ಕಲಾ ನಿರ್ದೇಶಕ ಅರುಣ್ ಸಾಗರ್ ಗೋದಾಮಿಗೆ ಬೆಂಕಿ ;ಲಕ್ಷಾಂತರ ನಷ್ಟ
Team Udayavani, Feb 17, 2017, 10:17 AM IST
ಬೆಂಗಳೂರು : ನಗರದ ಉತ್ತರಹಳ್ಳಿಯಲ್ಲಿರುವ ಕಲಾ ನಿರ್ದೇಶಕ ,ನಟ ಅರುಣ್ ಸಾಗರ್ ಅವರ ಗೋದಾಮಿನಲ್ಲಿ ಫೆಬ್ರವರಿ 15 ರ ಸಂಜೆ ಭಾರಿ ಅಗ್ನಿ ಅವಘಡ ಸಂಭವಿಸಿದ್ದು ಚಿತ್ರಗಳಿಗೆ ಬಳಸಿದ್ದ, ಬಳಸಬೇಕಾಗಿದ್ದ ನೂರಾರು ಅಪೂರ್ವ ಕಲಾಕೃತಿಗಳು ಸುಟ್ಟು ಭಸ್ಮವಾಗಿದೆ.
3 ಗೋದಾಮು ಗಳಲ್ಲಿ ದ್ದ ಅನೇಕ ಕಲಾಕೃತಿಗಳು ಭಸ್ಮವಾಗಿದ್ದು, ಅಗ್ನಿ 1.5 ಎಕರೆಯಷ್ಟು ಪ್ರದೇಶಕ್ಕೆ ವ್ಯಾಪಿಸಿದೆ. ಸುಮಾರು 75 ಲಕ್ಷ ರೂಪಾಯಿ ನಷ್ಟ ಸಂಭವಿಸಿರುವುದಾಗಿ ಅಂದಾಜಿಸಲಾಗಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ.
ಬೆಂಕಿಯನ್ನು ನಂದಿಸಲು ಸ್ಥಳೀಯರು ಪ್ರಯತ್ನಿಸಿದರಾದರೂ ಸಾಧ್ಯವಾಗಲಿಲ್ಲ. ಅಗ್ನಿ ಶಾಮಕದಳದ ಸಿಬಂದಿಗಳು ಸ್ಥಳಕ್ಕಾಗಮಿಸುವಷ್ಟರಲ್ಲಿ ಬೆಂಕಿಯ ಕೆನ್ನಾಲೆಗೆ ಗೋದಾಮುಗಳನ್ನು ಆಹುತಿ ಪಡೆದಿತ್ತು.
ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿರಬಹುದು, ನನಗೆ ಯಾರೂ ಬೆಂಕಿ ಕೊಟ್ಟಿರುವ ಬಗ್ಗೆ ಅನುಮಾನವಿಲ್ಲ ಎಂದು ಅರುಣ್ ಸಾಗರ್ ಅವರು ಮಾಧ್ಯಮವೊಂದಕ್ಕೆ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು