ಪುಷ್ಕರ್ ಬ್ಯಾನರ್ ನಲ್ಲಿ ದಿಗಂತ್ ಚಿತ್ರ


Team Udayavani, Aug 10, 2017, 2:59 PM IST

Dinganth.jpg

ದಿಗಂತ್‌ ಕಡೆಯಿಂದ ಹೊಸ ಸಿನಿಮಾದ ಸುದ್ದಿ ಬಾರದೇ ತುಂಬಾ ದಿನಗಳೇ ಆಗಿತ್ತು. “ಹ್ಯಾಪಿ ನ್ಯೂ ಇಯರ್‌’ ನಂತರ ದಿಗಂತ್‌ ಯಾವೊಂದು ಚಿತ್ರವನ್ನು ಒಪ್ಪಿದ್ದ ಸುದ್ದಿ ಬಂದಿಲ್ಲ. ಇನ್ನು “ಚಾರ್ಲಿ’ ಎಂಬ ಚಿತ್ರದಲ್ಲಿ ದಿಗಂತ್‌ ನಟಿಸುತ್ತಾರೆ ಎಂಬ ಸುದ್ದಿ ಇತ್ತಾದರೂ, ಆ ಚಿತ್ರ ನಿಂತೇ ಹೋಯಿತು. ಈಗ ದಿಗಂತ್‌ ಹೊಸದೊಂದು ಸಿನಿಮಾ ಒಪ್ಪಿರುವ ಸುದ್ದಿ ಬಂದಿದೆ. 

ಅದು ಪುಷ್ಕರ್‌ಹಾಗೂ ಪರಂವಾ ಸ್ಟುಡಿಯೋದ ಜೊತೆ. ಹೌದು, ದಿಗಂತ್‌ ಹೊಸ ಚಿತ್ರವೊಂದನ್ನು ಒಪ್ಪಿಕೊಂಡಿದ್ದು, ಆ ಚಿತ್ರವನ್ನು ಪುಷ್ಕರ್‌ ಮಲ್ಲಿಕಾರ್ಜುನಯ್ಯ ಹಾಗೂ ರಕ್ಷಿತ್‌ ಶೆಟ್ಟಿ ನಿರ್ಮಿಸುತ್ತಿದ್ದಾರೆ. ಈಗಾಗಲೇ ಮಾತುಕತೆಯಾಗಿದ್ದು, ನವೆಂಬರ್‌ನಲ್ಲಿ ಚಿತ್ರ ಆರಂಭವಾಗಲಿದೆ. ಈ ಚಿತ್ರವನ್ನು ಸೆನ್ನಾ ಹೆಗಡೆ ಎನ್ನುವವರು ನಿರ್ದೇಶಿಸುತ್ತಿದ್ದಾರೆ. 

ಕಾಸರಗೋಡು ಮೂಲದ ಸೆನ್ನಾ ಹೆಗಡೆಯವರಿಗೆ ಕನ್ನಡದಲ್ಲಿ ಇದು ಮೊದಲ ಸಿನಿಮಾ. ಈ ಹಿಂದೆ ಮಲಯಾಳಂನಲ್ಲಿ “0-41*’ ಎಂಬ ಚಿತ್ರವನ್ನು ನಿರ್ದೇಶಿಸಿದ್ದಾರೆ. ಈಗ ಕನ್ನಡದಲ್ಲಿ ದಿಗಂತ್‌ಗೆ ಸಿನಿಮಾ ಮಾಡುತ್ತಿದ್ದಾರೆ. ದಿಗಂತ್‌ ಅವರ ಮ್ಯಾನರೀಸಂಗೆ ತಕ್ಕಂತೆ ಈ ಸಿನಿಮಾ ಇದ್ದು, “ಪಂಚರಂಗಿ’ ನಂತರ ದಿಗಂತ್‌ ಅವರಿಲ್ಲಿ ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರಂತೆ. ಇದೊಂದು ರೊಮ್ಯಾಂಟಿಕ್‌-ಕಾಮಿಡಿ ಚಿತ್ರವಾಗಿದ್ದು, ದಿಗಂತ್‌ ಕೆರಿಯರ್‌ನಲ್ಲಿ ವಿಭಿನ್ನ ಚಿತ್ರವಾಗಲಿದೆ ಎಂಬ ವಿಶ್ವಾಸ ಚಿತ್ರತಂಡಕ್ಕಿದೆ.

ಪುಷ್ಕರ್‌ ಫಿಲಂಸ್‌ ಹಾಗೂ ಪರಂವಾ ಸ್ಟುಡಿಯೋ ಸಾಲು ಸಾಲು ಚಿತ್ರಗಳನ್ನು ಮಾಡುತ್ತಿದ್ದು, ಹೊಸ ಹೊಸ ನಿರ್ದೇಶಕರ ಕಥೆಗಳನ್ನು ಆಯ್ಕೆ ಮಾಡಿಕೊಳ್ಳುತ್ತಿದೆ. ಅದರಲ್ಲಿ ದಿಗಂತ್‌ ಸಿನಿಮಾ ಕೂಡಾ ಒಂದು. ಸದ್ಯ ನಾಯಕ ಹಾಗೂ ನಿರ್ದೇಶಕ ಅಷ್ಟೇ ಅಂತಿಮವಾಗಿದ್ದು, ನಾಯಕಿ ಸೇರಿದಂತೆ ತಾಂತ್ರಿಕ ವರ್ಗ ಆಯ್ಕೆ ಇನ್ನಷ್ಟೇ ನಡೆಯಬೇಕಿದೆ. ಈ ನಡುವೆಯೇ ಪುಷ್ಕರ್‌ ಫಿಲಂಸ್‌ “ಭೀಮಸೇನ ನಳಮಹಾರಾಜ’ ಚಿತ್ರೀಕರಣ ಆರಂಭವಾಗಿದೆ. ಈ ಚಿತ್ರದಲ್ಲಿ ಅರವಿಂದ್‌ ಅಯ್ಯರ್‌ ನಾಯಕರಾಗಿ ನಟಿಸುತ್ತಿದ್ದಾರೆ. 

ಟಾಪ್ ನ್ಯೂಸ್

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

1-RCB

RCB ; ರವಿವಾರ ಕೆಕೆಆರ್‌ ವಿರುದ್ಧ ಈಡನ್‌ನಲ್ಲಿ ಗೋ ಗ್ರೀನ್‌ ಗೇಮ್‌

1-asaasa

250 km per hour; ಶೀಘ್ರದಲ್ಲೇ ಬುಲೆಟ್‌ ರೈಲಿನಲ್ಲೂ ಆತ್ಮನಿರ್ಭರತೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.