ಸಂಗೀತ ಸಂಭ್ರಮದಲ್ಲಿ ಶ್ರೀಧರ್‌ “ಏನಾಗಲಿ ಮುಂದೆ ಸಾಗು ನೀ


Team Udayavani, Sep 23, 2017, 5:19 PM IST

Sridhar-Sambhram-1.jpg

ಹಲವು ವರ್ಷಗಳ ಹಿಂದಿನ ಮಾತಿದು. ಅವರೊಬ್ಬ ಕೀ ಬೋರ್ಡ್‌ ಪ್ಲೇಯರ್‌ ಆಗಿದ್ದರು. “ಸಂಗೀತ ಬ್ರಹ್ಮ ಹಂಸಲೇಖ ಅವರಿಂದ ಹಿಡಿದು ಕನ್ನಡ ಚಿತ್ರರಂಗದ ಈಗಿನ ಬಹುತೇಕ ಸಂಗೀತ ನಿರ್ದೇಶಕರ ಬಳಿ ಕೀ ಬೋರ್ಡ್‌ ಪ್ಲೇಯರ್‌ ಆಗಿ ಕೆಲಸ ಮಾಡುತ್ತಿದ್ದರು. ಅಲ್ಲಿಯವರೆಗೂ ಕೇವಲ ಸಂಗೀತ ನಿರ್ದೇಶಕರಿಗಷ್ಟೇ ಗೊತ್ತಿದ್ದ ಅವರು, “ಮುಸ್ಸಂಜೆ ಮಾತು’ ಎಂಬ ಚಿತ್ರ ಹೊರಬರುತ್ತಿದ್ದಂತೆಯೇ ಬಹುಬೇಗ ಎಲ್ಲರ ಮನೆ ಮಾತಾಗಿಬಿಟ್ಟರು. ಇದಕ್ಕೆ ಕಾರಣ ಆ ಚಿತ್ರದ ಸಂಗೀತ ಮತ್ತು ಮಧುರ ಹಾಡುಗಳು. “ಏನಾಗಲಿ ಮುಂದೆ ಸಾಗು ನೀ …’ ಈ ಹಾಡು ಎಲ್ಲಾದರೂ ಕೇಳಿಬರುತ್ತಿದ್ದರೆ ಖಂಡಿತವಾಗಿಯೂ ಹಾಗೊಂದು ಕ್ಷಣ ನಿಂತು ಪೂರ್ತಿ ಆ ಹಾಡನ್ನು ಕೇಳಿಯೇ ಮುಂದೆ ಹೋಗುವಂತಹ ಮನಮುಟ್ಟುವ ಹಾಡದು. ಇಂತಹ ಅರ್ಥಪೂರ್ಣ ಹಾಡನ್ನು ಬರೆದು ಸಂಯೋಜಿಸಿದ್ದು ವಿ.ಶ್ರೀಧರ್‌ ಸಂಭ್ರಮ್‌. ಚೊಚ್ಚಲ ಚಿತ್ರದ ಮೂಲಕವೇ ಮ್ಯೂಸಿಕ್‌ನಲ್ಲಿ ಸದ್ದು ಮಾಡಿದ ಶ್ರೀಧರ್‌ ಅವರ ಸಂಗೀತ ಪಯಣ “ಮುಸ್ಸಂಜೆ ಮಾತು’ ಚಿತ್ರದಿಂದ ಶುರುವಾಗಿದ್ದು, ಇಲ್ಲಿಯವರೆಗೂ ನಾನ್‌ಸ್ಟಾಪ್‌ ಮ್ಯೂಸಿಕ್‌ ಮಾಡುತ್ತಲೇ ಬಂದಿದ್ದಾರೆ. ಈ ಸಂಗೀತ ಯಾನದಲ್ಲಿ  ಶ್ರೀಧರ್‌ ಕೇವಲ ಸಂಗೀತ ನಿರ್ದೇಶಕರಾಗಿ ಮಾತ್ರ ಗುರುತಿಸಿಕೊಂಡಿಲ್ಲ. ಅವರೊಬ್ಬ ಗೀತೆರಚನೆಕಾರರಾಗಿಯೂ  ಗುರುತಿಸಿಕೊಂಡಿದ್ದಾಗಿದೆ. “ಈವರೆಗೆ ಸಾಧಿಸಿದ್ದು  ಏನೂ ಇಲ್ಲ. ಸಾಧಿಸಬೇಕಾದ್ದು ಬಹಳಷ್ಟಿದೆ’ ಎನ್ನುವ ಶ್ರೀಧರ್‌, “ರೂಪತಾರಾ’ ಜತೆ ಮನದಾಳದ ಮಾತುಗಳನ್ನು ಹಂಚಿಕೊಂಡಿದ್ದಾರೆ. ಅವರದೇ ಮಾತುಗಳಲ್ಲಿ ಹೇಳುವುದಾದರೆ.

ನನ್ನೊಳಗಿನ ಭಯವೇ ಕಾಪಾಡುತ್ತಿದೆ.
ಇದುವರೆಗೆ ನಾನು ಸಂಗೀತ ನೀಡಿದ 18 ಚಿತ್ರಗಳು ಬಿಡುಗಡೆಯಾಗಿವೆ. “ಮುಸ್ಸಂಜೆ ಮಾತು’ ನನ್ನ ಮೊದಲ ಚಿತ್ರ. ಅಲ್ಲಿಂದ ಶುರುವಾದ ನನ್ನ ಮ್ಯೂಸಿಕ್‌ ಜರ್ನಿ “ಇನಿಯ’, “ದುಬೈಬಾಬು’, “ಬೆಳ್ಳಿ’, “ಸಡಗರ’, “ಮುಂಬೈ’, ಜಯಲಲಿತಾ’, “ನಮಸ್ತೆ ಮೇಡಂ’, “ಕೃಷ್ಣನ್‌ ಲವ್‌ಸ್ಟೋರಿ’, “ಕೃಷ್ಣನ್‌ ಮ್ಯಾರೇಜ್‌ ಸ್ಟೋರಿ’, “ಕೃಷ್ಣ ರುಕ್ಕು’, “ಕೃಷ್ಣ ಲೀಲ’, “ಚೌಕ’ ಸೇರಿದಂತೆ ಹಲವು ಚಿತ್ರಗಳಿಗೆ ಸಂಗೀತ ನೀಡಿದ್ದೇನೆ. “ಮುಸ್ಸಂಜೆ ಮಾತು’ ದೊಡ್ಡ ಮ್ಯೂಸಿಕಲ್‌ ಹಿಟ್‌ ಆದಂತಹ ಚಿತ್ರ. ಅದಾದ ಬಳಿಕ “ಕೃಷ್ಣನ್‌ ಲವ್‌ಸ್ಟೋರಿ’, “ಕೃಷ್ಣನ್‌ ಮ್ಯಾರೇಜ್‌ ಸ್ಟೋರಿ’, “ಕೃಷ್ಣ ರುಕ್ಕು’, “ಕೃಷ್ಣ ಲೀಲ’ ಈ ನಾಲ್ಕು ಸೀರೀಸ್‌ ಚಿತ್ರಗಳ ಹಾಡುಗಳೂ ನನಗೆ ಒಳ್ಳೆಯ ಹೆಸರು ತಂದುಕೊಟ್ಟವು. ಬಹುಶಃ ನಾಲ್ಕು ಸೀರಿಸ್‌ ಚಿತ್ರಗಳಿಗೆ ಸಂಗೀತ ಕೊಡುವ ಅವಕಾಶ ಸಿಕ್ಕಿದ್ದು ನನ್ನ ಪುಣ್ಯ. ಇದು ಇಂಡಿಯಾದಲ್ಲೇ ಯಾವ ಕಂಪೋಸರ್‌ಗೂ ಸಿಗದ ಅವಕಾಶವಿದು. ನಾನೂ ಸಕ್ಸಸ್‌ ಬಂದಾಗ ಹಿಗ್ಗಿಲ್ಲ. ಆದರೆ, ಫೇಲ್ಯೂರ್‌ ಆದಾಗ ಒಂದಷ್ಟು ಕಣ್ಣೀರು ಹಾಕಿದ್ದು ಇದೆ. ಇವತ್ತು ನಾನೇನಾದರೂ ಸಾಧಿಸಿದ್ದೇನೆ ಅನ್ನುವುದಾದರೆ ಅದಕ್ಕೆ ಕಾರಣ, ನನ್ನೊಳಗಿರುವ ಭಯ. ಅದೇ ನನ್ನನ್ನು ಕಾಪಾಡುತ್ತಿದೆ. ಲೈಫ‌ಲ್ಲಿ ಎಲ್ಲವನ್ನೂ ನಾನು ಚಾಲೆಂಜಿಂಗ್‌ ಆಗಿ ತೆಗೆದುಕೊಂಡವನು. ಹಾಗಾಗಿಯೇ ಒಂದಷ್ಟು ಯಶಸ್ಸು ಉಳಿಸಿಕೊಂಡು, ಗಳಿಸಿಕೊಂಡು ಬರುತ್ತಿದ್ದೇನೆ. ಇಲ್ಲಿ ಗೆಲುವು, ಸೋಲು ಕಾಮನ್‌. ಎರಡನ್ನೂ ಸಮಾನವಾಗಿಯೇ ನೋಡಿದ್ದೇನೆ. ಹಾಗಾಗಿ ನನಗೆ ಸಂಗೀತ ಕೆಲಸದ ಮೇಲೆ ಭಯ, ಭಕ್ತಿ ಜಾಸ್ತಿ ಹೊರತು, ಬೇರೆ ಯಾವುದರ ಮೇಲೂ ಇಲ್ಲ. ಇಂದು ನನ್ನ ಸಕ್ಸಸ್‌ ಹಿಂದೆ ನನ್ನ ನಿರ್ದೇಶಕರು, ನಿರ್ಮಾಪಕರು, ಸಂಗೀತಗಾರರು, ಗೀತರಚನೆಕಾರರಿದ್ದಾರೆ. ಅವರೆಲ್ಲರಿಗೂ ಈ ಗೌರವ ಸಲ್ಲಬೇಕು. ಜಯಂತ್‌ಕಾಯ್ಕಿಣಿ, ಯೋಗರಾಜ್‌ ಭಟ್‌, ನಾಗೇಂದ್ರ ಪ್ರಸಾದ್‌, ಕವಿರಾಜ್‌, ಗೌಸ್‌ಪೀರ್‌ ಹೀಗೆ ಒಳ್ಳೆಯ ಗೀತ ಸಾಹಿತಿಗಳ ಸಹಕಾರ, ಪ್ರೋತ್ಸಾಹದಿಂದಾಗಿ ಇಂದು ನನ್ನ ಸಂಗೀತಕ್ಕೆ ಒಂದಷ್ಟು ಮಹತ್ವ ಸಿಕ್ಕಿದೆ.

ಯಾವುದೇ ಒಬ್ಬ ಸಾಧಕ ಕೇವಲ ಒಬ್ಬನೇ ಸಾಧನೆ ಮಾಡುವುದಕ್ಕೆ ಸಾಧ್ಯವೇ ಇಲ್ಲ. ನನ್ನ ಸಂಗೀತಕ್ಕೆ ಸಾಥ್‌ ಕೊಟ್ಟವರ ಸಂಖ್ಯೆ ದೊಡ್ಡದಾಗಿದೆ. ಮೊದಲನೆಯದು ನನ್ನ ಜತೆಗಿರುವ ಸ್ಟುಡಿಯೋ ಹುಡುಗರು, ಪ್ರೋಗ್ರಾಮಿಸ್ಟ್‌ ಆದ ಪ್ರವೀಣ್‌, ಸುರೇಶ್‌ ರಾಜು, ಸುಕುಮಾರ್‌ ಸೇರಿದಂತೆ ನನ್ನ ಫ್ಯಾಮಿಲಿಯೂ ಸಾಥ್‌ ಕೊಟ್ಟಿದೆ. ಇಲ್ಲಿ ಕೇವಲ ಸಂಗೀತ ನಿರ್ದೇಶಕ ಅಂದರೆ ಎಲ್ಲವನ್ನು ಮಾಡಬಲ್ಲ ಅಂದುಕೊಳ್ಳುವುದು ತಪ್ಪು. ಇಲ್ಲಿ ಸಂಗೀತ ಸಂಯೋಜಕ ಇರುತ್ತಾನೆ. ವಾದ್ಯ ಸಂಯೋಜಕ ಇರುತ್ತಾನೆ. ಸಂಗೀತದ ಸಂಯೋಜಕನೂ ಇರುತ್ತಾನೆ. ಇವೆಲ್ಲದರ ಜತೆ ಸಂಗೀತ ನಿರ್ದೇಶನ ಮಾಡುವವನೂ ಇರುತ್ತಾನೆ. ಎಲ್ಲವನ್ನೂ ನಿಭಾಯಿಸುವುದು ಕಷ್ಟದ ಕೆಲಸವೆ. ಆದರೆ, ನಾನು ಎಲ್ಲವನ್ನೂ ನಿಭಾಯಿಸುವುದಕ್ಕೆ ಸಾಧ್ಯವಾಗಿದ್ದು, ನನ್ನೆಲ್ಲಾ ಟೀಮ್‌ನಿಂದ. ನನಗೆ ಅವಕಾಶ ಕೊಟ್ಟವರಿಗೆ ನಾನು ಸದಾ ಚಿರಋಣಿಯಾಗಿರತ್ತೇನೆ. ನಿರ್ದೇಶಕರು, ನಿರ್ಮಾಪಕರು, ಆಡಿಯೋ ಕಂಪೆನಿಗಳು, ಫೇಸ್‌ಬುಕ್‌ ಅಭಿಮಾನಿಗಳು, ಮೀಡಿಯಾ ಸ್ನೇಹಿತರು ಇವರೆಲ್ಲರೂ ನನ್ನ ಕೆಲಸಕ್ಕೆ ಬೆನ್ನತಟ್ಟಿ ಪ್ರೋತ್ಸಾಹಿಸಿದ್ದಾರೆ. ನಾನು ಸಾಕಷ್ಟು ಪಾಠ ಕಲಿತಿದ್ದೂ ಇದೆ. ಒಂದೊಂದು ಪಾಠ ಕೂಡ ನನ್ನ ಸಕ್ಸಸ್‌ಗೆ ಮತ್ತು ಬಿಜಿಯಾಗುವುದಕ್ಕೆ ಕಾರಣವಾಗಿವೆ.

ಸಾಮಾನ್ಯವಾಗಿ ನಿರ್ದೇಶಕರು ಒಂದು ಸಿನಿಮಾದಲ್ಲಿ ಕೆಲಸ ಮಾಡಿದ ಸಂಗೀತ ನಿರ್ದೇಶಕರ ಜತೆ ಮತ್ತೆ ಮತ್ತೆ ಕೆಲಸ ಮಾಡಿದ್ದು ಕಡಿಮೆ. ಆದರೆ, ನನ್ನ ವಿಷಯದಲ್ಲಿ ಅದು ಹೆಚ್ಚಾಗಿದೆ. “ಮುಸ್ಸಂಜೆ’ ಮಹೇಶ್‌ ಜತೆ ನಾಲ್ಕು ಚಿತ್ರಗಳಾಗಿವೆ. ಶಶಾಂಕ್‌ ಜತೆಯೂ ಚಿತ್ರಗಳನ್ನು ಮಾಡಿದ್ದೇನೆ. ಅಜೇಯ್‌ ರಾವ್‌ ಕಾಂಬಿನೇಷನ್‌ನಲ್ಲಿ ನಾಲ್ಕು ಚಿತ್ರಗಳನ್ನು ಮಾಡಿದ್ದೇನೆ. ರಿಪೀಟೆಡ್‌ ನಿರ್ದೇಶಕರು ಬರುತ್ತಾರೆ. ಅದು ನನಗೆ ಖುಷಿ. ಒಳ್ಳೆಯ ಕೆಲಸ ಕೊಟ್ಟರೆ, ಯಾರಾದರೂ ಸರಿ, ಬಂದೇ ಬರುತ್ತಾರೆ. ಕೆಲವೊಮ್ಮೆ ತಡ ಆಗಬಹುದು. ಆದರೆ, ಒಳ್ಳೇ ಗುಣಮಟ್ಟ ಕೊಡಬೇಕು ಎಂಬುದಷ್ಟೇ ನನ್ನ ಉದ್ದೇಶ. ನಾನು ಹಂಸಲೇಖ ಅವರ ಗರಡಿಯಿಂದ ಬಂದವನು. ಹಾಗಾಗಿ, ಯಾವ ಕಥೆಗೆ, ಏನಿರಬೇಕು, ಏನು ಕೊಡಬೇಕು ಎಂಬುದನ್ನು ಅರಿತಿದ್ದೇನೆ. ಅದೊಂದೇ ನನ್ನ ಸ್ಟ್ರೆಂಥ್‌ ಎನ್ನುವ ಶ್ರೀಧರ್‌, ಕಾಯಕವೇ ಕೈಲಾಸ ಎಂದು ನಂಬಿದವನು ನಾನು, ನನಗೆ ಸಂಗೀತ ಬಿಟ್ಟರೆ ಬೇರೇನೂ ಗೊರತ್ತಿಲ್ಲ. ಈ ಒತ್ತಡದ ನಡುವೆ ನನ್ನ ಫ್ಯಾಮಿಲಿಗೂ ಟೈಮ್‌ ಕೊಡೋಕ್ಕಾಗಿಲ್ಲ. ಆದರೂ, ಅವರ ಪ್ರೋತ್ಸಾಹದಿಂದ ಇಷ್ಟೆಲ್ಲಾ ಆಗೋಕೆ ಸಾಧ್ಯವಾಗಿದೆ.

ಎಂಟು ಸಿನಿಮಾಗಳು ಬಿಡುಗಡೆಗಿವೆ.
ಶ್ರೀಧರ್‌ ಹೊಸಬರ ಜತೆ ಕೆಲಸ ಮಾಡಿರುವುದೇ ಹೆಚ್ಚು, ಸುದೀಪ್‌, ಉಪೇಂದ್ರ, ಅಜೇಯ್‌ ರಾವ್‌ ಇವರೊಂದಿಗೆ ಕೆಲಸ ಮಾಡಿದಂತೆಯೇ, ಹೊಸಬರ ಜತೆ ಕೆಲಸ ಮಾಡುತ್ತಿದ್ದಾರೆ. ಸದ್ಯಕ್ಕೆ ಈ ವರ್ಷ 25 ಚಿತ್ರಗಳನ್ನು ಮುಗಿಸುವ ಹುಮ್ಮಸ್ಸಿನಲ್ಲಿದ್ದಾರೆ. ಮುಂದಿನ ವರ್ಷಕ್ಕೆ ಸರಿಯಾದ ಕೆಲಸ ಸಿಕ್ಕರೆ, ಅರ್ಧ ಸೆಂಚುರಿಯ ಗಡಿ ಬಳಿ ನಿಲ್ಲುವ ಉತ್ಸಾಹದಲ್ಲೂ ಇದ್ದಾರೆ. ಇನ್ನೊಂದು ಸಂತಸದ ವಿಷಯವೆಂದರೆ, ಸುದೀಪ್‌ ಅವರ ಜತೆ ಇತ್ತೀಚೆಗೆ ಮಾತುಕತೆ ನಡೆಸಿರುವ ಶ್ರೀಧರ್‌ಗೆ, ಒಂದು ಸಿನಿಮಾ ಮಾಡುವ ಬಗ್ಗೆಯೂ ಸುದೀಪ್‌ ಮಾತು ಕೊಟ್ಟಿದ್ದಾರೆ. ಈ ನಡುವೆ ಶ್ರೀಧರ್‌ ಅವರು ಸಂಗೀತ ಕೊಟ್ಟಿರುವ ಸಿನಿಮಾಗಳು ರಿಲೀಸ್‌ಗೆ ರೆಡಿಯಾಗಿವೆ. ಆ ಪೈಕಿ “ಜಿಂದಾ’, “ರಾಜರು’, “ಒನ್‌ ಮೋರ್‌ ಕೌರವ’, “ಸರ್ವಸ್ವ’,” ಫ‌ಸ್ಟ್‌ಲವ್‌’, “ಉಪೇಂದ್ರ ಮತ್ತೆ ಬಾ’ ಚಿತ್ರಗಳು ಇನ್ನೇನು ಪ್ರೇಕ್ಷಕರ ಮುಂದೆ ಬರಲು ಸಜ್ಜಾಗಿವೆ. “ಟೈಗರ್‌ ಗಲ್ಲಿ’ ಹಾಗೂ “ರಾಜರು’ ಚಿತ್ರದ ಹಾಡುಗಳಿಗೆ ಎಲ್ಲೆಡೆಯಿಂದ ಮೆಚ್ಚುಗೆ ಸಿಕ್ಕಿರುವುದನ್ನೂ ಖುಷಿಯಿಂದ ಹೇಳುತ್ತಾರೆ ಶ್ರೀಧರ್‌.  ಇನ್ನು, ಗುಬ್ಬಿ ವಿಜಯ್‌ ನಿರ್ದೇಶನದ ಶ್ರೀನಗರ ಕಿಟ್ಟಿ ನಟಿಸಿರುವ “ಶಂಕ’, “ಮೂರು ಗಂಟೆ ಮೂವತ್ತು ದಿನ’ ಹಾಗೂ ಮುಸ್ಸಂಜೆ ಮಹೇಶ್‌ ನಿರ್ದೇಶನದ ಪ್ರೊಡಕ್ಷನ್‌ ನಂ. 6 ಮತ್ತು 7 ಈ ಎರಡು ಸಿನಿಮಾಗಳಿಗೆ ಕೆಲಸ ನಡೆಯುತ್ತಿದೆ. 

ಇದರೊಂದಿಗೆ ಇನ್ನೊಂದು ವಿಶೇಷವೆಂದರೆ, ಶ್ರೀಧರ್‌ ಸಂಗೀತ ನೀಡಿರುವ “ಸರ್ವಸ್ವ’ ಎಂಬ ಚಿತ್ರದ ಹಾಡುಗಳನ್ನು ಕೇಳಿ, ತೆಲುಗು, ತಮಿಳು ಭಾಷೆಯಲ್ಲೂ ತಯಾರಾಗುತ್ತಿರುವ ಚಿತ್ರದಲ್ಲಿ ಅದೇ ಹಾಡುಗಳನ್ನು ಉಳಿಸಿಕೊಳ್ಳುತ್ತಿದ್ದಾರಂತೆ. ಇವೆಲ್ಲದರ ಜತೆಗೆ ಕಿರುತೆರೆಗೂ ಶ್ರೀಧರ್‌ ಜಿಗಿದಿರುವುದುಂಟು. ಶ್ರುತಿ ನಾಯ್ಡು ಅವರ “ಸಂಜು ಮತ್ತು ನಾನು’ ಹಾಗೂ “ಬ್ರಹ್ಮಗಂಟು’ ಎಂಬ ಧಾರಾವಾಹಿಗೆ ಶೀರ್ಷಿಕೆ ಗೀತೆಗೆ ಸಂಗೀತ ನೀಡಿದ್ದಾರೆ. ಅಜೇಯ್‌ ಹಾಗೂ ಶಶಾಂಕ್‌ ಜತೆ ಒಂದು ಸಿನಿಮಾಗೂ ಕೆಲಸ ಮಾಡುವ ಬಗ್ಗೆ ಹೇಳುವ ಅವರು, ನಿರ್ದೇಶಕ ನಾಗಶೇಖರ್‌ ಅಭಿನಯಿಸಲಿರುವ “ಸಂಜು ಮತ್ತು ಗೀತಾ ಭಾಗ 2′ ಚಿತ್ರಕ್ಕೂ ಈಗಾಗಲೇ ಹಾಡುಗಳನ್ನು ಸಂಯೋಜಿಸಿದ್ದಾರಂತೆ.

ಟಾಪ್ ನ್ಯೂಸ್

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

7-uv-fusion

UV Fusion: ಚುಕ್ಕಿ ತಾರೆ ನಾಚುವಂತೆ ಒಮ್ಮೆ ನೀ ನಗು

6-fusion

Yugadi: ಯುಗಾದಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.