ಮಿತ್ರನ ಹೊಸ ಪರಸಂಗ ನಾಳೆ ಮೈಸೂರಲ್ಲಿ ಮುಹೂರ್ತ


Team Udayavani, Jul 27, 2017, 1:42 PM IST

Mitra–Parasanga.jpg

“ರಾಗ’ ನಂತರ ಮಿತ್ರ ಏನು ಮಾಡುತ್ತಾರೆ ಎಂಬ ಪ್ರಶ್ನೆ ಎಲ್ಲರಲ್ಲೂ ಇತ್ತು. ಅವರು ಪುನಃ ನಿರ್ಮಾಣ ಕಾರ್ಯದಲ್ಲಿ ತೊಡಗುತ್ತಾರೋ ಅಥವಾ ನಟನೆಯಲ್ಲಿ ಮುಂದುವರೆಯುತ್ತಾರೋ ಎಂಬ ಮಾತುಗಳು ಕೇಳಿಬರುತ್ತಿದ್ದವು. ಮಿತ್ರ ಈಗ ಅದಕ್ಕೆ ಉತ್ತರ ಕೊಟ್ಟಿದ್ದಾರೆ.

ಅವರೀಗ ಹೊಸ ಚಿತ್ರಕ್ಕೆ ಹೀರೋ ಆಗಿದ್ದಾರೆ. ಹೌದು, “ಪರಸಂಗ’ ಎಂಬ ಹೊಸ ಚಿತ್ರದ ಮೂಲಕ ಮಿತ್ರ ಮತ್ತೆ
ಸುದ್ದಿಯಾಗುತ್ತಿದ್ದಾರೆ. ಅಂದಹಾಗೆ, ಈ ಚಿತ್ರದ ಶೀರ್ಷಿಕೆ ಕೇಳಿದೊಡನೆ, ಹಿರಿಯ ನಟ ಲೋಕೇಶ್‌ ಅಭಿನಯದ
“ಪರಸಂಗದ ಗೆಂಡೆತಿಮ್ಮ’ನ ನೆನಪಾಗೋದು ಸಹಜ. ಆದರೆ, ಅದಕ್ಕೂ ಇದಕ್ಕೂ ಯಾವುದೇ ಸಂಬಂಧವಿಲ್ಲ. ಆದರೆ, “ಪರಸಂಗ’ ಶೀರ್ಷಿಕೆ ಕೆಳಗೆ “ತಿಮ್ಮನ ಕಥೆ’ ಎಂಬ ಅಡಿಬರಹ ಇದೆ. ಅಲ್ಲಿಗೆ ಇದೊಂದು ಹಳ್ಳಿ ಕಥೆ ಅನ್ನೋದು ಪಕ್ಕಾ ಆಗೋಯ್ತು. ಈ ಚಿತ್ರಕ್ಕೆ ರಘು ನಿರ್ದೇಶಕರು. ಈ ಹಿಂದೆ ಇವರು “ತರೆಲ ವಿಲೇಜ್‌’ ಚಿತ್ರ ನಿರ್ದೇಶಿಸಿದ್ದರು. ಇನ್ನು, ಈ ಚಿತ್ರವನ್ನು “ರಾಟೆ’ ಸಿನಿಮಾದ ಸಹ ನಿರ್ಮಾಪಕರಾದ ಕುಮಾರ್‌ ತಮ್ಮ ಗೆಳೆಯರಾದ ಮಹೇಶ್‌ಗೌಡ, ಕೆ.ಎಂ.ಲೋಕೇಶ್‌ ಜತೆಗೂಡಿ ನಿರ್ಮಾಣ ಮಾಡುತ್ತಿದ್ದಾರೆ.

“ಪರಸಂಗ’ ಚಿತ್ರಕ್ಕೆ ಅಕ್ಷತಾ ಶ್ರೀನಿವಾಸ್‌ ನಾಯಕಿಯಾಗಿದ್ದಾರೆ. ಈ ಹಿಂದೆ ಅಕ್ಷತಾ, ಹಿಂದಿ ಹಾಗೂ ತೆಲುಗು ಚಿತ್ರದಲ್ಲಿ ನಟಿಸಿದ್ದಾರೆ. ಇದು ಅವರ ಮೊದಲ ಕನ್ನಡ ಸಿನಿಮಾ. ಇದೊಂದು ಹಳ್ಳಿಗಾಡಿನಲ್ಲಿ ನಡೆಯೋ ಕಥೆ. ಸಿನಿಮಾದಲ್ಲಿ ಹಾಸ್ಯವಿದೆ, ಪ್ರೀತಿ ಇದೆ, ಎಮೋಷನ್ಸ್‌ ಇದೆ. ಅದರೊಂದಿಗೆ ಒಳ್ಳೆಯ ಸಂದೇಶವೂ ಇದೆ ಎಂದು ವಿವರ ಕೊಡುವ ಮಿತ್ರ, “ನಾನು “ರಾಗ’ ನಂತರ ಹಲವು ಕಥೆಗಳನ್ನು ಕೇಳಿದೆ. ಆ ಪೈಕಿ “ಪರಸಂಗ’ ಹೊಸ ಜಾನರ್‌ನ ಕಥೆಯಾದ್ದರಿಂದ ವಾಸ್ತವಕ್ಕೂ ಹತ್ತಿರವಾಗಿರುವು ದರಿಂದ ಇದನ್ನು ಮೊದಲು ಮಾಡಲು ಒಪ್ಪಿದ್ದೇನೆ. ಈ ಸಿನಿಮಾದ ಪಾತ್ರ ನನ್ನ ಹಿಂದಿನ ಸಿನಿಮಾಗಳ ಪಾತ್ರಗಳಿಗಿಂತಲೂ ಭಿನ್ನ ಎನ್ನಬಹುದು’ ಎನ್ನುತ್ತಾರೆ ಅವರು.

ಈ ಚಿತ್ರಕ್ಕೆ ಹರ್ಷವರ್ಧನ್‌ ರಾಜ್‌ ಸಂಗೀತ ನೀಡಿದರೆ, ಸುಜಯ್‌ಕುಮಾರ್‌ ಕ್ಯಾಮೆರಾ ಹಿಡಿಯುತ್ತಿದ್ದಾರೆ. ಎಚ್‌
.ಡಿ.ಕೋಟೆ, ಮೈಸೂರು, ಮಂಗಳೂರು ಸುತ್ತಮುತ್ತ ಚಿತ್ರೀಕರಣ ನಡೆಯಲಿದೆ. ಚಿತ್ರದಲ್ಲಿ ಕಾಮಿಡಿ ಕಿಲಾಡಿಯ ಸ್ಟಾರ್ಗಳಾದ ಮನೋಜ್‌ ಪುತ್ತೂರ್‌, ಚಂದ್ರಪ್ರಭಾ, ಗೋವಿಂದೇಗೌಡ, ಡೈಮಂಡ್‌ ರಾಜಣ್ಣ, ಸಂಜು ಬಸಯ್ಯ ಇತರರು ನಟಿಸುತ್ತಿದ್ದಾರೆ. 

ಜುಲೈ 28 ರಂದು (ನಾಳೆ) ಮೈಸೂರಿನಲ್ಲಿ ಮುಹೂರ್ತ ನಡೆಯಲಿದೆ. ಎರಡು ಹಂತದ ಚಿತ್ರೀಕರಣ ನಡೆಸಿ, ಇದೇ
ವರ್ಷ ಬಿಡುಗಡೆ ಮಾಡಲು ಚಿತ್ರತಂಡ ನಿರ್ಧರಿಸಿದೆ. 

ಟಾಪ್ ನ್ಯೂಸ್

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.