನೋಡಿ ಸರ್ಟಿಫಿಕೆಟ್‌ ಕೊಡ್ತೀನಿ. ನಾನು ಕಾನೂನಾತ್ಮಕ ಕೆಲಸ ಮಾಡುತ್ತಿದ್ದೇನೆ ಹೊರತು, ಬೇರೆ ಯಾವ ಉದ್ದೇಶ ಇಟ್ಟುಕೊಂಡು ಇಲ್ಲಿ ಕೆಲಸ ಮಾಡುತ್ತಿಲ್ಲ’ ಎಂದು ಸ್ಪಷ್ಟಪಡಿಸುತ್ತಾರೆ ಶ್ರೀನಿವಾಸಪ್ಪ.

ಟಾಪ್ ನ್ಯೂಸ್

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

nenapirali prem as police in new movie

Kannada Cinema; ಹೊಸ ಚಿತ್ರದಲ್ಲಿ ಖಡಕ್ ಪೊಲೀಸ್ ಆದ ನೆನಪಿರಲಿ ಪ್ರೇಮ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

ramarasa kannada movie

Kannada Cinema; ‘ರಾಮರಸ’ ಹಿಂದೆ ಗುರು ಆ್ಯಂಡ್‌ ಟೀಂ

ಮೈಸೂರಲ್ಲಿ ‘ಬಘೀರ’ ಶೂಟಿಂಗ್ ವೇಳೆ ನಟ ಶ್ರೀಮುರುಳಿಗೆ ಗಾಯ

ಮೈಸೂರಲ್ಲಿ ‘ಬಘೀರ’ ಶೂಟಿಂಗ್ ವೇಳೆ ನಟ ಶ್ರೀಮುರುಳಿಗೆ ಗಾಯ; ಆಸ್ಪತ್ರೆಗೆ ದಾಖಲು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

1-C-brijesh

Dakshina Kannada; ಕ್ಯಾಪ್ಟನ್‌ ಬ್ರಿಜೇಶ್‌ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.