ಯಾರಿವಳೀ ಹುಡುಗಿ ಅಂಕಣಕ್ಕೆ ಕೋಸ್ಟಲ್‌ ಟು ಸ್ಯಾಂಡಲ್‌ ಚಿರ ಹೆಜ್ಜೆ


Team Udayavani, Sep 23, 2017, 4:49 PM IST

Chirasri-1.jpg

ತುಳು, ಕೊಂಕಣಿ ಸೇರಿದಂತೆ ಪ್ರಾದೇಶಿಕ ಭಾಷೆಯ ಚಿತ್ರಗಳಲ್ಲಿ ನಟಿಸಿದ ಅನೇಕ ನಟಿಯರ ಕನಸು ಬಹುತೇಕ ಒಂದೇ ಆಗಿರುತ್ತದೆ. ಅದೇನೆಂದರೆ ಕನ್ನಡ, ತಮಿಳು ಸೇರಿದಂತೆ ಇತರ ಭಾಷೆಯ ಚಿತ್ರರಂಗದಲ್ಲಿ ಬಿಝಿಯಾಗಬೇಕು. ಬಣ್ಣದ ಲೋಕದಲ್ಲಿ ಮುಖ್ಯವಾಹಿನಿಗೆ ಬರಬೇಕು ಎಂಬುದು. ಹಾಗಾಗಿ ಅನೇಕರು ಆ ನಿಟ್ಟಿನಲ್ಲಿ ಪ್ರಯತ್ನಿಸುತ್ತಲೂ ಇರುತ್ತಾರೆ. ಆದರೆ, ಎಲ್ಲರಿಗೂ ಆ ಅವಕಾಶ ಸಿಗೋದಿಲ್ಲ. ಕೆಲವೊಮ್ಮೆ ಪ್ರಯತ್ನಗಳು ಫ‌ಲಿಸೋದಿಲ್ಲ. ಆದರೆ, ಈ ವಿಷಯದಲ್ಲಿ ಚಿರಶ್ರೀ ಮಾತ್ರ ಅದೃಷ್ಟವಂತೆ. ಕೋಸ್ಟಲ್‌ವುಡ್‌ನಿಂದ ಸ್ಯಾಂಡಲ್‌ವುಡ್‌, ಸ್ಯಾಂಡಲ್‌ವುಡ್‌ನಿಂದ ಕಾಲಿವುಡ್‌ಗೆ ನಿಧಾನವಾಗಿ ಕಾಲಿಡುತ್ತಿದ್ದಾರೆ. ಒಂದಷ್ಟು ಅವಕಾಶಗಳ ಮೂಲಕ ಇಲ್ಲಿ ನೆಲೆಯೂರುವ ಲಕ್ಷಣ ಕೂಡಾ ತೋರುತ್ತಿದ್ದಾರೆ. ಯಾವ ಚಿರಶ್ರೀ ಎಂದರೆ ಮೊದಲು ತುಳು ಸಿನಿಮಾಗಳನ್ನು ತೋರಿಸಬೇಕು. “ರಂಭಾರೊಟ್ಟಿ’ ಹಾಗೂ “ಪವಿತ್ರ’ ಎಂಬ ತುಳು ಸಿನಿಮಾಗಳಲ್ಲಿ ನಟಿಸಿದ್ದು, ಆ ಎರಡು ಸಿನಿಮಾಗಳು ಬಿಡುಗಡೆಯಾಗಿವೆ. ಈ ಮೂಲಕ ಚಿರಶ್ರೀಯ ಸಿನಿಕೆರಿಯರ್‌ ಕೂಡಾ ಆರಂಭವಾಗಿದೆ. ಸಾಮಾನ್ಯವಾಗಿ ತುಳು ಸಿನಿಮಾಗಳಲ್ಲಿ ನಟಿಸುವ ನಾಯಕಿಯರು ಬಹುತೇಕ ದಕ್ಷಿಣ ಕನ್ನಡದವರೇ ಆಗಿರುತ್ತಾರೆ. ಚಿರಶ್ರೀ ಕೂಡಾ ಅದರಿಂದ ಹೊರತಲ್ಲ. ಬಾಲ್ಯದಿಂದಲೇ ಸಿನಿಮಾ ಆಸಕ್ತಿ ಹೊಂದಿದ್ದ ಚಿರಶ್ರೀಗೆ ತುಳು ಸಿನಿಮಾದಲ್ಲಿ ಅವಕಾಶ ಪಡೆಯುವ ಮೂಲಕ ತಮ್ಮ ಕನಸಿನ ಕ್ಷೇತ್ರಕ್ಕೆ ಧುಮುಕಿದ್ದಾರೆ. 

ಕೈ ಹಿಡಿದ ತುಳು ಸಿನಿಮಾಗಳು
ಮೊದಲೇ ಹೇಳಿದಂತೆ ಬಣ್ಣದ ಲೋಕದ ಮೇಲೆ ಆಸಕ್ತಿ ಹೊಂದಿದ್ದ ಚಿರಶ್ರೀಗೆ ಕಾಲೇಜು ದಿನಗಳಲ್ಲೇ ಸಿನಿಮಾದಲ್ಲಿ ನಟಿಸುವ ಅವಕಾಶ ಸಿಗುತ್ತದೆ. ಅದು “ರಂಭಾರೊಟ್ಟಿ’ ಚಿತ್ರದ ಮೂಲಕ. ಈ ಸಿನಿಮಾದ ನಾಯಕಿಯಾಗಿ ಆಯ್ಕೆಯಾಗುವ ಮೂಲಕ ಅಧಿಕೃತವಾಗಿ ಬಣ್ಣದ ಲೋಕಕ್ಕೆ ಚಿರಶ್ರೀ ಎಂಟ್ರಿಕೊಡುತ್ತಿದ್ದಾರೆ. ಕೆಲವರ ಕನಸು ಮೊದಲ ಸಿನಿಮಾಕ್ಕೇ ಕಮರಿ ಹೋಗುತ್ತದೆ. ಇಷ್ಟಪಟ್ಟು ಮಾಡಿದ ಸಿನಿಮಾಗಳು ಕೈ ಹಿಡಿಯದಿರುವ ಮೂಲಕ ಬಂದ ದಾರಿಯಲ್ಲೇ ವಾಪಾಸ್‌ ಹೋಗುವ ಪರಿಸ್ಥಿತಿ ಬರುತ್ತದೆ. ಆದರೆ, ಚಿರಶ್ರೀ ಮಾತ್ರ ಆ ವಿಷಯದಲ್ಲಿ ಅದೃಷ್ಟವಂತೆ. ಏಕೆಂದರೆ “ರಂಭಾರೊಟ್ಟಿ’ ಚಿತ್ರಕ್ಕೆ ಹಾಗೂ ಚಿರಶ್ರೀಯ ನಟನೆಗೆ ಒಳ್ಳೆಯ ಪ್ರತಿಕ್ರಿಯೆ ವ್ಯಕ್ತವಾಗುವ ಮೂಲಕ ಮತ್ತೂಂದು ಸಿನಿಮಾದಲ್ಲಿ ಅವಕಾಶ ಸಿಗುತ್ತದೆ. ಅದು “ಪವಿತ್ರ’. ಇದು ಚಿರಶ್ರೀ ನಟಿಸಿದ ತುಳು ಸಿನಿಮಾ. ಈ ಸಿನಿಮಾದಲ್ಲೂ ಚಿರಶ್ರೀಗೆ ಒಳ್ಳೆಯ ಪಾತ್ರ ಸಿಕ್ಕಿದ್ದು, ಸಿನಿಮಾದ ಬಗ್ಗೆಯೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. 

“ಸಿನಿಮಾ ಬಗ್ಗೆ ಕನಸು ಕಂಡಿದ್ದ ನನಗೆ “ರಂಭಾರೊಟ್ಟಿ’ ಹಾಗೂ “ಪವಿತ್ರ’ ಚಿತ್ರಗಳಲ್ಲಿ ಒಳ್ಳೆಯ ಪಾತ್ರ ಸಿಕ್ಕಿತು. ಆ ಮೂಲಕ ನನ್ನ ಸಿನಿ ಬದುಕು ಆರಂಭವಾಯಿತು. ಈಗ ತುಳು, ಕನ್ನಡ, ತಮಿಳು ಹಾಗೂ ತೆಲುಗು ಸಿನಿಮಾಗಳಿಂದಲೂ ಅವಕಾಶವಿದೆ.ಸದ್ಯ “ಓ ಮಂಜುನಾಥ’  ಎಂಬ ತುಳು ಸಿನಿಮಾ ಒಪ್ಪಿಕೊಂಡಿದ್ದೇನೆ’ ಎನ್ನುವುದು ಚಿರಶ್ರೀ ಮಾತು. ಮೊದಲ ಬಾರಿಗೆ ಕ್ಯಾಮರಾ ಎದುರಿಸಿದಾಗ ಸಹಜವಾಗಿಯೇ ಚಿರಶ್ರೀಗೆ ಭಯವಾಯಿತು. ಆದರೆ, ಈಗ ಒಂದಷ್ಟು ಸಿನಿಮಾಗಳನ್ನು ಮಾಡಿರುವುದರಿಂದ ಆ ಭಯ ದೂರವಾಗಿದ್ದು, ಆರಾಮವಾಗಿ ನಟಿಸುತ್ತೇನೆ ಎನ್ನುತ್ತಾರೆ ಚಿರಶ್ರೀ.

ತುಳು ಸಿನಿಮಾಗಳ ಮೂಲಕ ಗಮನ ಸೆಳೆದ ಚಿರಶ್ರೀಗೆ ಕನ್ನಡ ಚಿತ್ರಗಳಿಂದಲೂ ಅವಕಾಶ ಬರುತ್ತದೆ. ಈಗಾಗಲೇ ಚಿರಶ್ರೀ ನಟಿಸಿದ ಕನ್ನಡ ಸಿನಿಮಾ “ಕಲ್ಪನಾ-2′ ಬಿಡುಗಡೆಯಾಗಿದೆ. ಹೌದು, ಉಪೇಂದ್ರ ಅಭಿನಯದ “ಕಲ್ಪನಾ-2′ ಚಿತ್ರದಲ್ಲಿ ಚಿರಶ್ರೀಗೆ ಒಂದು ಸಣ್ಣ ಪಾತ್ರ ಸಿಕ್ಕಿದೆ. ಸಣ್ಣ ಪಾತ್ರವಾದರೂ ದೊಡ್ಡ ಸಿನಿಮಾ ಎಂಬ ಖುಷಿಯಲ್ಲೇ ಆ ಸಿನಿಮಾವನ್ನು ಒಪ್ಪಿಕೊಂಡು ನಟಿಸಿದ್ದಾರೆ ಚಿರಶ್ರೀ. ಚಿರಶ್ರೀಯ ಬಣ್ಣದ ಲೋಕದ ಆಸೆಗೆ ಬೆನ್ನೆಲುಬಾಗಿ ನಿಂತಿದ್ದು ಅವರ ಕುಟುಂಬವಂತೆ. “ಕುಟುಂಬದವರ ಬೆಂಬಲ ಇಲ್ಲದಿದ್ದರೆ ನಾನು ಈ ಕ್ಷೇತ್ರಕ್ಕೆ ಬರಲು ಸಾಧ್ಯವಾಗುತ್ತಿರಲಿಲ್ಲ. ನನ್ನ ಅಮ್ಮ ಸೇರಿದಂತೆ ಕುಟುಂಬದ ಪ್ರತಿಯೊಬ್ಬರೂ ನನ್ನ ನಟನಾ ಕೆರಿಯರ್‌ಗೆ ಪ್ರೋತ್ಸಾಹ ನೀಡುತ್ತಿದ್ದಾರೆ’ ಎನ್ನಲು ಚಿರಶ್ರೀ ಮರೆಯುವುದಿಲ್ಲ. 

ಕೈ ತುಂಬಾ ಅವಕಾಶ
ಕನ್ನಡ ಸಿನಿಮಾಗಳಲ್ಲಿ ನಾಯಕಿಯಾಗಿ ನಟಿಸಬೇಕೆಂಬ ಕನಸು ಕಂಡಿದ್ದ ಚಿರಶ್ರೀಗೆ ಈಗ ಒಂದಷ್ಟು ಸಿನಿಮಾಗಳಲ್ಲಿ ಅವಕಾಶ ಸಿಕ್ಕಿದೆ. “ಗೋಲ್‌ಮಾಲ್‌ ಬ್ರದರ್’, “ಹುಲಿರಾಯ’, “ಉಡುಂಬಾ’, “ಫ‌ಕೀರ’, “ಕರಿಗಂಬಳಿಯಲ್ಲಿ ಮಿಡಿನಾಗ’ ಚಿತ್ರಗಳಲ್ಲಿ ಚಿರಶ್ರೀ ನಾಯಕಿಯಾಗಿ ನಟಿಸಿದ್ದಾರೆ. “ಹುಲಿರಾಯ’ ಚಿತ್ರದಲ್ಲಿ ಅರಣ್ಯಾಧಿಕಾರಿಯ ಮಗಳಾಗಿ ನಟಿಸಿದ್ದು, ಆ ಚಿತ್ರ ಸದ್ಯದಲ್ಲೇ ಬಿಡುಗಡೆಯಾಗಲಿದೆ. “ಈಗ ಕನ್ನಡ ಚಿತ್ರರಂಗದಲ್ಲಿ ಒಳ್ಳೆಯ ಅವಕಾಶಗಳು ಸಿಗುತ್ತಿವೆ. ಮೂರು ಸಿನಿಮಾಗಳಲ್ಲೂ ವಿಭಿನ್ನವಾದ ಪಾತ್ರ ಸಿಕ್ಕಿದೆ. ಪ್ರತಿ ಪಾತ್ರಗಳಿಗೂ ನ್ಯಾಯ ಒದಗಿಸಲು ಶಕ್ತಿಮೀರಿ ಪ್ರಯತ್ನಿಸುತ್ತಿದ್ದೇನೆ’ ಎನ್ನುವುದು ಚಿರಶ್ರೀ ಮಾತು. “ನನಗೆ ಸಾಕಷ್ಟು ಅವಕಾಶಗಳು ಬಂದಿದ್ದು ಸುಳ್ಳಲ್ಲ. ಆದರೆ, ನಾನು ಚಿತ್ರರಂಗಕ್ಕೆ ಹೊಸಬಳು. ಬಂದ ಅವಕಾಶಗಳನ್ನೆಲ್ಲಾ ಕಣ್ಣುಮುಚ್ಚಿ ಒಪ್ಪಿಕೊಂಡರೆ ಮುಂದೆ ನನ್ನ ಕೆರಿಯರ್‌ಗೆ ತೊಂದರೆಯಾಗುತ್ತದೆ. ಹಾಗಾಗಿ, ನನಗೆ ತುಂಬಾ ಇಷ್ಟವಾದ ಮತ್ತು ಈ ಪಾತ್ರಕ್ಕೆ ನಾನು ನ್ಯಾಯ ಒದಗಿಸಬಲ್ಲೆ ಎಂಬ ನಂಬಿಕೆ ಇದ್ದ ಪಾತ್ರಗಳನ್ನಷ್ಟೇ ಒಪ್ಪಿಕೊಂಡಿದ್ದೇನೆ. ನನಗೆ ಏಕಾಏಕಿ ಸಿನಿಮಾ ಮೇಲೆ ಸಿನಿಮಾ ಮಾಡಿ ಪಟ್ಟಿ ಬೆಳೆಸಿಕೊಳ್ಳುವ ಆಸೆ ಇಲ್ಲ. ನಿಧಾನವಾಗಿಯಾದರೂ ಒಳ್ಳೆಯ ಸಿನಿಮಾಗಳನ್ನು ಮಾಡಬೇಕು’ ಎನ್ನುವುದು ಚಿರಶ್ರೀ ಮಾತು.  ಚಿರಶ್ರೀಗೆ ತೆಲುಗು ಹಾಗೂ ತಮಿಳು ಚಿತ್ರಗಳಿಂದಲೂ ಆಫ‌ರ್‌ ಬಂದಿದ್ದು, ಒಂದು ತೆಲುಗು ಹಾಗೂ ಎರಡು ತಮಿಳು ಸಿನಿಮಾಗಳಲ್ಲಿ ಚಿರಶ್ರೀ ನಟಿಸಿದ್ದಾರೆ. ಮುಂದೆ ಆ ಚಿತ್ರರಂಗದಲ್ಲಿ ಕ್ಲಿಕ್‌ ಆದರೆ ಅಲ್ಲೇ ಸೆಟ್ಲ ಆಗುವ ಆಲೋಚನೆ ಚಿರಶ್ರೀಗಂತೂ ಇಲ್ಲ. “ನನಗೆ ಎಲ್ಲಾ ಭಾಷೆಯ ಚಿತ್ರಗಳಲ್ಲಿ ನಟಿಸಬೇಕೆಂಬ ಆಸೆ ಇದೆ. ಕನ್ನಡ, ತುಳು ಸಿನಿಮಾಗಳಿಗೆ ಮೊದಲ ಆದ್ಯತೆ. ಏಕೆಂದರೆ, ನನಗೆ ಮೊದಲು ಅವಕಾಶ ಕೊಟ್ಟ ಚಿತ್ರರಂಗವಿದು’ ಎನ್ನುವುದು ಚಿರಶ್ರೀ ಮಾತು. ಬಹುತೇಕ ಎಲ್ಲಾ ನಟಿಯರಂತೆ ಚಿರಶ್ರೀಗೂ ಒಂದು ಆಸೆ ಇದೆ. ಅದೇನೆಂದರೆ ನಾಯಕಿ ಪ್ರಧಾನ ಚಿತ್ರಗಳಲ್ಲಿ ನಟಿಸಬೇಕೆಂಬುದು. ಅವರ ಆ ಆಸೆ ಈಡೇರುತ್ತಾ ಕಾದು ನೋಡಬೇಕು.

ಬರಹ: ರವಿಪ್ರಕಾಶ್‌ ರೈ; ಚಿತ್ರಗಳು: ಸಂಗ್ರಹ

ಟಾಪ್ ನ್ಯೂಸ್

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

CHandrababu Naidu

Andhra ಮಾಜಿ ಸಿಎಂ ಚಂದ್ರಬಾಬು ನಾಯ್ಡು ಆಸ್ತಿ 810 ಕೋಟಿ ರೂ.!

PM Modi

Pakistan ವಿರುದ್ಧ ಆಕ್ರೋಶ ; ಉಗ್ರವಾದ ಬಿತ್ತಿದ್ದ ರಾಷ್ಟ್ರಕ್ಕೆ ಗೋಧಿಗೂ ಬರ: ಮೋದಿ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

CHandrababu Naidu

Andhra ಮಾಜಿ ಸಿಎಂ ಚಂದ್ರಬಾಬು ನಾಯ್ಡು ಆಸ್ತಿ 810 ಕೋಟಿ ರೂ.!

PM Modi

Pakistan ವಿರುದ್ಧ ಆಕ್ರೋಶ ; ಉಗ್ರವಾದ ಬಿತ್ತಿದ್ದ ರಾಷ್ಟ್ರಕ್ಕೆ ಗೋಧಿಗೂ ಬರ: ಮೋದಿ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.