5ಜಿಗೆ ಮೂರು ಬಾರಿ ಸೆನ್ಸಾರ್


Team Udayavani, Aug 18, 2017, 4:23 PM IST

Untitled-1.jpg

“ಸಿಂಪಲ್ಲಾಗ್‌ ಇನ್ನೊಂದ್‌ ಲವ್‌ಸ್ಟೋರಿ’ ಚಿತ್ರದಲ್ಲಿ ನಾಯಕರಾಗಿ ಎಂಟ್ರಿಕೊಟ್ಟ ಪ್ರವೀಣ್‌ ನಾಯಕರಾಗಿರುವ “5ಜಿ’ ಚಿತ್ರ ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಫೆಬ್ರವರಿಯಲ್ಲೇ ಬಿಡುಗಡೆಯಾಗಬೇಕಿತ್ತು. ಚಿತ್ರತಂಡ ಬಿಡುಗಡೆಗೆ ಎಲ್ಲಾ ತಯಾರಿ ಕೂಡಾ ಮಾಡಿಕೊಂಡಿತ್ತು. ಆದರೆ, ಚಿತ್ರ ಬಿಡುಗಡೆಯಾಗಲೇ ಇಲ್ಲ. “5ಜಿ’ ಕಥೆ ಏನಾಯ್ತು ಎಂದು ಕೇಳುವಷ್ಟರಲ್ಲಿ ಚಿತ್ರ ಬಿಡುಗಡೆಯ ಹಂತಕ್ಕೆ ಬಂದಿದೆ. ಹೌದು, “5ಜಿ’ ಚಿತ್ರ ಮುಂದಿನ ವಾರ ಅಂದರೆ ಆಗಸ್ಟ್‌ 25 ರಂದು ಬಿಡುಗಡೆಯಾಗುತ್ತಿದೆ.

ಅಷ್ಟಕ್ಕೂ ಚಿತ್ರ ಯಾಕೆ ಇಷ್ಟೊಂದು ತಡ ಎಂದರೆ ಚಿತ್ರದಲ್ಲಿ ಮಾಡಿಕೊಂಡ ಬದಲಾವಣೆ. ಹೌದು, “5ಜಿ’ ಚಿತ್ರ ಮೂರು ಬಾರಿ ಸೆನ್ಸಾರ್‌ ಆಗಿದೆ ಎಂದರೆ ನಂಬಲೇಬೇಕು. ಚಿತ್ರತಂಡ ಚಿತ್ರದಲ್ಲಿ ಒಂದಷ್ಟು ಬದಲಾವಣೆ ಮಾಡಿಕೊಂಡು ಮತ್ತೆ ಮತ್ತೆ ಸೆನ್ಸಾರ್‌ ಮಾಡಿಸಿದೆ. ಚಿತ್ರ ನೋಡಿದ ಹಿರಿಯ ಸಂಭಾಷಣೆಕಾರ ಜಿ.ಕೆ.ಭಾರವಿ ಅವರು ಒಂದಷ್ಟು ಬದಲಾವಣೆ ಮಾಡಿಕೊಂಡರೆ ಚಿತ್ರ ಚೆನ್ನಾಗಿ ಮೂಡಿಬರಬಹುದು ಹಾಗೂ ಮತ್ತಷ್ಟು ಪರಿಣಾಮಕಾರಿಯಾಗಬಹುದು ಎಂದರಂತೆ.

ಅದರಂತೆ, ಬದಲಾವಣೆ ಮಾಡಿಕೊಂಡು ಸೆನ್ಸಾರ್‌ ಮಾಡಿಸಿದೆ ಚಿತ್ರತಂಡ. ಇದೇ ವೇಳೆ ಚಿತ್ರತಂಡಕ್ಕೊಂದು ಐಡಿಯಾ ಬಂದಿದೆ. ಅದೇನೆಂದರೆ ಸಿನಿಮಾವನ್ನು ಯಾರಿಗೂ ತೋರಿಸದೇ ಬಿಡುಗಡೆ ಮಾಡುವ ಬದಲು, ಒಂದಷ್ಟು ಮಂದಿಗೆ ತೋರಿಸಿ ಅವರ ಅನಿಸಿಕೆಗಳನ್ನು ಪಡೆದು ಅದಕ್ಕೆ ತಕ್ಕಂತೆ ಬದಲಾವಣೆ ಮಾಡಿಕೊಂಡರೆ ಇನ್ನೂ ಚೆನ್ನಾಗಿರುತ್ತದೆ ಎಂದು. ಅದೇ ಕಾರಣಕ್ಕೆ ಚಿತ್ರತಂಡದವರು, ಸುಮಾರು 70ಕ್ಕೂ ಹೆಚ್ಚು ಮಂದಿಗೆ ಸಿನಿಮಾ ತೋರಿಸಿದ್ದಾರೆ.

ಅವರು ಕೂಡಾ ಕೆಲವು ಬದಲಾವಣೆ ಸೂಚಿಸಿದ್ದಾರೆ. ಆ ಬದಲಾವಣೆಯೊಂದಿಗೆ ಮತ್ತೂಮ್ಮೆ ಸೆನ್ಸಾರ್‌ ಮಾಡಿಸಿದ ಚಿತ್ರತಂಡ ಈಗ ಸಿನಿಮಾ ಬಿಡುಗಡೆ ಮಾಡಲು ಮುಂದಾಗಿದೆ. ಅಷ್ಟಕ್ಕೂ ಇಷ್ಟೊಂದು ಬದಲಾವಣೆ ಯಾಕೆ ಎಂದರೆ ಚಿತ್ರದಲ್ಲಿರುವ ಗಂಭೀರ ವಿಷಯ ಎಂಬ ಉತ್ತರ ಚಿತ್ರತಂಡದಿಂದ ಬರುತ್ತದೆ. ಚಿತ್ರದಲ್ಲಿ ದೇಶದ ಗಂಭೀರ ವಿಚಾರವೊಂದನ್ನು ಹೇಳಿರುವುದರಿಂದ ಬೇಕಾಬಿಟ್ಟಿ ಸಿನಿಮಾ ಕೊಟ್ಟರೆ ನಾಳೆ ಆಭಾಸ ಆಗಬಹುದೆಂಬ ಕಾರಣಕ್ಕೆ ಅನುಭವಿಗಳಿಗೆ ತೋರಿಸಿ ಒಂದಷ್ಟು ಬದಲಾವಣೆ ಮಾಡಿಕೊಂಡಿದೆ ಚಿತ್ರತಂಡ.

ಈಗ ಸಿನಿಮಾ ಚೆನ್ನಾಗಿ ಮೂಡಿಬಂದಿರುವ ಖುಷಿ ಚಿತ್ರತಂಡದ್ದು. ಸುಮಾರು 70ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಚಿತ್ರ ಬಿಡುಗಡೆಯಾಗಲಿದೆ. ಈ ಚಿತ್ರದ ಪ್ರಮುಖ ಅಂಶವೆಂದರೆ ನೋಟು. ಚಿತ್ರದಲ್ಲಿ 500ರ ನೋಟು ಪ್ರಮುಖ ಪಾತ್ರ ಮಾಡಿದ್ದು, ಒಂದರ್ಥದಲ್ಲಿ ಅದೇ ಈ ಚಿತ್ರದ ಹೀರೋ ಎಂದರೆ ತಪ್ಪಲ್ಲ ಎನ್ನುವುದು ಚಿತ್ರತಂಡದ ಮಾತು. ಚಿತ್ರದಲ್ಲಿ ನಿಧಿ ಸುಬ್ಬಯ್ಯ ನಾಯಕಿಯಾಗಿದ್ದು, ಜಗದೀಶ್‌ ಈ ಚಿತ್ರದ ನಿರ್ಮಾಪಕರು. ಗುರುವೇಂದ್ರ ಶೆಟ್ಟಿ ನಿರ್ದೇಶನ ಮಾಡಿದ್ದಾರೆ.

ತೆಲುಗಿಗೆ 5ಜಿ: ಚಿತ್ರ ಬಿಡುಗಡೆಗೆ ಮುಂಚೆಯೇ ಚಿತ್ರತಂಡ ಖುಷಿಯಾಗಿದೆ. ಅದಕ್ಕೆ ಕಾರಣ ರೀಮೇಕ್‌ ರೈಟ್ಸ್‌ ಹೋಗಿರೋದು. ಚಿತ್ರದ ತೆಲುಗು ರೀಮೇಕ್‌ ಹಕ್ಕನ್ನು ಜಿ.ಕೆ. ಭಾರವಿ ಅವರು ಪಡೆದುಕೊಂಡಿದ್ದಾರಂತೆ. ಈ ಮೂಲಕ ಚಿತ್ರದ ಬಗ್ಗೆ ಚಿತ್ರತಂಡದ ವಿಶ್ವಾಸ ಹೆಚ್ಚಿದೆ. ಮುಂದಿನ ದಿನಗಳಲ್ಲಿ ಇತರ ಭಾಷೆಗೂ ಚಿತ್ರ ರೀಮೇಕ್‌ ಆಗಲಿದೆಯಂತೆ. 

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.