“ಜೂಮ್‌’ 100 ದಿನ ಓಡಿದ್ದು ಸುಳ್ಳಾ?: ಪ್ರಶಾಂತ್‌ ರಾಜ್‌


Team Udayavani, Sep 22, 2017, 5:11 PM IST

zoom.jpg

ಪ್ರಶಾಂತ್‌ ರಾಜ್‌ ನಿರ್ದೇಶನದ “ದಳಪತಿ’ ಚಿತ್ರದ ಆಡಿಯೋ ಬಿಡುಗಡೆಯಾಗಿದೆ. ಪ್ರೇಮ್‌ ಎರಡು ಶೇಡ್‌ನ‌ಲ್ಲಿ ಕಾಣಿಸಿಕೊಂಡಿರುವ ಸಿನಿಮಾವಿದು. ಈ ಸಿನಿಮಾವನ್ನು ಪ್ರಶಾಂತ್‌ ರಾಜ್‌ಗೆ “ಕಮರ್ಷಿಯಲ್‌ ಡೈರೆಕ್ಟರ್‌’ ಎಂಬ ಟ್ಯಾಗ್‌ ಕೊಡುವ ವಿಶ್ವಾಸವಿದೆ. ಈ ಖುಷಿಯ ನಡುವೆಯೇ ಪ್ರಶಾಂತ್‌ ರಾಜ್‌ ಒಂದ ಹಳೆಯ ಬೇಸರ‌ವನ್ನು ತೋಡಿಕೊಂಡರು. ಅದು ಅವರ ನಿರ್ದೇಶನದ “ಜೂಮ್‌’ ಸಿನಿಮಾಕ್ಕೆ ಸಂಬಂಧಪಟ್ಟದ್ದು.

ಗಣೇಶ್‌ ನಾಯಕರಾಗಿರುವ “ಜೂಮ್‌’ ಚಿತ್ರ ಕಳೆದ ವರ್ಷ ಬಿಡುಗಡೆಯಾಗಿ ಯಶಸ್ಸು ಕಂಡಿದ್ದು ನಿಮಗೆ ಗೊತ್ತೆ ಇದೆ. ಸಿನಿಮಾ ಏನೋ ಯಶಸ್ಸು ಕಂಡಿದೆ. ಆದರೆ, ಆ ಸಿನಿಮಾಕ್ಕೆ ಯಾವ ವಿಭಾಗದಲ್ಲೂ ಒಂದು ಪ್ರಶಸ್ತಿಯೂ ಬಂದಿಲ್ಲ ಅನ್ನೋದು ಪ್ರಶಾಂತ್‌ರಾಜ್‌ ಬೇಸರ. “ಜೂಮ್‌’ 50 ದಿನ ಓಡಬಹುದೆಂದು ನಾವು 50 ದಿನದ ಕಾರ್ಯಕ್ರಮ ಕೂಡಾ ಮಾಡಿದೆವು. ಆದರೆ ಚಿತ್ರವನ್ನು ಜನ ಇಷ್ಟಪಟ್ಟ ಕಾರಣ ಅದು 100 ದಿನ ದಾಟಿತು.

ಜನ ಅಷ್ಟೊಂದು ಇಷ್ಟಪಟ್ಟ ಸಿನಿಮಾಕ್ಕೆ ಕಳೆದ ವರ್ಷ ಸರ್ಕಾರ ಸೇರಿದಂತೆ ವಿವಿಧ ಸಂಸ್ಥೆಗಳ ಪ್ರಶಸ್ತಿಗಳಲ್ಲಿ ಯಾವ ಪ್ರಶಸ್ತಿಯೂ ಬಂದಿಲ್ಲ. ಪ್ರಶಸ್ತಿ ಬರೋದು ಬಿಡಿ, ನಾಮನಿರ್ದೇಶನ ಪಟ್ಟಿಯಲ್ಲೂ ನಮ್ಮ ಸಿನಿಮಾ ಯಾವ ವಿಭಾಗದಲ್ಲೂ ಆಯ್ಕೆಯಾಗಿರಲಿಲ್ಲ. ನನಗೆ ಆಶ್ಚರ್ಯವಾಯಿತು, ಹಾಗಾದರೆ ಚಿತ್ರ 100 ದಿನ ಓಡಿದ್ದು ಸುಳ್ಳಾ. ಜನ ಇಷ್ಟಪಟ್ಟು ನೋಡಿದ್ರಾ ಅಥವಾ ಸುಮ್ಮನೆ ನಾವೇ ಓಡಿಸಿದೆವಾ ಎಂಬಂತಹ ಸಂದೇಹ ಬಂತು.

ಕೊನೆಯ ಪಕ್ಷ, ನಾಮಿನಿ ಲಿಸ್ಟ್‌ಗೂ ಆಯ್ಕೆಯಾಗದಿರುವಂಥದ್ದು “ಜೂಮ್‌’ನಲ್ಲಿ ಏನಿತ್ತು, ಹಾಗಾದರೆ ಪ್ರಶಸ್ತಿಯ ಮಾನದಂಡ ಏನು ಎಂಬ ಬಗ್ಗೆ ಬೇಸರವಾಯಿತು’ ಎನ್ನುವುದು ಪ್ರಶಾಂತ್‌ ಮಾತು. ರಾಜ್ಯ ಪ್ರಶಸ್ತಿಯಿಂದ ಹಿಡಿದು ಸೈಮಾ, ಐಫಾ ಸೇರಿದಂತೆ ಏನೇನೆಲ್ಲಾ ಪ್ರಶಸ್ತಿಗಳಿವೆ ಅವೆಲ್ಲದಕ್ಕೂ ಪ್ರಶಾಂತ್‌ರಾಜ್‌ “ಜೂಮ್‌’ನ ಕಳಿಸಿದ್ದರಂತೆ. “ಜೂಮ್‌’ನ ಈ ಬೇಸರವನ್ನು ಪ್ರಶಾಂತ್‌ ರಾಜ್‌ “ದಳಪತಿ’ ಆಡಿಯೋ ರಿಲೀಸ್‌ನಲ್ಲಿ ಹೊರಹಾಕಿದರು. ಇದು ಅವರ ನಿರ್ದೇಶನದ 5ನೇ ಸಿನಿಮಾ. ಮುಂದಿನ ತಿಂಗಳು ಚಿತ್ರ ಬಿಡುಗಡೆಯಾಗಲಿದೆ.

ಟಾಪ್ ನ್ಯೂಸ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.