ಇಲ್ಲಿ ತಿಥಿ, ಪ್ರಸ್ಥ ಎರಡೂ ಒಟ್ಟಿಗೆ ನಡೆಯಲಿದೆ…


Team Udayavani, Feb 19, 2017, 4:43 PM IST

7.jpg

ಒಂದಾದ ಮೇಲೊಂದರಂತೆ ಸಿನಿಮಾಗಳಲ್ಲಿ ನಟಿಸುತ್ತಿರುವ ಗಡ್ಡಪ್ಪ ಹಾಗೂ ಸೆಂಚುರಿಗೌಡ ಈಗ ಮತ್ತೂಂದು ಸಿನಿಮಾವನ್ನು ಒಪ್ಪಿಕೊಂಡಿದ್ದಾರೆ. ಆ ಚಿತ್ರ ಈಗಾಗಲೇ ಸದ್ದಿಲ್ಲದೆಯೇ ಶುರುವಾಗಿದೆ ಕೂಡ. ಅಂದಹಾಗೆ, ಆ ಸಿನಿಮಾಗೆ “ತಾತನ್‌ ತಿಥಿ ಮೊಮ್ಮಗನ್‌ ಪ್ರಸ್ಥ’ ಎಂದು ನಾಮಕರಣ ಮಾಡಲಾಗಿದೆ. ಈ ಚಿತ್ರಕ್ಕೆ ಕೃಷ್ಣ ಚಂದ್ರು ನಿರ್ದೇಶಕರು. ಮುಸ್ಸಂಜೆ ಮಹೇಶ್‌ ಸಿನಿಮಾದಲ್ಲಿ ಅವರ ಅಪ್ಪಟ ಶಿಷ್ಯ ಎಂದು ಗುರುತಿಸಿಕೊಂಡಿರುವ ಕಾರಣ, ಈ ಚಿತ್ರಕ್ಕೆ ಮುಸ್ಸಂಜೆ ಮಹೇಶ್‌ ಕಥೆ ಮತ್ತು ಚಿತ್ರಕಥೆ ಬರೆದು, ಶಿಷ್ಯನ ಸಿನಿಮಾಗೆ ಸಾಥ್‌ ಕೊಡುತ್ತಿದ್ದಾರೆ. ಈ ಚಿತ್ರದಲ್ಲಿ ಸಾಕಷ್ಟು ವಿಶೇಷತೆಗಳಿವೆ. ಗಡ್ಡಪ್ಪ, ಸೆಂಚುರಿಗೌಡ ಹಾಗೂ ತಮ್ಮಣ್ಣ ಪ್ರಮುಖವಾಗಿ ನಟಿಸುತ್ತಿರುವ ಈ ಚಿತ್ರಕ್ಕೆ ಶುಭಾ ಪೂಂಜಾ ನಾಯಕಿ. ಅವರಿಗೆ “ಮಂಡ್ಯ ಸ್ಟಾರ್‌’ ಸಿನಿಮಾದ ಹೀರೋ ಲೋಕಿ ನಾಯಕ. ಉಳಿದಂತೆ ಓಂಪ್ರಕಾಶ್‌ ರಾವ್‌ ಚಿತ್ರದಲ್ಲಿ ಇನ್ನೊಂದು ಪ್ರಮುಖ ಪಾತ್ರ ನಿರ್ವಹಿಸುತ್ತಿದ್ದಾರೆ.

ಈ ಚಿತ್ರದ ಟೈಟಲ್ಲೇ ಒಂದು ರೀತಿ ವಿಭಿನ್ನವಾಗಿದೆ. ಆ ಕುರಿತು ವಿವರ ಕೊಡುವ ಮುಸ್ಸಂಜೆ ಮಹೇಶ್‌, “ಇಷ್ಟು ದಿನ ಈ ಗಡ್ಡಪ್ಪ ಮತ್ತು ಸೆಂಚುರಿ ಗೌಡ ಅವರ ಮುಗ್ಧತೆಯನ್ನು ಬಹಳಷ್ಟು ಜನ ಬೇರೆ ರೀತಿ ಬಳಸಿಕೊಂಡಿದ್ದುಂಟು. ಅವರನ್ನಿಟ್ಟುಕೊಂಡು ಚೀಪ್‌ ಗಿಮಿಕ್‌ ಕೂಡ ಮಾಡಲಾಗಿತ್ತು. ಇಲ್ಲಿ ಅವರನ್ನು ಬೇರೆ ರೀತಿಯಾಗಿ ತೋರಿಸಲಾಗುತ್ತಿದೆ. ಇಲ್ಲೂ ಡಬ್ಬಲ್‌ ಮೀನಿಂಗ್‌ ಇದೆ. ಆದರೆ, ಆದು ವಲ್ಗರ್‌ ಎನಿಸುವುದಿಲ್ಲ. ಅಂತಹ ಪೋಲಿ ಮಾತುಗಳಿದ್ದರೂ, ಒಂದೊಳ್ಳೆಯ ಸಂದೇಶ ಈ ಚಿತ್ರದಲ್ಲಿದೆ. ಕಥೆಗೆ ಪೂರಕವಾಗಿಯೇ ಇಲ್ಲಿ ಮಾತುಗಳನ್ನು ಪೋಣಿಸಲಾಗಿದೆ ವಿನಃ, ಬೇಕು ಅಂತಾನೇ ಬೇಡದ್ದನ್ನು ಇಟ್ಟಿಲ್ಲ. ಈಗಾಗಲೇ ಒಂದು ವಾರ ಚಿತ್ರೀಕರಣ ನಡೆಸಲಾಗಿದೆ. ಈ ಕಲಾವಿದರ ವೃತ್ತಿ ಜೀವನದಲ್ಲೇ ಈ ಸಿನಿಮಾ ದೊಡ್ಡ ಕ್ಯಾನ್ವಾಸ್‌ನಲ್ಲಿ ತಯಾರಾಗುತ್ತಿದೆ.

ಮುಗ್ಧ ಕಲಾವಿದರನ್ನು ಇಟ್ಟುಕೊಂಡು ನಾವು ಚೀಪ್‌ ಗಿಮಿಕ್‌ ಮಾಡುವುದಿಲ್ಲ. ಒಂದೊಳ್ಳೆಯ ಕಥೆಯೊಂದಿಗೆ ಮನರಂಜನಾತ್ಮಕವಾಗಿ ಚಿತ್ರವನ್ನು ಕಟ್ಟಿಕೊಡಲಾಗಿದೆ. ಇನ್ನು, ಶೀರ್ಷಿಕೆ ಬಗ್ಗೆ ಹೇಳವುದಾದರೆ, ಇದನ್ನು “ತಿಥಿ’ಯ ಮಂದುವರೆದ ಭಾಗ ಅಂದುಕೊಳ್ಳಬಹುದು. ತಾತನ ತಿಥಿ ಅದಮೇಲೆ, ಮೊಮ್ಮಗನ ಪ್ರಸ್ಥ ಮಾಡಬೇಕೋ ಬೇಡವೋ ಎಂಬ ಕಾನ್ಸೆಪ್ಟ್ ಇಲ್ಲಿದೆ.

ಸಿನಿಮಾದುದ್ದಕ್ಕೂ ಮನರಂಜನೆ ಇದೆ. ಬೆಂಗಳೂರು ಮತ್ತು ಮೈಸೂರು ಸುತ್ತಮುತ್ತ ಚಿತ್ರೀಕರಣ ನಡೆಸಲಾಗಿದೆ. ಫೆಬ್ರವರಿ 21 ಕ್ಕೆ ಚಿತ್ರದ ಟ್ರೇಲರ್‌ ರಿಲೀಸ್‌ ಮಾಡುವ ಯೋಚನೆ ಚಿತ್ರತಂಡಕ್ಕಿದೆ’ ಎಂಬುದು ಮುಸ್ಸಂಜೆ ಮಹೇಶ್‌ ಮಾತು. ಶ್ರೀ ಶ್ರೀನಿವಾಸ ಗ್ರೂಪ್ಸ್‌ನಲ್ಲಿ ಸಿನಿಮಾ ತಯಾರಾಗುತ್ತಿದೆ. ಮಧುಕುಮಾರ್‌ ಹಾಗೂ ಮಂಜುನಾಥ್‌ ನಿರ್ಮಾಪಕರು. ಚಿತ್ರಕ್ಕೆ ಶ್ರೀಧರ್‌ ವಿ. ಸಂಭ್ರಮ್‌ ಸಂಗೀತ ನೀಡಿದ್ದಾರೆ. ನಾಗೇಶ್‌ ಆಚಾರ್ಯ ಕ್ಯಾಮೆರಾ ಹಿಡಿದಿದ್ದಾರೆ. ಮಳವಳ್ಳಿ ಸಾಯಿಕೃಷ್ಣ ಸಂಭಾಷಣೆ ಬರೆದಿದ್ದಾರೆ. ಚಿತ್ರದಲ್ಲಿ ಶ್ರೀನಿವಾಸಮೂರ್ತಿ, ಪದಾ ¾ವಾಸಂತಿ, ಆಶಾಲತಾ, ಮೈಕೋ ನಾಗರಾಜ್‌
ಸೇರಿ ಹಲವರು ನಟಿಸಿದ್ದಾರೆ.

ಟಾಪ್ ನ್ಯೂಸ್

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.