ಗಣೇಶ್‌ ಹುಟ್ಟುಹಬ್ಬಕ್ಕೆ “ಆರೆಂಜ್‌’ ಟೈಟಲ್‌ ಲಾಂಚ್‌


Team Udayavani, Jun 28, 2017, 10:53 AM IST

gani.jpg

ಗಣೇಶ್‌ ಹುಟ್ಟುಹಬ್ಬಕ್ಕೆ (ಜುಲೈ 02) “ಆರೆಂಜ್‌’ ಚಿತ್ರ ಶುರುವಾಗುವುದು ಎಂದು ಈ ಹಿಂದೆ ನಿರ್ದೇಶಕ ಪ್ರಶಾಂತ್‌ ರಾಜ್‌ ಹೇಳಿಕೊಂಡಿದ್ದರು. ಅದರಂತೆ ಅವರು ಇದೇ ಜುಲೈ 2ಕ್ಕೆ “ಆರೆಂಜ್‌’ ಚಿತ್ರವನ್ನು ಶುರು ಮಾಡುವುದಕ್ಕೆ ಸಜ್ಜಾಗುತ್ತಿದ್ದಾರೆ. ಜುಲೈ ಒಂದರ ಮಧ್ಯರಾತ್ರಿ ಅವರು ತಮ್ಮ ತಂಡದ ಜೊತೆಗೆ ಚಿತ್ರದ ಟೈಟಲ್‌ ಮಾಡುತ್ತಿದ್ದಾರೆ.

ಈ ಹಿಂದೆ, “ಜೂಮ್‌’ ಚಿತ್ರದ ಹಾಡುಗಳ ರೆಕಾರ್ಡಿಂಗ್‌ನ್ನು ಅವರು ಕೆಲವು ವರ್ಷಗಳ ಹಿಂದೆ, ಗಣೇಶ್‌ ಅವರ ಹುಟ್ಟುಹಬ್ಬದಂದು ಶುರು ಮಾಡಿದ್ದರು. ಪ್ರಸಾದ್‌ ಸ್ಟುಡಿಯೋದಲ್ಲಿ, ಮಧ್ಯರಾತ್ರಿ ನಡೆದ ಈ ಸಮಾರಂಭದಲ್ಲಿ ಗಣೇಶ್‌ ಸೇರಿದಂತೆ ಹಲವರು ಭಾಗವಹಿಸಿದ್ದರು. ಈ ಬಾರಿ ಗಣೇಶ್‌ ಅವರ ಮನೆಯಲ್ಲೇ, ಚಿತ್ರದ ಟೈಟಲ್‌ ಬಿಡುಗಡೆ ಮಾಡುತ್ತಿದ್ದಾರೆ ಪ್ರಶಾಂತ್‌ ರಾಜ್‌.

ಅಷ್ಟೇ ಅಲ್ಲ, ಗಣೇಶ್‌ ಹುಟ್ಟುಹಬ್ಬಕ್ಕೆಂದೇ ಪ್ರಶಾಂತ್‌ ರಾಜ್‌ ಒಂದು ವಿಶೇಷವಾದ ಕೇಕ್‌ ಮಾಡಿಸುತ್ತಿದ್ದಾರಂತೆ. ಇತ್ತೀಚೆಗೆ “ಬಾಹುಬಲಿ’ ಬಿಡುಗಡೆಯ ಸಂದರ್ಭದಲ್ಲಿ ಚಿತ್ರತಂಡ ಒಂದು ವಿಶಿಷ್ಟ ಕೇಕ್‌ ಕತ್ತರಿಸಿದ್ದು, ಅದು ಪ್ರಶಾಂತ್‌ ರಾಜ್‌ ಅವರ ಗಮನ ಸೆಳೆದಿದೆ. ಅದೇ ತರಹದ ಇನ್ನೊಂದು ಕೇಕ್‌ ಮಾಡಿಸುವುದಕ್ಕೆ ಪ್ರಶಾಂತ್‌ ಹೊರಟಿದ್ದಾರೆ. ಅಲ್ಲಿ ಮಗು ಆಕಾರದ ಕೇಕ್‌ ಇತ್ತು.

ಇಲ್ಲಿ ಆರೆಂಜ್‌ ಇರುತ್ತದೆ. ಈ ಕೇಕ್‌ನ್ನು ದೊಡ್ಡ ಹೋಟೆಲ್‌ನ ಚೆಫ್ ಒಬ್ಬರು ತಯಾರಿಸುತ್ತಿದ್ದಾರಂತೆ. ಗಣೇಶ್‌ ಹುಟ್ಟುಹಬ್ಬದಂದು ಚಿತ್ರದ ಟೈಟಲ್‌ ಲಾಂಚ್‌ ಆಗಿ, ಒಂದು ವಾರಕ್ಕೆ ಚಿತ್ರೀಕರಣ ಶುರುವಾಗಲಿದೆ. ಈ ಬಾರಿಯೂ “ಜೂಮ್‌’ ಚಿತ್ರದ ತಂಡವೇ ಮುಂದುವರೆಯಲಿದ್ದು, ಸಂತೋಷ್‌ ರೈ ಪಾತಾಜೆ ಅವರ ಛಾಯಾಗ್ರಹಣ ಮತ್ತು ಅರ್ಜುನ್‌ ಜನ್ಯ ಅವರ ಸಂಗೀತವಿದೆ.

ಚಿತ್ರಕ್ಕೆ ಇನ್ನೂ ನಾಯಕಿಯ ಆಯ್ಕೆ ಆಗಿಲ್ಲ. ಈ ಮಧ್ಯೆ, ಸೋಮವಾರದಂದು ಗಣೇಶ್‌, “ವೀಕೆಂಡ್‌ ವಿಥ್‌ ರಮೇಶ್‌’ ಚಿತ್ರೀಕರಣದಲ್ಲಿ ಭಾಗವಹಿಸಿದ್ದು, ಇದೇ ಶನಿವಾರ ಮತ್ತು ಭಾನುವಾರದಂದು ಪ್ರಸಾರವಾಗಲಿದೆ. ಗಣೇಶ್‌ ಭಾಗವಹಿಸಿರುವ ಎಪಿಸೋಡುಗಳು, “ವೀಕೆಂಡ್‌ ವಿಥ್‌ ರಮೇಶ್‌’ನ ಮೂರನೆಯ ಸೀಸನ್‌ ಕೊನೆಯ ಎಪಿಸೋಡುಗಳಾಗಿರುತ್ತವೆ ಎಂದು ಹೇಳಲಾಗುತ್ತಿದೆ.

ಟಾಪ್ ನ್ಯೂಸ್

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.