ಗರುಡ ಜೊತೆ ಐಂದ್ರಿತಾ


Team Udayavani, May 29, 2017, 12:03 PM IST

andrita-aray.jpg

ಇತ್ತೀಚೆಗಷ್ಟೇ “ಗರುಡ’ ಎಂಬ ಹೊಸ ಚಿತ್ರದಲ್ಲಿ ದೀಪಾ ಸನ್ನಿಧಿ ನಾಯಕಿಯಾಗಿ ನಟಿಸುತ್ತಿದ್ದಾರೆ ಎಂದು ಸುದ್ದಿಯಾಗಿತ್ತು. ಆ ಚಿತ್ರ ಮುಹೂರ್ತ ಕೂಡ ಕಂಡಿತ್ತು. ಈಗ ಹೊಸ ಸುದ್ದಿ ಎಂದರೆ, ಆ ಚಿತ್ರದಿಂದ ನಟಿ ದೀಪಾ ಸನ್ನಿಧಿ ಔಟ್‌ ಆಗಿದ್ದಾರೆ. ಆ ಜಾಗಕ್ಕೆ ಐಂದ್ರಿತಾ ರೇ ಎಂಟ್ರಿಯಾಗಿದ್ದಾರೆ!

ಹೌದು, ಸಿದ್ಧಾರ್ಥ್ ಮಹೇಶ್‌ ನಾಯಕರಾಗಿದ್ದ “ಗರುಡ’ ಚಿತ್ರದಲ್ಲಿ ದೀಪಾ ಸನ್ನಿಧಿ ನಾಯಕಿ ಅಂತಾನೇ ಜೋರಾಗಿ ಸುದ್ದಿಯಾಗಿತ್ತು. ಮುಹೂರ್ತ ನಡೆಯುವವರೆಗೂ ದೀಪಾ ಸನ್ನಿಧಿ ನಾಯಕಿಯಾಗಿದ್ದರು. ಆದರೆ, ಅದೇನಾಯೊ¤à, ಏನೋ, ದೀಪಾ ಸನ್ನಿಧಿ ಆ ಚಿತ್ರದಿಂದ ಹೊರ ನಡೆದಿದ್ದಾರೆ.

ಹೊರ ಹೋಗಲು ಏನು ಕಾರಣ ಎಂಬುದಕ್ಕೆ ಉತ್ತರವಿಲ್ಲ. ಆದರೆ, ಡೇಟ್‌ ಸಮಸ್ಯೆಯಿಂದಾಗಿಯೇ “ಗರುಡ’ ಸಿನಿಮಾದಲ್ಲಿ ನಟಿಸಲು ಆಗುತ್ತಿಲ್ಲ ಎಂಬ ಕಾರಣ ಕೊಡಲಾಗುತ್ತಿದೆಯಂತೆ. ಅದೇನೆ ಇರಲಿ, ಒಂದು ಚಿತ್ರಕ್ಕೆ ಆಯ್ಕೆಯಾಗಿ, ಮುಹೂರ್ತ ಆಗುವವರೆಗೂ ಡೇಟ್‌ ಸಮಸ್ಯೆ ಕಂಡಿರಲಿಲ್ಲ.

ಈಗ ಡೇಟ್‌ ಹೊಂದಾಣಿಕೆ ಆಗುತ್ತಿಲ್ಲ ಎಂಬ ಕಾರಣದಿಂದ ದೀಪಾ ಸನ್ನಿಧಿ ಹೊರಹೋಗಿದ್ದಾರೆನ್ನಲಾಗಿದೆ.  ದೀಪಾ ಹೊರನಡೆದ ಮೇಲೆ, ಆ ಜಾಗಕ್ಕೆ ಯಾರು ಸೂಕ್ತ ಅಂತ ಚಿತ್ರತಂಡ ತಲೆಕೆಡಿಸಿಕೊಂಡಾಗ, ಅವರ ಎದುರಿಗೆ ಬಂದದ್ದೇ ಐಂದ್ರಿತಾ ರೇ. ಈಗ ಅವರೇ ನಾಯಕಿಯಾಗಿದ್ದಾರೆ.

ಇನ್ನು, ಈ ಚಿತ್ರದಲ್ಲಿ ಆಶಿಕಾ ಕೂಡ ನಟಿಸುತ್ತಿದ್ದಾರೆ. ಈ ಚಿತ್ರಕ್ಕೆ ಪ್ರಸಾದ್‌ ರೆಡ್ಡಿ ನಿರ್ಮಾಪಕರು. ನಿರ್ದೇಶಕ ಧನಕುಮಾರ್‌ಗೆ ಇದು ಚೊಚ್ಚಲ ಸಿನಿಮಾ. ಅಂದಹಾಗೆ, “ಗರುಡ’ ಎಂದರೇನು ಎಂಬ ಪ್ರಶ್ನೆ ಮೂಡುವುದು ಸಹಜ. ಕಥೆಗೂ ಶೀರ್ಷಿಕೆಗೂ ಏನು ಸಂಬಂಧ ಎಂಬ ಪ್ರಶ್ನೆ ಸಹಜವಾಗಿಯೇ ಬರುತ್ತದೆ.

“ಇದೊಂದು ಫ್ಯಾಮಿಲಿ ಡ್ರಾಮಾ. ಆರಾಮವಾಗಿ ಓಡಾಡಿಕೊಂಡಿರುವ ಹುಡುಗನೊಬ್ಬನ ಫ್ಯಾಮಿಲಿಗೆ ಏನಾದರೂ ತೊಂದರೆಯಾದರೆ ಆತ ಯಾವ ರೀತಿ ರೆಬೆಲ್‌ ಆಗುತ್ತಾನೆ ಎಂಬ ಅಂಶದೊಂದಿಗೆ ಸಿನಿಮಾ ಸಾಗಲಿದೆಯಂತೆ. ಇಲ್ಲಿ ನಾಯಕನ ಆ್ಯಟಿಟ್ಯೂಡ್‌ಗೂ ಗರುಡದ ವರ್ತನೆಗೂ ಸಾಮ್ಯತೆ ಇದೆಯಂತೆ.

ಹಾಗಾಗಿ, “ಗರುಡ’ ಎಂಬ ಟೈಟಲ್‌ ಇಟ್ಟಿದ್ದಾರೆ ನಿರ್ದೇಶಕರು. ಚಿತ್ರದಲ್ಲಿ ಆದಿ ಲೋಕೇಶ್‌, ರಂಗಾಯಣ ರಘು, ಮುಖ್ಯಮಂತ್ರಿ ಚಂದ್ರು, ಆನಂದ್‌, ಸುಜಯ್‌, ಭರತ್‌ ಸಿಂಗ್‌ ಸೇರಿದಂತೆ ಅನೇಕರು ನಟಿಸುತ್ತಿದ್ದಾರೆ. ರಘು ದೀಕ್ಷಿತ್‌ ಸಂಗೀತವಿದೆ. ಜೈ ಆನಂದ್‌ ಕ್ಯಾಮೆರಾ ಹಿಡಿಯುತ್ತಿದ್ದಾರೆ.

ಟಾಪ್ ನ್ಯೂಸ್

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.