ದೇವೇಗೌಡರಿಂದ ಇಂದು ಬಂಗಾರ ವೀಕ್ಷಣೆ
Team Udayavani, May 22, 2017, 11:58 AM IST
ಶಿವರಾಜಕುಮಾರ್ ನಾಯಕರಾಗಿರುವ “ಬಂಗಾರ ಸನ್ಆಫ್ ಬಂಗಾರದ ಮನುಷ್ಯ’ ಚಿತ್ರದ ಬಗ್ಗೆ ಎಲ್ಲೆಡೆಯಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಚಿತ್ರದಲ್ಲಿ ರೈತರ ಸಮಸ್ಯೆಗಳನ್ನು ತುಂಬಾ ವಿವರವಾಗಿ ಮತ್ತು ಪರಿಣಾಮಕಾರಿಯಾಗಿ ತೋರಿಸಲಾಗಿದೆ. ಈಗ ಈ ಚಿತ್ರವನ್ನು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ವೀಕ್ಷಿಸುವ ಮನಸ್ಸು ಮಾಡಿದ್ದಾರೆ.
ಹೌದು, ಇಂದು ಮೈಸೂರಿನ ಡಿಆರ್ಸಿ ಮಾಲ್ನಲ್ಲಿ ದೇವೇಗೌಡರು “ಬಂಗಾರ ಸನ್ಆಫ್ ಬಂಗಾರದ ಮನುಷ್ಯ’ ಚಿತ್ರವನ್ನು ವೀಕ್ಷಿಸಲಿದ್ದಾರೆ. ಈ ಮೂಲಕ ರೈತರ ಸಮಸ್ಯೆಗಳ ಕುರಿತು ಮಾಡಿದ ಸಿನಿಮಾವನ್ನು ರೈತ ಪರ ಸಾಕಷ್ಟು ಹೋರಾಟ ಮಾಡಿದ ದೇವೇಗೌಡರು ವೀಕ್ಷಿಸುತ್ತಿದ್ದಾರೆಂದು ಚಿತ್ರತಂಡ ಸಹಜವಾಗಿಯೇ ಖುಷಿಯಾಗಿದೆ.
ಈ ಚಿತ್ರ ಜಯಣ್ಣ ಕಂಬೈನ್ಸ್ ನಡಿ ನಿರ್ಮಾಣವಾಗಿದ್ದು, ಯೋಗಿ ಜಿ ರಾಜ್ ನಿರ್ದೇಶನ ಮಾಡಿದ್ದರು. ಇತ್ತೀಚೆಗಷ್ಟೇ ಪುನೀತ್ರಾಜಕುಮಾರ್ ಅವರ “ರಾಜ್ಕುಮಾರ’ ಚಿತ್ರವನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಮೈಸೂರಿನ ಡಿಆರ್ಸಿ ಮಾಲ್ನಲ್ಲೇ ನೋಡಿದ್ದರು. ಈಗ ಶಿವರಾಜಕುಮಾರ್ ಅವರ ಚಿತ್ರವನ್ನು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ವೀಕ್ಷಿಸಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಕಾಂಗ್ರೆಸ್ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ
Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ
Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ