ಖರಾಬ್‌ ದುನಿಯಾದಲ್ಲಿ ಬಂದು ನಿಂತವರು


Team Udayavani, Jun 22, 2017, 4:12 PM IST

655.jpg

ಕನ್ನಡದಲ್ಲಿ ಮತ್ತೂಂದು ಹೊಸಬರ ಸಿನಿಮಾ ಶುರುವಾಗಿದೆ.ಹೆಸರು “ಖರಾಬ್‌ ದುನಿಯಾ’. ವಿಕಾಸ್‌ ಮದಕರಿ ಚಿತ್ರದ ನಿರ್ದೇಶಕರು. ಅಷ್ಟೇ ಅಲ್ಲ, ಚಿತ್ರದ ನಾಯಕರಾಗಿಯೂ ಅವರೇ ಕ್ಯಾಮೆರಾ ಮುಂದೆ ನಿಲ್ಲುತ್ತಿದ್ದಾರೆ. ಶೀರ್ಷಿಕೆಯೇ ಹೇಳುವಂತೆ, ಇದೊಂದು ರಾ ಫೀಲ್‌ ಇರುವ ಸಿನಿಮಾ.

ಇಲ್ಲಿ ಕ್ರೆ„ಮ್‌, ರಾಬರಿ, ರೌಡಿಸಂ ಇತ್ಯಾದಿ ಇತ್ಯಾದಿ ಅಂಶಗಳು ಸೇರಿವೆ. ಅವೆಲ್ಲದರೊಂದಿಗೆ ಒಂದು ನವಿರಾದ ಪ್ರೀತಿಯ ಕಥೆಯೂ ಉಂಟು. ಕಳೆದ ಶುಕ್ರವಾರ ಚಿತ್ರಕ್ಕೆ ಮುಹೂರ್ತ ನಡೆದಿದೆ. ಸಾಹಸ ನಿರ್ದೇಶಕ ಥ್ರಿಲ್ಲರ್‌ ಮಂಜು ಅವರು ಕ್ಯಾಮೆರಾ ಆನ್‌ ಮಾಡುವ ಮೂಲಕ ಚಾಲನೆ ನೀಡಿದ್ದಾರೆ. ವಿಕಾಸ್‌ ಮದಕರಿ ಅವರು ಚಿತ್ರಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆಯ ಜವಾಬ್ದಾರಿಯನ್ನೂ ಹೊತ್ತಿದ್ದಾರೆ. ಅವರ ಈ ಪ್ರಯತ್ನಕ್ಕೆ ಯೋಗೀಶ್‌ ಹಾಗೂ ಸಿ.ಶೇಖರ್‌ ಹಣ ಹಾಕುವ ಮೂಲಕ ನಿರ್ಮಾಣದ ಜವಾಬ್ದಾರಿ ವಹಿಸಿಕೊಂಡಿದ್ದಾರೆ.

ವಿಕಾಸ್‌ ಮದಕರಿ ಈ ಹಿಂದೆ “ಕೋಮಲಿ’ ಚಿತ್ರವನ್ನೂ ನಿರ್ದೇಶಿಸಿದ್ದರು. ಇದು ಅವರ ಎರಡನೇ ಸಿನಿಮಾ. ಇದು ನೈಜ ಘಟನೆ ಸುತ್ತ ಸಾಗುವ ಸಿನಿಮಾ. ಕೆಲವು ವರ್ಷಗಳ ಹಿಂದೆ ಬೆಂಗಳೂರಿನ ವಿಲ್ಸನ್‌ ಗಾರ್ಡನ್‌ನಲ್ಲಿ ಒಂದು ಅತ್ಯಾಚಾರ ಹಾಗೂ ಕೊಲೆ ನಡೆದಿತ್ತು. ಅದೇ ಘಟನೆ ಇಟ್ಟುಕೊಂಡು ಸಿನಿಮಾ ಮಾಡುತ್ತಿದ್ದಾರೆ ನಿರ್ದೇಶಕರು. ಈ ಚಿತ್ರಕ್ಕೆ ಸಂಹಿತಾ ವಿನ್ಯಾ ನಾಯಕಿಯಾಗಿದ್ದಾರೆ. ಸಂಹಿತಾ ಈ  ಹಿಂದೆ “ಕೆ ಕೆ’ ಹಾಗೂ “ಹಾಲು ತುಪ್ಪ’ಎಂಬ ಚಿತ್ರದಲ್ಲಿ ಅಭಿನಯಿಸಿದ್ದಾರೆ.

ಸಂಹಿತಾಗೆ ಕಥೆ ಕೇಳಿದಾಗ, ರಾ ಫೀಲ್‌ ಆಗಿದೆ ಅನಿಸಿತಂತೆ. ಆದರೆ, ಪಾತ್ರಕ್ಕೆ ಹೆಚ್ಚು ಆದ್ಯತೆ ಕೊಟ್ಟಿರುವುದರಿಂದ ಒಪ್ಪಿಕೊಂಡರಂತೆ. ಒಬ್ಬ ಸಾಮಾನ್ಯ ವ್ಯಕ್ತಿಯ ಬದುಕಿನಲ್ಲಿ ಒಂದಷ್ಟು ಘಟನೆಗಳು ನಡೆಯುತ್ತವೆ. ಅವು ಸದಾ ನೆನಪಲ್ಲುಳಿಯುತ್ತವೆ. ಆದರೆ, ಸಮಾಜಕ್ಕೆ ಮಾರಕವಾಗುವ ಅಂಥಾ ಘಟನೆಗಳ ಹಿಂದೆ ಆತ ಹೋದಾಗ ಏನೆಲ್ಲಾ ಆಗುತ್ತದೆ ಎಂಬುದು ಕಥೆಯ ಒನ್‌ಲೈನ್‌ ಅಂತೆ.

ಬೆಂಗಳೂರು ಸುತ್ತಮುತ್ತ ಸುಮಾರು 35 ದಿನಗಳ ಕಾಲ ಚಿತ್ರೀಕರಣ ನಡೆಯಲಿದೆ. ಚಿತ್ರದಲ್ಲಿ ಹಿರಿಯ ನಟ ಅವಿನಾಶ್‌ ಪೋಲೀಸ್‌ ಅಧಿಕಾರಿಯಾಗಿ ಕಾಣಿಸಿಕೊಳ್ಳಲಿದ್ದಾರೆ. ಉಳಿದಂತೆ ಶೋಭರಾಜ್‌, ಬಿರಾದಾರ್‌, ಹೊನ್ನವಳ್ಳಿ ಕೃಷ್ಣ ಮುಂತಾದವರು ನಟಿಸುತ್ತಿದ್ದಾರೆ. ಚಿತ್ರಕ್ಕೆ ವೀನಸ್‌ ಮೂರ್ತಿ ಕ್ಯಾಮೆರಾ ಹಿಡಿದರೆ, ವಿಲಿಯಂ ಐದು ಹಾಡುಗಳಿಗೆ ಸಂಗೀತ ನೀಡುತ್ತಿದ್ದಾರೆ.

ಟಾಪ್ ನ್ಯೂಸ್

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.