ನಸುಕಲ್ಲೇ “ರಾಜಕುಮಾರ” ದರ್ಶನ, ಫ್ಯಾನ್ಸ್ ಗೆ ಹಬ್ಬ


Team Udayavani, Mar 23, 2017, 3:51 PM IST

Rajakumara.jpg

ಪುನೀತ್‌ ರಾಜಕುಮಾರ್‌ ಅಭಿನಯದ “ರಾಜಕುಮಾರ’ ಚಿತ್ರದ ಬಿಡುಗಡೆಗೆ ವೇದಿಕೆ ಸಜ್ಜಾಗಿದೆ. ಚಿತ್ರ ನಾಳೆ ಕರ್ನಾಟಕದಲ್ಲಿ 300ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಚಿತ್ರ ಬಿಡುಗಡೆಗೆ ಈಗಾಗಲೇ ಅಭಿಮಾನಿಗಳು ಕಾದು ಕುಳಿತಿದ್ದು, ನಾಳೆಯ ಪ್ರದರ್ಶನದ ಟಿಕೇಟುಗಳು ಈಗಾಗಲೇ ಹಲವು ಕಡೆ ಮಾರಾಟವಾಗಿದೆ.

ಈ ಹಿಂದೆ ಪುನೀತ್‌ ಅಭಿನಯದ ಕೆಲವು ಚಿತ್ರಗಳು, ಬೆಳಿಗ್ಗೆ ಬಹಳ ಬೇಗ ಪ್ರದರ್ಶನ ಕಂಡಿದ್ದವು. “ರಾಜಕುಮಾರ’ ಚಿತ್ರದ ವಿಷಯದಲ್ಲೂ ಅದು ಮುಂದುವರೆದಿದೆ. ರಾಜ್ಯದ ಹಲವು ಚಿತ್ರಮಂದಿರಗಳಲ್ಲಿ ಚಿತ್ರವು, ಬೆಳಿಗ್ಗೆ 7ಕ್ಕೆ ಪ್ರದರ್ಶನ ಕಾಣುತ್ತಿದೆ. ಇನ್ನು ಬೆಂಗಳೂರಿನ ಗೌಡನಪಾಳ್ಯದಲ್ಲಿರುವ
ಶ್ರೀನಿವಾಸ ಚಿತ್ರಮಂದಿರದಲ್ಲಿ ಬೆಳಿಗ್ಗೆ ಐದಕ್ಕೆ ಮೊದಲ ಪ್ರದರ್ಶನ ಶುರುವಾದರೆ, ತಾವರೆಕೆರೆಯ ಬಾಲಾಜಿ ಚಿತ್ರಮಂದಿರದಲ್ಲಿ ಬೆಳಿಗ್ಗೆ ಐದು ಮುಕ್ಕಾಲಿಗೆ ಮೊದಲ ಪ್ರದರ್ಶನ ಶುರುವಾಗಲಿದೆಯಂತೆ. ಇನ್ನೂ ಒಂದು ವಿಶೇಷವೆಂದರೆ, ಎಲ್ಲಾ ಮಲ್ಟಿಪ್ಲೆಕ್ಸ್‌ಗಳಲ್ಲೂ ಪ್ರದರ್ಶನಗಳ ಸಂಖ್ಯೆಯನ್ನು ಏರಿಸಿರುವುದು.

ಮೈಸೂರಿನ ಡಿಆರ್‌ಸಿ ಮಾಲ್‌ನಲ್ಲಿ 9 ಪ್ರದರ್ಶನಗಳನ್ನು ಮೊದಲು ನೀಡಲಾಗಿತ್ತಂತೆ. ಅವೆಲ್ಲಾ ಹೌಸ್‌ಫ‌ುಲ್‌ ಆದ ಕಾರಣ ಇನ್ನೊಂದು ಶೋ ನೀಡಲಾಗಿದೆ ಎನ್ನುತ್ತಾರೆ ನಿರ್ದೇಶಕ ಸಂತೋಷ್‌ ಆನಂದ್‌ರಾಮ್‌. ಇನ್ನು ಮಾಲ್‌ ಆಫ್ ಮೈಸೂರುನಲ್ಲಿ ಐದು ಪ್ರದರ್ಶನಗಳನ್ನು ನೀಡಲಾಗಿತ್ತಂತೆ. ಅವೆಲ್ಲಾ ಹೌಸ್‌ಫ‌ುಲ್‌ ಆದ ಕಾರಣ, ಇನ್ನೂ ಐದು ಪ್ರದರ್ಶನಗಳನ್ನು ಹೆಚ್ಚಿಗೆ ನೀಡಲಾಗಿರುವುದು ವಿಶೇಷ.

ಕರ್ನಾಟಕದಲ್ಲಿ 300ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗುವುದರ ಜೊತೆಗೆ ಮುಂದಿನ ವಾರದಿಂದ ಮುಂಬೈ, ಪೂನಾ, ಚೆನ್ನೈಗಳಲ್ಲೂ ಚಿತ್ರ ಬಿಡುಗಡೆಯಾಗುತ್ತಿದೆಯಂತೆ. ರಾಜಾಸ್ಥಾನದಲ್ಲಿ ಕನ್ನಡಿಗರು ಚಿತ್ರ ನೋಡಬೇಕು ಎಂದು ತಮ್ಮ ಆಸೆ ವ್ಯಕ್ತಪಡಿಸಿದರಂತೆ. ಅದೇ ಕಾರಣಕ್ಕೆ ನಿರ್ಮಾಪಕ ವಿಜಯಕುಮಾರ್‌ ಕಿರಗಂದೂರು, ಚಿತ್ರವನ್ನು ಉಚಿತವಾಗಿ ತೋರಿಸುತ್ತಿದ್ದಾರಂತೆ. ಇನ್ನು ಚಿತ್ರವು ಅಮೇರಿಕಾದಲ್ಲಿ ಮಾರ್ಚ್‌ 29ರಂದು, ಇಂಗ್ಲೆಂಡ್‌ನ‌ಲ್ಲಿ ಏಪ್ರಿಲ್‌ ಏಳರಂದು, ಯೂರೋಪ್‌ನಲ್ಲಿ ಏಪ್ರಿಲ್‌ ಏಳರಂದು, ಸಿಂಗಾಪೂರ್‌ನಲ್ಲಿ ಮಾರ್ಚ್‌ 29ರಂದು, ಕೆನಡಾದಲ್ಲಿ ಏಪ್ರಿಲ್‌ ಒಂದರಂದು ಚಿತ್ರ
ಬಿಡುಗಡೆಯಾಗುತ್ತಿದೆಯಂತೆ.

“ರಾಜಕುಮಾರ’ ಚಿತ್ರವನ್ನು ಸಂತೋಷ್‌ ಆನಂದರಾಮ್‌ ಕಥೆ-ಚಿತ್ರಕಥೆ ಬರೆದು ನಿರ್ದೇಶಿಸಿದ್ದು, ಪುನೀತ್‌  ರಾಜಕುಮಾರ್‌ ಜೊತೆಗೆ ಪ್ರಿಯಾ ಆನಂದ್‌ ನಾಯಕಿಯಾಗಿ ನಟಿಸಿದ್ದಾರೆ. ಇನ್ನು, ಚಿತ್ರದಲ್ಲಿ ಶರತ್‌, ಪ್ರಕಾಶ್‌ ರೈ, ಅನಂತ್‌ ನಾಗ್‌, ಅಶೋಕ್‌, ಭಾರ್ಗವಿ ನಾರಾಯಣ್‌, ಹೊನ್ನಾವಳ್ಳಿ
ಕೃಷ್ಣ ಸೇರಿದಂತೆ ಸಾಕಷ್ಟು ಜನಪ್ರಿಯ ಕಲಾವಿದರು ಈ ಚಿತ್ರದಲ್ಲಿ ನಟಿಸಿದ್ದಾರೆ.ವಿ. ಹರಿಕೃಷ್ಣ ಚಿತ್ರಕ್ಕೆ ಸಂಗೀತ ಸಂಯೋಜಿಸಿದ್ದಾರೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.