ದೆಹಲಿಯಲ್ಲಿ ವಿಷ್ಣುವರ್ಧನ್ ಪ್ರತಿಮೆ
Team Udayavani, Jun 24, 2017, 10:15 AM IST
ಡಾ. ವಿಷ್ಣು ಸೇನಾ ಸಮಿತಿಯಿಂದ ಆಗಸ್ಟ್ 27ರಂದು ದೆಹಲಿಯ ಕನ್ನಡ ಸಂಘದ ಆವರಣದಲ್ಲಿ ಡಾ. ವಿಷ್ಣುವರ್ಧನ್ ರಾಷ್ಟ್ರೀಯ ಉತ್ಸವವನ್ನು ಏರ್ಪಡಿಸಲಾಗಿದೆ. ವಿಶೇಷವೆಂದರೆ, ಈ ಸಮಾರಂಭದಲ್ಲಿ ಡಾ. ವಿಷ್ಣುವರ್ಧನ್ ಅವರ ಆರಡಿ ಎತ್ತರದ ಮೇಣದ ಪ್ರತಿಮೆಯನ್ನು ಅನಾವರಣಗೊಳಿಸಲಾಗುವುದಂತೆ.
ಇದೇ ಮೊದಲ ಬಾರಿಗೆ ಕರ್ನಾಟಕವನ್ನು ಬಿಟ್ಟು ಹೊರಗೆ, ಅದೂ ದೆಹಲಿಯಲ್ಲಿ ರಾಷ್ಟ್ರೀಯ ಉತ್ಸವವನ್ನು ಆಯೋಜಿಸುವುದಕ್ಕೆ ಸೇನಾ ಸಮಿತಿ ಮುಂದಾಗಿದೆ. ಈಗಾಗಲೇ ಸಿದ್ಧತೆಗಳು ನಡೆಯುತ್ತಿದ್ದು, ಈ ಉತ್ಸವದಲ್ಲಿ ರಾಜ್ಯದ ವಿವಿಧ ಕಡೆಗಳಿಂದ ಸುಮಾರು 500ಕ್ಕೂ ಹೆಚ್ಚು ವಿಷ್ಣು ಅವರ ಅಭಿಮಾನಿಗಳು ಭಾಗವಹಿಸಲಿದ್ದಾರೆ.
ಇನ್ನು ಅಂದಿನ ಕಾರ್ಯಕ್ರಮದಲ್ಲಿ ಭಾರತಿ ವಿಷ್ಣುವರ್ಧನ್ ಅವರು ಭಾಗವಹಿಸುವ ಸಾಧ್ಯತೆ ಇದ್ದು, ಸದ್ಯದಲ್ಲೇ ಅವರನ್ನು ಭೇಟ ಮಾಡಿ, ಆಹ್ವಾನ ನೀಡಲಾಗುವುದು ಎಂದು ಸೇನಾ ಸಮಿತಿಯ ಅಧ್ಯಕ್ಷ ವೀರಕಪುತ್ರ ಶ್ರೀನಿವಾಸ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?
Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!
Election; ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು
Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್
ದಳಪತಿ ಅಭಿಮಾನಿಗಳ ಟ್ರೋಲ್ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?