ಭಟ್ಟರಿಗೆ ದೆವ್ವ ಹಿಡಿದಿದೆಯಾ!


Team Udayavani, Jul 27, 2017, 11:59 AM IST

Mugulu-Nage-Audio-Release.jpg

“ಈ ಭಟ್ರಿಗೆ ದೆವ್ವ ಹಿಡಿದಿದೆಯಾ? ಅವರೇನು ಲೂಸ್‌ ಆಗಿದ್ದಾರಾ? ಅವರ ಮೇಡಮ್‌ಗೆ ಫೋನ್‌ ಮಾಡಿ ವಿಚಾರಿಸ್ಲಾ? …’ ಹೀಗೆ ನೂರು ಯೋಚನೆ ಬಂತಂತೆ ಗಣೇಶ್‌ಗೆ. ಅದಕ್ಕೆ ಕಾರಣ, “ಮುಗುಳು ನಗೆ’ ಚಿತ್ರಕ್ಕೆ ಯೋಗರಾಜ್‌ ಭಟ್‌ ಅವರು ಬರೆದ ಟೈಟಲ್‌ ಸಾಂಗ್‌. ಈ ಹಾಡು ಕೇಳಿ, ಫ‌ುಲ್‌ ಖುಷಿಯಾಗಿರುವ ಗಣೇಶ್‌, ಹಾಡಿನ ಸಾಲುಗಳನ್ನು ಪದೇಪದೇ ನೆನಪಿಸಿಕೊಳ್ಳುತ್ತಾರೆ.

ಕಣ್ಣಾಲಿಯಾ ಜಲಪಾತವಾ ಬಂಧಿಸಲು ನೀ ಯಾರು?
ನೀ ಮಾಡುವಾ ನಗೆಪಾಟಲು ಖಂಡಿಸಲು ನಾ ಯಾರು?
ಸಂತೋಷಕು, ಸಂತಾಪಕು ಇರಲಿ ಬಿಡು ಒಂದೇ ಬೇರು
ಕಂಗಳಲಿ ಬಂದಾ ಮಳೆಗೆ 
ಕೊಡೆ ಹಿಡಿವ ಆಸೆಯೆ ನಿನಗೆ
ಅತ್ತು ಬಿಡು ಒಮ್ಮೆ ಜೊತೆಗೆ 
ನಗಬೇಡ ಹೀಗೆ …
ಈ ಸಾಲುಗಳನ್ನು ಉದಾಹಿರಸುವ ಅವರು, “ಯೋಗರಾಜ್‌ ಭಟ್‌ ಯಾವಾಗಲೂ ಹೇಳುತ್ತಿರುತ್ತಾರೆ, ಟಪ್ಪಾಂಗುಚ್ಚಿ ಹಾಡುಗಳನ್ನು ಬರೆಯೋದು  ಸುಲಭ, ಮೆಲೋಡಿ ಹಾಡುಗಳನ್ನು ಬರೆಯೋದು ಕಷ್ಟ ಅಂತ. ಅವರು ಹೇಳುವ
ಪ್ರಕಾರ, ಮೆಲೋಡಿ ಹಾಡು ಬರೆಯುವುದು, ಒಟ್ಟಿಗೆ 12 ಮಕ್ಕಳನ್ನು ಹೆತ್ತಷ್ಟು ಕಷ್ಟವಂತೆ. ಆದರೂ ಬಹಳ ಚೆನ್ನಾಗಿ ಬರೆದಿದ್ದಾರೆ. ಇನ್ನು ಹರಿ ಬಹಳ ಚೆಂದ ಟ್ಯೂನ್‌ ಕೊಟ್ಟಿದ್ದಾರೆ. ಸಾಮಾನ್ಯವಾಗಿ ವಕೌಟ್‌ ಮಾಡಿದಾಗ ಫಾಸ್ಟ್‌ ಹಾಡುಗಳನ್ನು ಕೇಳುತ್ತಾರೆ. ನಾನಂತೂ ಈ ಹಾಡನ್ನ ಪದೇಪದೇ ಕೇಳುತ್ತಿದ್ದೀನಿ’ ಎನ್ನುತ್ತಾರೆ ಗಣೇಶ್‌.

ಅಂದಹಾಗೆ, ಗಣೇಶ್‌ ಮಾತಾಡಿದ್ದು ಚಿತ್ರದ ಟೈಟಲ್‌ ಸಾಂಗ್‌ ಬಿಡುಗಡೆಯ ಸಂದರ್ಭದಲ್ಲಿ. ಬುಧವಾರ ಈ ಹಾಡನ್ನು ಅನಂತ್‌ನಾಗ್‌, ಜಯಂತ್‌ ಕಾಯ್ಕಿಣಿ ಮತ್ತು ಮನೋಮೂರ್ತಿ ಬಿಡುಗಡೆ ಮಾಡಿದರು. ಇದು ಬಿಡುಗಡೆಯಾಗುತ್ತಿರುವ
ಚಿತ್ರದ ಐದನೇ ಹಾಡು. ಇದಕ್ಕೂ ಮುನ್ನ “ಹೊಡಿ ಒಂಭತ್ತ್ …’ ಎಂಬ ಹಾಡು ಹುಬ್ಬಳ್ಳಿಯಲ್ಲಿ, “ರೂಪಸಿ …’ ಎಂಬ ಎರಡನೆಯ ಹಾಡನ್ನು ಗಣೇಶ್‌ ಪತ್ನಿ ಶಿಲ್ಪ ಹುಟ್ಟುಹಬ್ಬದ ಸಂದರ್ಭದಲ್ಲಿ, “ನಿನ್ನಾ ಸ್ನೇಹ ದಿಂದ …’ ಎಂಬ ಹಾಡನ್ನು ಮೈಸೂರಿನ ಮಹಾರಾಣಿ ಕಾಲೇಜಿನಲ್ಲಿ, “ಕೆರೆ ಏರಿ ಮೇಲೆ …’ ಎಂಬ ನಾಲ್ಕನೆಯ ಹಾಡನ್ನು ಕೋರಮಂಗಲದ ಜ್ಯೋತಿ ನಿವಾಸ್‌ ಕಾಲೇಜಿನಲ್ಲಿ ಬಿಡುಗಡೆ ಮಾಡಲಾಗಿದೆ. 

ಈಗ ಐದನೇ ಹಾಡನ್ನು ಬಿಡುಗಡೆ ಮಾಡಲಾಗಿದ್ದು, 30ಕ್ಕೆ ದೊಡ್ಡ ಸಮಾರಂಭ ಮಾಡಿ, ಹಾಡುಗಳನ್ನು ಬಿಡುಗಡೆ ಮಾಡಲಾಗುತ್ತದಂತೆ. 

ಟಾಪ್ ನ್ಯೂಸ್

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.