ನಟಿ ಅಮೂಲ್ಯಗೆ ಕೂಡಿ ಬಂತು ಕಂಕಣ ಬಲ; ವರನ ಬಗ್ಗೆ ಗೊತ್ತೆ…
Team Udayavani, Feb 23, 2017, 6:22 PM IST
ಬೆಂಗಳೂರು: ಸ್ಯಾಂಡಲ್ ವುಡ್ ನಟಿ ಅಮೂಲ್ಯಗೆ ಕಂಕಣ ಬಲ ಕೂಡಿ ಬಂದಿದೆ. ಅರೇ ಅದ್ಯಾರಪ್ಪ ಅದೃಷ್ಟವಂತ ಅಂತ ಕುತೂಹಲವೇ…ತಾಳಿ
ಆರ್.ಆರ್.ನಗರದ ಮಾಜಿ ಕಾರ್ಪೋರೇಟರ್ ರಾಮಚಂದ್ರ ಅವರ ಪುತ್ರ ಜಗದೀಶ್ ಜೊತೆ ನಿಶ್ಚಿತಾರ್ಥ ನಡೆಸಲು ಮಾತುಕತೆ ನಡೆದಿದೆ ಎಂದು ಮಾಧ್ಯಮದ ವರದಿಗಳು ತಿಳಿಸಿವೆ.
ಗೋಲ್ಡನ್ ಸ್ಟಾರ್ ಗಣೇಶ್ ಮನೆಯಲ್ಲಿ ಅಮೂಲ್ಯ ಮತ್ತು ಜಗದೀಶ್ ವಿವಾಹದ ಕುರಿತು ಮಾತುಕತೆ ನಡೆಸಲಾಗಿದೆ. ಅದರಂತೆ ಮಾರ್ಚ್ 6ರಂದು ಅಮೂಲ್ಯ ಮತ್ತು ಜಗದೀಶ್ ನಿಶ್ಚಿತಾರ್ಥ ನಡೆಯಲಿದೆ. ಆರ್.ಜಗದೀಶ್ ಲಂಡನ್ ನಲ್ಲಿ ಎಂಬಿಎ ಪದವಿ ಪಡೆದಿರುವುದಾಗಿ ಕುಟುಂಬದ ಮೂಲಗಳು ತಿಳಿಸಿವೆ.