ಕಾಶೀನಾಥ್‌ ಎಂಬ ಓಳ್‌ ಮುನಿಸ್ವಾಮಿ


Team Udayavani, Apr 19, 2017, 11:36 AM IST

IMG-20170418-WA0015.jpg

“ಜಲ್ಸಾ’ ಸಿನಿಮಾ ಮೂಲಕ ಹೀರೋ ಆಗಿದ್ದ ನಿರಂಜನ್‌ ಒಡೆಯರ್‌ ಈಗ ಇನ್ನೊಂದು ಸಿನಿಮಾ ಒಪ್ಪಿಕೊಂಡಿದ್ದಾರೆ. ಮೊದಲ ಸಿನಿಮಾ ಬಳಿಕ ಸಾಕಷ್ಟು ಕಥೆ ಕೇಳಿದ್ದ ಅವರಿಗೆ, ಈಗ ಒಂದು ಕಥೆ ಇಷ್ಟವಾಗಿ ಕ್ಯಾಮೆರಾ ಮುಂದೆ ನಿಲ್ಲೋಕೆ ರೆಡಿಯಾಗಿದ್ದಾರೆ. ಅದು ಆನಂದ ಪ್ರಿಯ ನಿರ್ದೇಶನದ ಸಿನಿಮಾ. ಆ ಚಿತ್ರಕ್ಕೆ ನಿರ್ದೇಶಕರು “ಓಳ್‌ ಮುನಿಸ್ವಾಮಿ’ ಎಂದು ನಾಮಕರಣ ಮಾಡಿದ್ದಾರೆ.

ಚಿತ್ರದ ಶೀರ್ಷಿಕೆ ಕೇಳಿದ ಮೇಲೆ ಇದೊಂದು ಪಕ್ಕಾ ಹಾಸ್ಯಮಯ ಸಿನಿಮಾ ಅಂತ ಹೇಳಬೇಕಿಲ್ಲ. ಇನ್ನೊಂದು ವಿಷಯವೆಂದರೆ, ಈ ಸಿನಿಮಾದಲ್ಲಿ ಹಿರಿಯ ನಟ ಕಾಶೀನಾಥ್‌ ಪ್ರಮುಖ ಪಾತ್ರ ನಿರ್ವಹಿಸುತ್ತಿದ್ದಾರೆ. ಇದು ಅವರ 50ನೇ ಸಿನಿಮಾ ಅನ್ನೋದು ವಿಶೇಷ. ಕಾಶೀನಾಥ್‌ ಇದ್ದಾರೆ ಅಂದಮೇಲೆ ಇದು ಪಕ್ಕಾ ಮನರಂಜನಾತ್ಮಕ ಸಿನಿಮಾ ಅಂತ ಪ್ರತ್ಯೇಕವಾಗಿ ಹೇಳಬೇಕಿಲ್ಲ. 

ಅಂದಹಾಗೆ, ಈ ಚಿತ್ರ ಸಮೂಹ ಟಾಕೀಸ್‌ ಬ್ಯಾನರ್‌ನಡಿ ನಿರ್ಮಾಣ ಮಾಡಲಾಗುತ್ತಿದೆ. “ಕ್ರ್ಯಾಕ್‌’ ಚಿತ್ರ ನಿರ್ಮಿಸಿರುವ ಸಮೂಹ ಟಾಕೀಸ್‌ ಈ ಚಿತ್ರಕ್ಕೂ ಹಣ ಹಾಕುತ್ತಿದೆ. ಹಾಗಾದರೆ ಇಲ್ಲಿ “ಓಳ್‌ ಮುನಿಸ್ವಾಮಿ’ ಯಾರು? ಈ ಪ್ರಶ್ನೆಗೆ ಉತ್ತರ ಕೊಡುವ ನಿರ್ದೇಶಕ ಆನಂದಪ್ರಿಯ, ಅದು ಕಾಶೀನಾಥ್‌ ಎನ್ನುತ್ತಾರೆ. ಕಾಶೀನಾಥ್‌ ಅವರನ್ನಿಟ್ಟುಕೊಂಡು ಒಂದು ಒಳ್ಳೆಯ ಕಥೆ ಮಾಡಬೇಕು ಅಂತೆನಿಸಿತ್ತು. ಆಗ ಹುಟ್ಟುಕೊಂಡಿದ್ದೇ ಈ ಕಥೆ.

ಕಾಶೀನಾಥ್‌ ಬಳಿ ಹೋಗಿ, ಇಂಥದ್ದೊಂದು ಕಥೆ ಪಾತ್ರ ಇದೆ ಅಂತ ಹೇಳಿದ ಕೂಡಲೇ, ಖುಷಿಯಿಂದ ಒಪ್ಪಿದ್ದಾರೆ. ಇದು ಅವರ 50ನೇ ಸಿನಿಮಾ ಅನ್ನೋದು ಇನ್ನೊಂದು ಖುಷಿಯ ವಿಷಯ. ಅವರನ್ನು ನಿರ್ದೇಶಿಸುತ್ತಿರುವುದು ನನ್ನ ಅದೃಷ್ಟ ಎನ್ನುವ ಅವರು, “ಇದೊಂದು ಸಮಾಜದ ವಿಡಂಬನಾತ್ಮಕ ಕಥೆ. ಭಾವನೆಗಳ ತೊಳಲಾಟ ಸೇರಿದಂತೆ ದೇವ್ರು ದಿಂಡಿರು, ನಂಬಿಕೆ, ಪ್ರೀತಿ ಮತ್ತು ಬದುಕು ಇದೆಲ್ಲದರ ಹೂರಣವೇ “ಓಳ್‌ ಮುನಿಸ್ವಾಮಿ’ ಎಂದು ವಿವರ ಕೊಡುತ್ತಾರೆ.

ಸಮಾಜದಲ್ಲಿ ಸರಿಯಾದ ಕೆಲಸ ಮಾಡಲು ಹೊರಟರೆ, ನೂರೆಂಟು ಪ್ರಶ್ನೆಗಳು ಎದುರಾಗುತ್ತವೆ. ಅದೇ ತಪ್ಪು ಕೆಲಸ ನಡೆಯುತ್ತಿದ್ದರೆ ಪ್ರಶ್ನಿಸಲು ಯಾರೂ ಮುಂದಾಗಲ್ಲ. ಸಮಾಜ ಇಂದು ಬದುಕನ್ನು ನೋಡುವ ದೃಷ್ಟಿಕೋನ ಬದಲಾಗಿದೆ. ಅದೇ ವಿಷಯಗಳು ಇಲ್ಲಿ ಹೈಲೆಟ್‌ ಆಗಿರಲಿವೆ. ಇಡೀ ಕಥೆ ಹಾಸ್ಯಮಯವಾಗಿ ಸಾಗಲಿದೆ ಎನ್ನುವ ಆನಂದಪ್ರಿಯ, ನಿರ್ದೇಶನದ ಜತೆಗೆ ಕಥೆ, ಚಿತ್ರಕಥೆ, ಸಂಭಾಷಣೆ ಮತ್ತು ಸಾಹಿತ್ಯದ ಜವಾಬ್ದಾರಿ ಹೊತ್ತಿದ್ದಾರೆ.

ಈಗಾಗಲೇ ಸ್ಕ್ರಿಪ್ಟ್ ಪೂಜೆ ನಡೆದಿದ್ದು, ಮೇ 3 ರಿಂದ 30 ದಿನಗಳ ಕಾಲ ಮೂಡಿಗೆರೆ, ಚಿಕ್ಕಮಗಳೂರು, ದೇವರಮನೆ ಕಾಡು ಸೇರಿದಂತೆ ಇತರೆ ಸ್ಥಳಗಳಲ್ಲಿ ಚಿತ್ರೀಕರಣ ನಡೆಯಲಿದೆ. ಅಖೀಲಾ ಎಂಬ ಹೊಸ ಹುಡುಗಿ ನಾಯಕಿಯಾಗಿದ್ದಾರೆ. ನಾಗಾರ್ಜುನ್‌ ಕ್ಯಾಮೆರಾ ಹಿಡಿದರೆ, ಸತೀಶ್‌ ಮೂರು ಹಾಡುಗಳಿಗೆ ಸಂಗೀತ ನೀಡಲಿದ್ದಾರೆ.

ಟಾಪ್ ನ್ಯೂಸ್

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

vasishta simha’s VIP movie

Vasishta Simha: ಫ‌ಸ್ಟ್‌ಲುಕ್‌ ನಲ್ಲಿ ‘ವಿಐಪಿ’ ಎಂಟ್ರಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Mollywood: “ಆಡುಜೀವಿತಂ” ಮೇಲೆ ಪೃಥ್ವಿರಾಜ್‌ ನಿರೀಕ್ಷೆ

Mollywood: “ಆಡುಜೀವಿತಂ” ಮೇಲೆ ಪೃಥ್ವಿರಾಜ್‌ ನಿರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.