ರವಿಶಂಕರ್‌ ಫ್ಯಾನ್‌ ಆಫ್ ರಾಜಕುಮಾರ್‌!


Team Udayavani, Oct 23, 2017, 6:36 PM IST

RLR-(2).jpg

ಖಳನಟ ರವಿಶಂಕರ್‌ ತೆರೆಯ ಮೇಲೆ ಎಷ್ಟು ಗಂಭೀರವಾಗಿ, ಭಯಂಕರವಾಗಿ ಕಾಣುತ್ತಾರೋ, ಅಷ್ಟೇ ಆಪ್ತವಾಗಿ, ಹಾಸ್ಯದ ಹೊನಲೆಬ್ಬಿಸುತ್ತಾರೆ. ಅನೇಕ ಚಿತ್ರಗಳಲ್ಲಿ ಹೀರೋಗಳಿಗೆ ಸಖತ್‌ ಕಿರಿಕ್‌ ಕೊಟ್ಟಿರುವ ರವಿಶಂಕರ್‌, ಬೆರಳೆಣಿಕೆ ಚಿತ್ರಗಳಲ್ಲೂ ವಿಲನ್‌ಗಳಿಗೆ ಅಷ್ಟೇ ಕ್ವಾಟ್ಲೆ ಕೊಟ್ಟಿದ್ದಾರೆ.

ಹೌದು, “ಅಧ್ಯಕ್ಷ’, “ವಿಕ್ಟರಿ’ ಬಳಿಕ ರವಿಶಂಕರ್‌ಗೆ ಮತ್ತೂಂದು ಅಂಥದ್ದೇ ಪಾತ್ರ ಸಿಕ್ಕಿದೆ. ಔಟ್‌ ಅಂಡ್‌ ಔಟ್‌ ಕಾಮಿಡಿಯಾಗಿರುವ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ ರವಿಶಂಕರ್‌. ಅದು ವಿಜಯ್‌ ರಾಘವೇಂದ್ರ, ರಾಧಿಕಾ ಪ್ರೀತಿ ನಾಯಕ-ನಾಯಕಿಯರಾಗಿ ನಟಿಸಿರುವ “ರಾಜ ಲವ್ಸ್‌ ರಾಧೆ’ ಚಿತ್ರ.

ಈ ಚಿತ್ರದಲ್ಲಿ ರವಿಶಂಕರ್‌ ಅವರದು ಹೀರೋ ಹಾಗು ಆತನ ಗೆಳೆಯರಿಗೆ ಸಹಾಯ ಮಾಡುವ ಪಾತ್ರ. ಅದಷ್ಟೇ ಅಲ್ಲ, ಈ ಸಿನಿಮಾದಲ್ಲಿ ರವಿಶಂಕರ್‌ ಅವರು ಪಕ್ಕಾ ಡಾ.ರಾಜಕುಮಾರ್‌ ಅಭಿಮಾನಿಯಾಗಿ ಚಿತ್ರದಲ್ಲಿ ಮೊದಲ ಸಲ ಕಾಣಿಸಿಕೊಂಡಿದ್ದಾರೆ.

ಅವರು ಹರಿಬಿಡುವ ಮಾತುಗಳ ನಡುವೆ ಅಣ್ಣಾವ್ರ ಕೆಲ ಸಿನಿಮಾಗಳ ಡೈಲಾಗ್‌ಗಳನ್ನು ಹೇಳುವ ಮೂಲಕ ಪಕ್ಕಾ ಅಣ್ಣಾವ್ರ ಅಭಿಮಾನಿಯಾಗಿ ನಟಿಸಿದ್ದಾರೆ. ಸಿನಿಮಾದ ಕ್ಲೈಮ್ಯಾಕ್ಸ್‌ನಲ್ಲಿ ಬರುವ ದೊಡ್ಡ ಫೈಟ್‌ ಸೀನ್‌ ಗಂಭೀರವಾಗಿದ್ದರೂ, ರವಿಶಂಕರ್‌ ಮತ್ತು ಅವರ ಹೀರೋ ಗೆಳೆಯರ ಎಂಟ್ರಿಯಿಂದ ಅದು ಹಾಸ್ಯಕ್ಕೆ ತಿರುಗುತ್ತದೆ.

ಆ ಫೈಟ್‌ನಲ್ಲಿ ರವಿಶಂಕರ್‌ ಅವರು ಡಾ.ರಾಜಕುಮಾರ್‌ ಅವರ ಮುಖವಾಡ ಧರಿಸಿಕೊಂಡು ರೌಡಿಗಳನ್ನು ಹಿಗ್ಗಾಮುಗ್ಗ ಥಳಿಸುತ್ತಾರೆ. ಅಷ್ಟೇ ಅಲ್ಲ, ಡಾ. ರಾಜಕುಮಾರ್‌ ಸಿನಿಮಾಗಳ ಡೈಲಾಗ್‌ ಹರಿಬಿಡುತ್ತಲೇ, ಎದುರಾಳಿಗಳನ್ನು ಎರ್ರಾಬಿರ್ರಿ ಹೊಡೆದುರುಳಿಸುತ್ತಾರೆ.

ಅವರಷ್ಟೇ ಅಲ್ಲ, ತಬಲಾ ನಾಣಿ, “ಮಜಾ ಟಾಕೀಸ್‌’ ಪವನ್‌ ಕುಮಾರ್‌, “ಕುರಿ’ ಸುನೀಲ್‌, “ಕುರಿ’ ರಂಗ ಇವರೆಲ್ಲರೂ ಶಿವರಾಜಕುಮಾರ್‌, ಸುದೀಪ್‌ ಹಾಗು ದರ್ಶನ್‌ ಅವರ ಮುಖವಾಡ ಧರಿಸಿಕೊಂಡು, ಅವರ ಚಿತ್ರಗಳ ಡೈಲಾಗ್‌ ಹರಿಬಿಡುತ್ತಲೇ ಫೈಟ್‌ ಮಾಡುತ್ತಾರೆ. ರವಿಶಂಕರ್‌ ಎಷ್ಟೋ ಚಿತ್ರಗಳಲ್ಲಿ ಹೀರೋಗಳ ವಿರುದ್ಧ ಆರ್ಭಟಿಸಿ ಹೊಡೆದಾಡುವುದನ್ನು ಕಾಣಬಹುದು.

ಆದರೆ, “ರಾಜ ಲವ್ಸ್‌ ರಾಧೆ’ ಚಿತ್ರದಲ್ಲಿ ಅವರು ನಕ್ಕು, ನಗಿಸುತ್ತಲೇ ಪೈಟ್‌ ಮಾಡಿರೋದು ವಿಶೇಷ. ಎಚ್‌.ಎಲ್‌.ಎನ್‌. ರಾಜ್‌ ಹೆಸರಘಟ್ಟ ನಿರ್ಮಾಣದ ಈ ಚಿತ್ರಕ್ಕೆ ರಾಜಶೇಖರ್‌ ನಿರ್ದೇಶಕರು. ಥ್ರಿಲ್ಲರ್‌ ಮಂಜು ಈ ಸಾಹಸ ದೃಶ್ಯವನ್ನು ನಿರ್ದೇಶಿಸಿದ್ದಾರೆ. ನವೆಂಬರ್‌ನಲ್ಲಿ ಚಿತ್ರ ಬಿಡುಗಡೆಯಾಗುವ ಸಾಧ್ಯತೆ ಇದೆ.  

ಟಾಪ್ ನ್ಯೂಸ್

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

18-

Book Brahma ಸ್ವಾತಂತ್ರ‍್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.