ಗಣೇಶ ಪಟಾಕಿ ಪೊಲೀಸ್‌ ಗೆಟಪ್‌ನಲ್ಲಿ ಬೇಜಾನ್‌ ಹವಾ


Team Udayavani, May 24, 2017, 11:32 AM IST

ganesh-in-pataki.jpg

ಗಣೇಶ್‌ ಅಭಿನಯದ ನಾಡಿದ್ದು ಅಂದರೆ ಮೇ 26 ರಂದು ರಾಜ್ಯಾದ್ಯಂತ “ಪಟಾಕಿ’ ಸಿಡಿಯುವುದಕ್ಕೆ ಸಜ್ಜಾಗಿದೆ. ಅನುಪಮ ಸೇರಿದಂತೆ 200ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಈ ಚಿತ್ರ ಬಿಡುಗಡೆಯಾಗುತ್ತಿದೆ. ನಿರ್ಮಾಪಕ ಎಸ್‌.ವಿ.ಬಾಬು ಅವರು ಈ ಬಾರಿ ನಿರ್ಮಾಣದ ಜೊತೆಗೆ ವಿತರಣೆಗೂ ಇಳಿದಿದ್ದಾರೆ. ವಿತರಣೆ ಮಾಡುವುದಕ್ಕೆಂದೇ ಹೊಸ ಸಂಸ್ಥೆ ಹುಟ್ಟುಹಾಕಿರುವ ಬಾಬು, ತಮ್ಮ ಸಂಸ್ಥೆಯ ಮೊದಲ ಸಿನಿಮಾವಾಗಿ ತಮ್ಮದೇ ನಿರ್ಮಾಣದ “ಪಟಾಕಿ’ಯನ್ನು ವಿತರಣೆ ಮಾಡಲಿದ್ದಾರೆ.

ಗಣೇಶ್‌ ಇದುವರೆಗೂ ಮಾಡಿದ ಪಾತ್ರವೇ ಬೇರೆ, ಈ ಶುಕ್ರವಾರ ಬಿಡುಗಡೆಯಾಗುತ್ತಿರುವ “ಪಟಾಕಿ’ ಚಿತ್ರದ ಪಾತ್ರವೇ ಇದೆ. ಈ ಚಿತ್ರದಲ್ಲಿ ಅವರು ಮೊದಲ ಬಾರಿಗೆ ಎ.ಸಿ.ಪಿಯಾಗಿ ಕಾಣಿಸಿಕೊಂಡಿದ್ದಾರೆ. “ನಿಜಕ್ಕೂ ಸವಾಲಿನ ಪಾತ್ರ. ಬಹಳ ಖುಷಿಯಿಂದ ಈ ಚಿತ್ರದಲ್ಲಿ ನಟಿಸಿದ್ದೀನಿ. ಸಾಯಿಕುಮಾರ್‌ ಜೊತೆಗೆ ಮೊದಲ ಬಾರಿಗೆ ನಟಿಸಿದ್ದೇನೆ. ಅವರ ಪಾತ್ರ ನೋಡಿ ಥ್ರಿಲ್‌ ಆದವರು ನಾವು. ಅವರೆದುರು ನಿಂತು ಡೈಲಾಗ್‌ ಹೊಡೆಯ ಬೇಕಾಗಿತ್ತು. ಈ ಚಿತ್ರ ನಿಜಕ್ಕೂ ಪ್ರೇಕ್ಷಕರ ನಿರೀಕ್ಷೆಗಳನ್ನು ಮುಟ್ಟುತ್ತದೆ’ ಎನ್ನುತ್ತಾರೆ ಗಣೇಶ್‌.

ಈ ಹಿಂದೆ ಸ್ವಮೇಕ್‌ ಸಿನಿಮಾಗಳನ್ನೇ ಮಾಡಿಕೊಂಡು ಬಂದಿರುವ ನಿರ್ದೇಶಕ ಮಂಜು ಸ್ವರಾಜ್‌ ಮೊದಲ ಬಾರಿಗೆ ರೀಮೇಕ್‌ ಮಾಡಿದ ಸಿನಿಮಾವಿದು. ಹೇಳಿಕೊಳ್ಳಲು ಇದು ರೀಮೇಕ್‌ ಸಿನಿಮಾವಾದರೂ ಕನ್ನಡದ ನೇಟಿವಿಟಿಗೆ ತಕ್ಕಂತೆ ಸಾಕಷ್ಟು ಬದಲಾವಣೆಗಳನ್ನು ಕೂಡಾ ಮಾಡಿಕೊಂಡಿದ್ದಾರಂತೆ ಮಂಜು ಸ್ವರಾಜ್‌. “ಮೂಲ ಕಥೆಯ ಒನ್‌ಲೈನ್‌ ಇಟ್ಟುಕೊಂಡು ಉಳಿದಂತೆ ಸಾಕಷ್ಟು ಬದಲಾವಣೆ ಮಾಡಿಕೊಂಡಿದ್ದೇವೆ. ನಿಮಗೆ ಈ ಚಿತ್ರದಲ್ಲಿ ಶೇ 40 ರಷ್ಟು ಬದಲಾವಣೆ ಕಾಣುತ್ತದೆ.

ನಮ್ಮ ನೇಟಿವಿಟಿಗೆ ತಕ್ಕಂತೆ ಒಂದಷ್ಟು ಬದಲಾವಣೆಗಳನ್ನು ಮಾಡಿಕೊಂಡಿದ್ದೇವೆ. ಅದರಲ್ಲಿ ಕೆಲವು ಪಾತ್ರಗಳನ್ನು ಕೂಡಾ ಸೇರಿಸಿದ್ದೇವೆ. ಮೂಲ ಚಿತ್ರದಲ್ಲಿ ಸಾಧುಕೋಕಿಲ ಅವರ ಪಾತ್ರವೇ ಇಲ್ಲ. ಆದರೆ “ಪಟಾಕಿ’ಯಲ್ಲಿ ಸೇರಿಸಿದ್ದೇವೆ. ಇಲ್ಲಿ ಸಾಧು ಕೋಕಿಲ ಅವರ ಪಾತ್ರ ಎಷ್ಟು ಹೊಂದಿಕೆಯಾಗಿದೆ ಎಂದರೆ ಆ ಪಾತ್ರವನ್ನು ಬಿಟ್ಟು ಸಿನಿಮಾ ನೋಡಲು ಸಾಧ್ಯವಾಗುವುದಿಲ್ಲ’ ಎಂದು ತಾವು ಮಾಡಿಕೊಂಡ ಬದಲಾವಣೆ ಬಗ್ಗೆ ಹೇಳುತ್ತಾರೆ ಮಂಜು ಸ್ವರಾಜ್‌.

ತೆಲುಗಿನ “ಪಟಾಸ್‌’ ಚಿತ್ರದಲ್ಲಿ ನಟಿಸುವಾಗಲೇ, ಅವರು ನಿರ್ಮಾಪಕ ಎಸ್‌.ವಿ. ಬಾಬುಗೆ ಫೋನ್‌ ಮಾಡಿ, ಈ ಚಿತ್ರವನ್ನು ಕನ್ನಡದಲ್ಲಿ ಮಾಡಿದರೆ ಚೆನ್ನಾಗಿರುತ್ತೆ ಎಂದು ಹೇಳಿದ್ದರಂತೆ. “ಈ ಚಿತ್ರವನ್ನು ನನ್ನ ಮಗ ಆದಿ ಜೊತೆಗೆ ಮಾಡಬೇಕು ಅಂತ ಆಸೆ ಇತ್ತು. ಆದರೆ, ಅವನಿಗೆ ಹೆವಿ ಆಗುತ್ತದೆ. ಆ ಪಾತ್ರಕ್ಕೆ ಯಾರು ಸರಿ ಂದು ಯೋಜಿಸಿದಾಗ, ಗಣೇಶ್‌ ಸರಿ ಎನಿಸಿತು. ನಾನು ಅವರ ದೊಡ್ಡ ಅಭಿಮಾನಿ. ಅವರ ಅಭಿನಯ ಬಹಳ ಚೆನ್ನಾಗಿದೆ.

ಇನ್ನು ಚಿತ್ರ ಸಹ ಚೆನ್ನಾಗಿ ಬಂದಿದೆ. ಎಲ್ಲರಿಗೂ ಇಷ್ಟವಾಗುವಂತಹ ಒಂದು ಪ್ಯಾಕೇಜ್‌ ಸಿನಿಮಾ ಇದು’ ಎನ್ನುತ್ತಾರೆ ಸಾಯಿಕುಮಾರ್‌. ಸಾಯಿಕುಮಾರ್‌ ಇಲ್ಲದಿದ್ದರೆ ಈ ಚಿತ್ರ ಆಗುತ್ತಲೇ ಇರಲಿಲ್ಲ ಎಂದವರು ಎಸ್‌.ವಿ. ಬಾಬು. “ಚಿತ್ರದ ರೈಟ್‌ ಕೊಡಿಸಿದ್ದೇ ಅವರು. ಹಾಗಾಗಿ ಅವರೇ ಈ ಚಿತ್ರಕ್ಕೆ ಪ್ರಮುಖ ಕಾರಣ ಎಂದರೆ ತಪ್ಪಿಲ್ಲ. ಇನ್ನು ಗಣೇಶ್‌ಗೆ ಚಿತ್ರ ತೋರಿಸಿದಾಗ, ಅವರು ಎಮೋಷನಲ್‌ ಆಗಿ, ತಕ್ಷಣವೇ ಈ ಚಿತ್ರ ಮಾಡೋಣ ಎಂದರು.

ಮೂಲ ಚಿತ್ರವನ್ನು ಇಲ್ಲಿನ ನೇಟಿವಿಟಿಗೆ ಹೊಂದಿಸಿ ಚಿತ್ರ ಮಾಡಿದ್ದೇವೆ’ ಎನ್ನುತ್ತಾರೆ ನಿರ್ದೇಶಕ ಬಾಬು. ಚಿತ್ರದಲ್ಲಿ ಗಣೇಶ್‌ ಜೊತೆಗೆ ರನ್ಯಾ ರಾವ್‌, ಸಾಯಿಕುಮಾರ್‌, ಸಾಧು ಕೋಕಿಲ, ಆಶೀಶ್‌ ವಿದ್ಯಾರ್ಥಿ, ಪ್ರಿಯಾಂಕಾ, ಧರ್ಮ, ವಿಜಯ್‌ ಚೆಂಡೂರ್‌ ಸೇರಿದಂತೆ ಹಲವರು ನಟಿಸಿದ್ದಾರೆ. ಚಿತ್ರಕ್ಕೆ ಅರ್ಜುನ್‌ ಜನ್ಯ ಅವರ ಸಂಗೀತ ಮತ್ತು ವೆಂಕಟೇಶ್‌ ಅಂಗುರಾಜ್‌ ಅವರ ಛಾಯಾಗ್ರಹಣವಿದೆ.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.