ಸರ್ಕಾರಿ ಹಾಡು ಬಂತು ದೇವರ ಜೊತೆ ಚಂದನ್‌ ಶೆಟ್ಟಿ


Team Udayavani, May 22, 2017, 11:58 AM IST

Sarkari-Kelasa-Devara-Kelas.jpg

ಸರ್ಕಾರದ ಹಾಡು ಹೊರಬಂದಿದೆ. ಜನ ಕೂಡಾ ಕೇಳಿ ಖುಷಿಪಟ್ಟಿದ್ದಾರೆ! ಹೀಗೆಂದರೆ ನಿಮಗೆ ಆಶ್ಚರ್ಯವಾಗಬಹುದು. ಇಲ್ಲಿ ನಾವು ಹೇಳುತ್ತಿರುವುದು “ಸರ್ಕಾರಿ ಕೆಲಸ ದೇವರ ಕೆಲಸ’ ಚಿತ್ರದ ಆಡಿಯೋ ಬಗ್ಗೆ. “ಜೋಗಿ’ ಚಿತ್ರ ನಿರ್ಮಿಸಿರುವ ಅಶ್ವಿ‌ನಿ ರಾಮ್‌ ಪ್ರಸಾದ್‌ ನಿರ್ಮಾಣದ “ಸರ್ಕಾರಿ ಕೆಲಸ ದೇವರ ಕೆಲಸ’ ಚಿತ್ರದ ಆಡಿಯೋ ಇತ್ತೀಚೆಗೆ ಉತ್ತರ ಕರ್ನಾಟಕದ ತವರೂರು ಎನಿಸಿರುವ ವಿಜಾಪುರದಲ್ಲಿ ಅದ್ಧೂರಿಯಾಗಿ ಬಿಡುಗಡೆಯಾಗಿದೆ.

15000 ಅಧಿಕ ಜನರ ಎದುರು ಆಡಿಯೋ ಬಿಡುಗಡೆ ಮಾಡಿದ ಚಿತ್ರತಂಡ ಖುಷಿಯಾಗಿದೆ. ಈ ಚಿತ್ರದ ಹಾಡಿನಲ್ಲಿ ಚಂದನ್‌ ಶೆಟ್ಟಿ ಕೂಡಾ ಕಾಣಿಸಿಕೊಂಡಿದ್ದಾರೆ. “ದಗಲ್‌ಬಾಜಿ’ ಹಾಡುನಲ್ಲಿ ಚಂದನ್‌ ಶೆಟ್ಟಿ ಇಲ್ಲಿ ಮಾಡರ್ನ್ ಸ್ವಾಮೀಜಿ ಗೆಟಪ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಮೊದಲ ಬಾರಿಗೆ ಹಿರಿತೆರೆಯಲ್ಲಿ ಕಾಣಿಸಿಕೊಂಡಿರುವ ಚಂದನ್‌ ಶೆಟ್ಟಿ ಸಹಜವಾಗಿಯೇ ಖುಷಿಯಾಗಿದ್ದಾರೆ.”ಹಾಡು ತುಂಬಾ ಚೆನ್ನಾಗಿದೆ. ಸಾಮಾಜಿಕ ಕಳಕಳಿಯ ಹಾಗೂ ಇಂದಿನ ವ್ಯವಸ್ಥೆಯನ್ನು ಎತ್ತಿ ತೋರಿಸುವಂತಹ ಹಾಡು.

ಹಾಗಾಗಿ, ನಾನು ಆ ಹಾಡಿನಲ್ಲಿ ಕಾಣಿಸಿಕೊಂಡೆ. ಎಲ್ಲರಿಂದಲೂ ಹಾಡುಗಳಿಗೆ ಮೆಚ್ಚುಗೆ ವ್ಯಕ್ತವಾಗಿದೆ’ ಎನ್ನುವುದು ಚಂದನ್‌ ಶೆಟ್ಟಿ ಮಾತು. ಚಿತ್ರದ “ದಗಲ್‌ಬಾಜಿ’ ಹಾಡಿನ ಮಾತನಾಡುವ ಗೀತರಚನೆಕಾರ ವಿ.ನಾಗೇಂದ್ರಪ್ರಸಾದ್‌, ಸರ್ಕಾರದ ವ್ಯವಸ್ಥೆ, ಅಧಿಕಾರ ಸೇರಿದಂತೆ ಇತರ ವಿಷಯಗಳನ್ನು ಇಲ್ಲಿ ವಿಡಂಬನಾತ್ಮಕವಾಗಿ ಹೇಳಲಾಗಿದೆ. ನಿರ್ಮಾಪಕರಿಗೆ ಸಿನಿಮಾ ಹಾಗೂ ಸಂಗೀತ ಕ್ಷೇತ್ರದಲ್ಲಿ ಸಾಕಷ್ಟು ಅನುಭವವಿದ್ದು, ಜನರ ನಾಡಿಮೀಡಿತ ತಿಳಿದ ಕಾರಣ ಒಳ್ಳೆಯ ಹಾಡು ಗಳನ್ನು ಮಾಡಿಸಿದ್ದಾರೆ’ ಎನ್ನುತ್ತಾರೆ ಚಂದನ್‌ ಶೆಟ್ಟಿ.

ಹೊರಟಿದೆ ಸರ್ಕಾರಿ ರಥ: “ಸರ್ಕಾರಿ ಕೆಲಸ ದೇವರ’ ಕೆಲಸ ಚಿತ್ರವನ್ನು ಜನರಿಗೆ ತಲುಪಿಸುವ ಉದ್ದೇಶದಿಂದ “ಸರ್ಕಾರಿ ರಥ’ ಎಂಬ ವಾಹನವೊಂದನ್ನು ಸಿದ್ಧಪಡಿಸಿದ್ದು, ಈ ವಾಹನ ರಾಜ್ಯಾದ್ಯಂತ ಸಂಚರಿಸಿ ಸಿನಿಮಾ ಬಗ್ಗೆ ಜನರಿಗೆ ಮಾಹಿತಿ ನೀಡಲಿದೆ. ಮೈಸೂರು, ಹಾಸನ, ಗದಗ, ರಾಣೆಬೆನ್ನೂರು, ಹುಬ್ಬಳ್ಳಿ ಸೇರಿದಂತೆ ಅನೇಕ ಕಡೆ ಸಂಚರಿಸಿ ಸಿನಿಮಾದ ಹಾಡು, ಟೀಸರ್‌ ಪ್ರದರ್ಶನ ಮಾಡಲಿದೆ.

“ಸಿನಿಮಾ ಬಿಡುಗಡೆಗೆ ಮುನ್ನ ಸಿನಿಮಾ ಬಗ್ಗೆ ಜನರಿಗೆ ಮಾಹಿತಿ ಇರಬೇಕು. ಆ ಸಿನಿಮಾದೊಳಗಡೆ ಏನಿರಬಹುದೆಂಬ ಕಲ್ಪನೆ ಅವರಿಗೆ ಬರಬೇಕು. ಆ ಕಾರಣದಿಂದ “ಸರ್ಕಾರಿ ರಥ’ ಎಂಬ ವ್ಯಾನ್‌ವೊಂದನ್ನು ಸಿದ್ಧಪಡಿಸಿದ್ದೇವೆೆ’ ಎನ್ನುವುದು ನಿರ್ಮಾಪಕ ಅಶ್ವಿ‌ನಿ ರಾಮ್‌ಪ್ರಸಾದ್‌ ಮಾತು. 

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.