ಮುಂಜಾನೆ ಮಂಜಲ್ಲಿ ಹೆಬ್ಬುಲಿ ಘರ್ಜನೆ


Team Udayavani, Feb 22, 2017, 11:29 AM IST

hebbuli-theatres.jpg

ಸುದೀಪ್‌ ಅಭಿನಯದ “ಹೆಬ್ಬುಲಿ’ ಚಿತ್ರವು ನಾಳೆ ಅಂದರೆ ಗುರುವಾರ (ಫೆಬ್ರವರಿ 23ರಂದು) ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಈ ಚಿತ್ರದ ಬಿಡುಗಡೆಯ ಸಂದರ್ಭದಲ್ಲಿ ಎರಡು ಮಹತ್ವದ ವಿಚಾರಗಳು ನಿಮಗೆ ಗೊತ್ತಿರಲೇಬೇಕು. ಪ್ರಮುಖವಾಗಿ ಚಿತ್ರ ನಾಳೆ ಬೆಳಿಗ್ಗೆ 10.30ಕ್ಕೆ ಶುರುವಾಗಲಿದೆ ಎಂದು ನೀವೇನಾದರೂ ಭಾವಿಸಿದ್ದರೆ ಅದು ತಪ್ಪು. ಚಿತ್ರ ನಾಳೆ ಬೆಳಿಗ್ಗೆ ಬಿಡುಗಡೆಯಾಗುತ್ತಿರುವುದೇನೋ ಹೌದು.

ಆದರೆ, ಅದಕ್ಕಿಂತ ಬಹಳ ಮುಂಚೆಯೇ ಬಿಡುಗಡೆಯಾಗಲಿದೆ. ಯಾವ ಚಿತ್ರಮಂದಿರದಲ್ಲಿ ಎಷ್ಟು ಹೊತ್ತಿಗೆ ಚಿತ್ರ ಬಿಡುಗಡೆಯಾಗುತ್ತದೆ ಎಂಬ ಲಿಸ್ಟ್‌ ಒಂದು ಬಿಡುಗಡೆಯಾಗಿದೆಯಾದರೂ, ನಾಳೆ ಬೆಳಿಗ್ಗೆ ಹೊತ್ತಿಗೆ ಇನ್ನಷ್ಟು ಬದಲಾವಣೆ ಮತ್ತು ಬೆಳವಣಿಗೆಗಳಾಗುವ ಸಾಧ್ಯತೆಗಳಿವೆ. ಇನ್ನು ಸುದೀಪ್‌ ಅಭಿಮಾನಿಗಳೊಂದಿಷ್ಟು ಜನ ಸೇರಿಕೊಂಡು, ಚಿತ್ರದ ಕುರಿತಾದ ಮೊಬೈಲ್‌ ಗೇಮ್‌ ಶುರು ಮಾಡಿದ್ದಾರೆ. ಈಗಾಗಲೇ ಈ ಗೇಮ್‌ ಬಿಡುಗಡೆಯಾಗಿದ್ದಾಗಿದೆ. ಈ ಎರಡೂ ವಿಷಯಗಳ ಬಗ್ಗೆ ಒಂದಿಷ್ಟು ಮಾಹಿತಿ ನಿಮಗಾಗಿ …

435 ಚಿತ್ರಮಂದಿರಗಳಲ್ಲಿ ದಾಖಲೆ ಬಿಡುಗಡೆ: 
“ಹೆಬ್ಬುಲಿ’ ಚಿತ್ರವು ಬಿಡುಗಡೆಯ ವಿಷಯದಲ್ಲಿ ಕನ್ನಡ ಚಿತ್ರರಂಗದಲ್ಲಿ ದೊಡ್ಡ ದಾಖಲೆ ಬರೆಯಲಿದೆ. ಇದುವರೆಗೂ ಯಾವ ಚಿತ್ರವೂ ಅಷ್ಟೊಂದು ಸಂಖ್ಯೆಯ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿಲ್ಲ. ಆದರೆ, “ಹೆಬ್ಬುಲಿ’ ರಾಜ್ಯಾದ್ಯಂತ ಬರೋಬ್ಬರಿ 425 ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗುತ್ತಿದೆ.

ಇನ್ನು ತಮಿಳಿನ ಚಿತ್ರವೊಂದರ ಬಿಡುಗಡೆ ಮುಂದಕ್ಕೆ ಹೋಗಿರುವುದರಿಂದ, ಇನ್ನೂ 10 ಚಿತ್ರಮಂದಿರಗಳು ಹೆಚ್ಚು ಸಿಗುವ ಸಾಧ್ಯತೆ ಇದೆ. ಅಲ್ಲಿಗೆ ಚಿತ್ರವು 435 ಪ್ಲಸ್‌ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗುತ್ತಲಿದೆ. ಒಂದು ವಿಶೇಷವೆಂದರೆ, ಸುಮಾರು 60 ಊರುಗಳಲ್ಲಿ ಎರಡೆರೆಡು ಚಿತ್ರಮಂದಿರಗಳಲ್ಲಿ ಬಿಡುಗಡೆ ಬಿಡುಗಡೆಯಾಗುತ್ತಿರುವುದು. ಮಂಡ್ಯ, ಮೈಸೂರು, ಕೊಳ್ಳೇಗಾಲ ಮುಂತಾದ ಕಡೆ ಎರಡೆರೆಡು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗುತ್ತಿವೆಯಂತೆ.

ಇನ್ನು ಹೊರ ರಾಜ್ಯಗಳಲ್ಲಿ 35ರಿಂದ 40 ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗುತ್ತಿದೆ. ಚೆನ್ನೈ, ಮುಂಬೈ ಅಲ್ಲದೆ. ಕೊಚ್ಚಿನ್‌, ಅಹ್ಮದಾಬಾದ್‌, ದೆಹಲಿಗಳಲ್ಲೂ ಚಿತ್ರ ಬಿಡುಗಡೆಯಾಗುತ್ತಿದೆ. ಇನ್ನು ಚಿತ್ರವು ಹೊರದೇಶಗಳಲ್ಲೂ ಬಿಡುಗಡೆಯಾಗಬಹುದು ಎಂದುಕೊಂಡರೆ ತಪ್ಪು. ಏಕೆಂದರೆ, ಹೊರದೇಶಗಳಲ್ಲಿ ಎರಡು ವಾರಗಳ ನಂತರ ಬಿಡುಗಡೆ ಮಾಡುವುದಕ್ಕೆ ಯೋಚಿಸುತ್ತಿದೆ ಚಿತ್ರತಂಡ.

ಇನ್ನು ಬೆಂಗಳೂರು, ದಾವಣಗೆರೆ, ಚಿತ್ರದುರ್ಗ, ಬಳ್ಳಾರಿ, ಶಿವಮೊಗ್ಗ ಸೇರಿದಂತೆ ಹಲವು ನಗರಗಳಲ್ಲಿ ಬೆಳ್ಳಂಬೆಳಿಗ್ಗೆಯೇ ಚಿತ್ರ ಶುರುವಾಗಲಿದೆ. ಗೌಡನಪಾಳ್ಯ ಶ್ರೀನಿವಾಸ ಎಂಬ ಚಿತ್ರಮಂದಿರದಲ್ಲಿ ಸುದೀಪ್‌ ಅಭಿಮಾನಿಯೊಬ್ಬರು ಬೆಳಿಗ್ಗೆ ಆರು ಗಂಟೆಯ ಪ್ರದರ್ಶನಕ್ಕೆ 650 ಟಿಕೆಟುಗಳನ್ನು ಖರೀದಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಇನ್ನು ಬುಕ್‌ಮೈಶೋನಲ್ಲಿ ಗುರುವಾರದ ಹಲವು ಪ್ರದರ್ಶನಗಳು ಬುಕ್‌ ಆಗಿವೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.