ಯುಗಪುರುಷ ಹೀರೋ ಅರ್ಜುನ್ ದೇವ್ರನ್ನು ಬೆನ್ನಟ್ಟಿ ದುಷ್ಕರ್ಮಿಗಳ ದಾಳಿ
Team Udayavani, May 30, 2017, 12:16 PM IST
ರಾಮನಗರ : ಇಲ್ಲಿನ ಬೆಂಗಳೂರು -ಮೈಸೂರು ಹೆದ್ದಾರಿಯಲ್ಲಿರುವ ಎಸ್ಬಿಎಂ ಕಚೇರಿಯೆದುರು ನವ ನಟ ಅರ್ಜುನ್ ದೇವ್ ಅವರ ಕಾರನ್ನು ದುಷ್ಕರ್ಮಿಗಳು ರಾಡ್ಗಳಿಂದ ಹೊಡೆದು ಜಖಂಗೊಳಿಸಿದ ಘಟನೆ ಮಂಗಳವಾರ ಬೆಳಗ್ಗೆ ಸಂಭವಿಸಿದೆ.
ಬೆಂಗಳೂರಿನಿಂದ 3 ಬೈಕ್ಗಳಲ್ಲಿ ಬಂದ ಐವರು ದುಷ್ಕರ್ಮಿಗಳು ಅರ್ಜುನ್ ಕಾರನ್ನು ಬೆನ್ನಟ್ಟಿದ್ದು ರಾಮನಗರ ಸಿಗ್ನಲ್ ದಾಟಿದ ಬಳಿಕ ದಾಳಿ ನಡೆಸಿದ್ದಾರೆ. ನಟ ಕಾರು ನಿಲ್ಲಿಸುತ್ತಿದ್ದಂತೆ ಹಲ್ಲೆಗೆ ಮುಂದಾಗಿದ್ದಾರೆ. ಆದರೆ ಸ್ಥಳೀಯರು ಜಮಾವಣೆಗೊಂಡ ಕಾರಣ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.
ಅರ್ಜುನ್ ದೇವ್ ಅಭಿನಯಿಸಿರುವ ಯುಗಪುರುಷ ಚಿತ್ರ ಬಿಡುಗಡೆಗೆ ಸಿದ್ಧವಾಗಿದ್ದು, ಚಿತ್ರದ ಪ್ರಚಾರ ಕಾರ್ಯಕ್ಕಾಗಿ ತೆರಳುತ್ತಿದ್ದರು.
ಸ್ಥಳಕ್ಕಾಗಮಿಸಿದ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಅರ್ಜುನ್ ದೇವ್ ಅವರನ್ನು ವಿಚಾರಿಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?