ದಾದಾಸ್‌ ಬ್ಯಾಕ್‌ಬೋನ್‌


Team Udayavani, Jun 28, 2017, 10:53 AM IST

Dada-Is-Back-(2).jpg

“ಆ ಪಾತ್ರಕ್ಕೆ ಮೊದಲು ಅಮಿತಾಭ್‌ ಬಚ್ಚನ್‌ ಮೊರೆ ಹೋಗಿದ್ದಾಯ್ತು, ಆಗಲಿಲ್ಲ. ಅನಿಲ್‌ ಕಪೂರ್‌ ಅವರ ಹಿಂದೆ ಬಿದ್ದಿದ್ದಾಯೂ ಅದೂ ಸಾಧ್ಯವಾಗಲಿಲ್ಲ. ಆಮೇಲೆ ಮೋಹನ್‌ ಲಾಲ್‌ ಬಳಿ ಹೋದರೂ ಆಯ್ಕೆ ಆಗಲೇ ಇಲ್ಲ. ಕೊನೆಗೆ ಆಯ್ಕೆ ಆಗಿದ್ದು ಪಾರ್ಥಿಬನ್‌. ಈಗ ಚಿತ್ರ ರೆಡಿಯಾಗಿ, ಪ್ರೇಕ್ಷಕರ ಮುಂದೆ ಬರಲು ಸಜ್ಜಾಗಿದೆ…’.

ನಿರ್ದೇಶಕ ಸಂತೋಷ್‌ ತಮ್ಮ ಎರಡನೇ ನಿರ್ದೇಶನದ “ದಾದಾ ಈಸ್‌ ಬ್ಯಾಕ್‌’ ಚಿತ್ರದ ಪ್ರಮುಖ ಪಾತ್ರಕ್ಕೆ ಬಾಲಿವುಡ್‌ ಅಂಗಳದಲ್ಲಿ ಅಲೆದಾಡಿ, ಮಾಲಿವುಡ್‌ಗೂ ಕಾಲಿಟ್ಟು, ಕೊನೆಗೆ ಕಾಲಿವುಡ್‌ನ‌ಲ್ಲಿ ಆ ಪಾತ್ರಧಾರಿ ಆಯ್ಕೆ ಮಾಡಿದ ಬಗ್ಗೆ ವಿಸ್ತಾರವಾಗಿ ಹೇಳಿಕೊಳ್ಳುತ್ತಾರೆ ಸಂತೋಷ್‌. ಹದಿನೈದು ದಿನಗಳ ಕಾಲ ಅಮಿತಾಭ್‌ ಬಚ್ಚನ್‌ ಅವರ ಪಿಎ ಬಳಿ ಅಲೆದಾಡಿ, ಕಥೆ ಮತ್ತು ಪಾತ್ರ ವಿವರ ಕೊಟ್ಟರೂ ಅದು ಆಗಲಿಲ್ಲ. ಅನಿಲ್‌ ಕಪೂರ್‌ ಭೇಟಿ ಮಾಡಿದಾಗಲೂ ಕೈ ಗೂಡಲಿಲ್ಲ.

ಮೋಹನ್‌ಲಾಲ್‌ ಆಯ್ಕೆ ಪ್ರಯತ್ನವೂ ಸಾಧ್ಯವಾಗಲಿಲ್ಲ. ಪಾರ್ಥಿಬನ್‌ ಕಥೆ,ಪಾತ್ರ ಕೇಳಿದಾಕ್ಷಣ, ಒಪ್ಪಿದರು. ಪಾತ್ರಕ್ಕೆ ಜೀವ ತುಂಬಿರುವುದಲ್ಲದೆ, ಅವರೇ ಕನ್ನಡದಲ್ಲಿ ಡಬ್‌ ಮಾಡಿದ್ದಾರೆ. ಇದೊಂದು ಗ್ಯಾಂಗ್‌ವಾರ್‌ ಸಿನಿಮಾ. ಆದರೂ ಇಲ್ಲಿ ಹಾಸ್ಯವಿದೆ, ಪ್ರೀತಿ ಇದೆ. ಅಲ್ಲಲ್ಲಿ ಅನುಬಂಧವೂ ಜತೆಗೂಡುತ್ತಾ ಹೋಗುತ್ತೆ. ಇನ್ನೇನು ಚಿತ್ರ ಇಷ್ಟರಲ್ಲೇ ಬಿಡುಗಡೆಯಾಗಲಿದೆ. ನಮ್ಮ ಈ ಪ್ರಯತ್ನಕ್ಕೆ ನಿಮ್ಮ ಬೆಂಬಲ ಇರಲಿ ಅನ್ನುತ್ತಾರೆ ಸಂತೋಷ್‌.

ನಿರ್ಮಾಪಕ ಶಂಕರ್‌ಗೆ ಸಿನಿಮಾ ಮೂಡಿಬಂದಿರುವ ರೀತಿ ಕಂಡು ಖುಷಿಯಾಗಿದೆಯಂತೆ.  ಮೊದಲು ನಾಲ್ವರು ನಿರ್ಮಾಪಕರಿದ್ದರು. ಆ ಪೈಕಿ ಇಬ್ಬರು ಹೊರ ನಡೆದರು. ಆದರೆ, ಸಿನಿಮಾ ಹೇಗೋ ಕಂಪ್ಲೀಟ್‌ ಆಯ್ತು. ಸಿನಿಮಾ ಮಾಡುವುದು ದೊಡ್ಡದಲ್ಲ, ಅದನ್ನು ತಲುಪಿಸುವುದು ದೊಡ್ಡದು. ಈಗ ಇಬ್ಬರು ದಾದಾಸ್‌ ನಮ್ಮ ಹಿಂದೆ ನಿಂತಿದ್ದಾರೆ. ಕನಕಪುರ ಶ್ರೀನಿವಾಸ್‌ ಮತ್ತು ಜಾಕ್‌ಮಂಜು ಇವರಿಬ್ಬರೂ ಚಿತ್ರವನ್ನು ಬಿಡುಗಡೆ ಮಾಡುತ್ತಿದ್ದಾರೆ.

ಆರಂಭದಲ್ಲಿ ಜಾಕ್‌ಮಂಜು ಜತೆ ಮನಸ್ತಾಪ ಇದ್ದು, ಆ ವಿಚಾರ ಚೇಂಬರ್‌ ಮೆಟ್ಟಿಲು ಏರಿತ್ತು. ಈಗ ಎಲ್ಲವೂ ಬಗೆಹರಿದಿದೆ. ಆಗಸ್ಟ್‌ ನಲ್ಲಿ ಬಿಡುಗಡೆ ಮಾಡುವ ಯೋಚನೆ ಇದೆ ಎನ್ನುತ್ತಾರೆ ನಿರ್ಮಾಪಕರು. ನಾಯಕ ಅರುಣ್‌ಗೆ ಈ ಚಿತ್ರ ಮೊದಲ ಕಮರ್ಷಿಯಲ್‌ ಸಿನಿಮಾವಂತೆ. “ಗೊಂಬೆಗಳ ಲವ್‌’ ಬಳಿಕ ಮತ್ತದೇ ತಂಡ ಸೇರಿ ಮಾಡಿದ ಸಿನಿಮಾ ಇದು. ಈ ಚಿತ್ರ ನನಗೊಂದು ಹೊಸ ಇಮೇಜ್‌ ತಂದುಕೊಡುತ್ತದೆ ಎಂಬ ನಂಬಿಕೆ ಇದೆ.
ನಮ್ಮ ಸಣ್ಣ ಸಿನಿಮಾವನ್ನು ದೊಡ್ಡ ವಿತರಕರು ರಿಲೀಸ್‌ ಮಾಡುತ್ತಿರುವುದೇ ಪ್ಲಸ್‌ ಪಾಯಿಂಟ್‌ ಅಂದರು ಅರುಣ್‌. ವಿತರಕ ಜಾಕ್‌ ಮಂಜು, “ಒಳ್ಳೇ ತಂಡ ಒಂದೊಳ್ಳೆಯ ಸಿನಿಮಾ ಮಾಡಿದೆ. ಹೊಸಬರು ಈಗ ಸದ್ದು ಮಾಡುತ್ತಿದ್ದಾರೆ. ಈ ಚಿತ್ರ ಕೂಡ ಎಲ್ಲರಿಗೂ ಇಷ್ಟವಾಗುತ್ತೆ’ ಎಂದರು. ಇನ್ನು, ಕನಕಪುರ ಶ್ರೀನಿವಾಸ್‌ ಅವರಿಗೆ ಹೊಸಬರಲ್ಲಿ ಹೊಸತನ ಇದೆ ಅನಿಸಿ, ಬೆಂಬಲ ಕೊಡುತ್ತಿದ್ದಾರಂತೆ. ಚಿತ್ರದಲ್ಲಿ ಅನೂಪ್‌ ಸೀಳಿನ್‌ ಸಂಗೀತ ಹೈಲೆಟ್‌ ಅಂತೆ.

ಟಾಪ್ ನ್ಯೂಸ್

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.