ಚಿನ್ನಾಭರಣ ಮಳಿಗೆಯಲ್ಲಿ ಕಳವಿಗೆ ಬಂದು ಸಿಕ್ಕಿಬಿದ್ದ ಕಳ್ಳಿಯರು!


Team Udayavani, Jan 16, 2017, 11:41 AM IST

gold-thefts.jpg

ಬೆಂಗಳೂರು: ಬಸವನಗುಡಿಯಲ್ಲಿರುವ ಶ್ರೀ ಸಾಯಿಗೋಲ್ಡ್‌ ಪ್ಯಾಲೇಸ್‌ನ ಚಿನ್ನಾಭರಣ ಮಳಿಗೆಯಲ್ಲಿ ಕಳವು ಮಾಡಲು ಬಂದಿದ್ದ ಆಂಧ್ರ ಮೂಲದ ಮೂವರು ಮಹಿಳೆಯರನ್ನು ಭಾನುವಾರ ಮಳಿಗೆಯ ಸಿಬ್ಬಂದಿ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ಆಂಧ್ರಪ್ರದೇಶದ ಕುಪ್ಪಂ ಮೂಲದ ಕಲಾವತಿ, ಲಲಿತಾ, ರತ್ನಾ ಬಂಧಿತರು. ಈ ಮೂವರು ಕಳೆದ ಅಕ್ಟೋಬರ್‌ನಲ್ಲಿ ಚಿನ್ನಾಭರಣ ಮಳಿಗೆಗೆ ಗ್ರಾಹಕರ ಸೋಗಿನಲ್ಲಿ ಬಂದು ಓಲೆ ಕಳವು ಮಾಡಿಕೊಂಡು ಹೋಗಿದ್ದರು. ಈ ಸಂಬಂಧ ಮಳಿಗೆ ಮಾಲಿಕರು ಬಸವನಗುಡಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಭಾನುವಾರ ಪುನಃ ಕಳುವಿಗೆ ಬಂದಿದ್ದಾಗ ಸಿಬ್ಬಂದಿ ಕೈಗೆ ಸಿಕ್ಕಿಬಿದ್ದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಲಾವತಿ, ಲಲಿತಾ ಮತ್ತು ರತ್ನಾ ಅವರು ಭಾನುವಾರ ಮಧ್ಯಾಹ್ನ ಗ್ರಾಹಕರ ಸೋಗಿನಲ್ಲಿ ಮಳಿಗೆಯ ಕೌಂಟರ್‌ಗೆ ತೆರಳಿ ಗಜೇಂದ್ರ ಎಂಬ ಸೇಲ್ಸ್‌ಮ್ಯಾನ್‌ ಬಳಿ ಚಿನ್ನಾರಣ ತೋರಿಸುವಂತೆ ಕೇಳಿದ್ದಾರೆ. ಹಲವು ಚಿನ್ನಾಭರಣವನ್ನು ತೆಗೆಸಿರುವ ಮಹಿಳೆಯರು ಯಾವ ಒಡವೆಯನ್ನೂ ಆಯ್ಕೆ ಮಾಡಲಿಲ್ಲ. ಬಳಿಕ ಮತ್ತಷ್ಟು ಒಡವೆ ತೆಗೆಯುವಂತೆ ಕೇಳಿದ್ದಾರೆ.

ಮಹಿಳೆಯರ ನಡವಳಿಕೆ ಗಮನಿಸಿದ ಸೇಲ್ಸ್‌ಮ್ಯಾನ್‌ ಕಳೆದ ಬಾರಿ ಮಳಿಗೆಗೆ ಬಂದು ಕಳವು ಮಾಡಿದ್ದ ಮಹಿಳೆಯರೇ ಇವರಿರಬಹುದು ಎಂದು ಅನುಮಾನಗೊಂಡು ಇತರೆ ಸಿಬ್ಬಂದಿಯ ನೆರವಿನೊಂದಿಗೆ ಅವರನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಬಳಿಕ ಕಳೆದ ಅಕ್ಟೋಬರ್‌ನಲ್ಲಿ ನಡೆದಿದ್ದ ಕಳವು ಪ್ರಕರಣದ ಸಿಸಿವಿಟಿ ದೃಶ್ಯಾವಳಿ ಪರಿಶೀಲನೆ ನಡೆಸಿದಾಗ ಕಳವಿಗೆ ಬಂದಿದ್ದು ಇದೇ ಮಹಿಳೆಯರು ಎಂಬುದು ಖಚಿತವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.  

ಬಂಧಿತ‌ ಆರೋಪಿಗಳು ಬೇರೆ ಮಳಿಗೆಗಳಲ್ಲೂ ಕಳವು ಮಾಡಿರುವ ಶಂಕೆ ಇದ್ದು, ಆ ಕುರಿತು ವಿಚಾರಣೆ ನಡೆಸಲಾಗುತ್ತಿದೆ. ಕುಪ್ಪುಂನಲ್ಲಿರುವ ಲಕ್ಷಿ ಎಂಬಾಕೆ ನಕಲಿ ಚಿನ್ನಾಭರಣಗಳನ್ನು ತಯಾರಿಸಿ, ಮಹಿಳೆಯರಿಗೆ ಕೊಟ್ಟು ಅದನ್ನು ಚಿನ್ನಾಭರಣ ಮಳಿಗೆಯಲ್ಲಿಟ್ಟು ಅಸಲಿ ಚಿನ್ನಾಭರಣ ಕದಿಯುವಂತೆ ಸೂಚಿಸುತ್ತಿದ್ದಳು ಎಂಬುದು ತನಿಖೆ ವೇಳೆ ತಿಳಿದುಬಂದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಹಬ್ಬದ ದಿನಗಳಲ್ಲಿ ಹೆಚ್ಚು ಗ್ರಾಹಕರಿರುತ್ತಾರೆ, ಸುಲಭವಾಗಿ ಕಳವು ಮಾಡಬಹುದೆಂದು ಹಬ್ಬದ ದಿನಗಳಲ್ಲಿ ಕಳವಿಗೆ ಬಂದಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಕದ್ದು ಪುನಃ ಮಳಿಗೆಗೆ ಬಂದಿದ್ರು!
ಇದೇ ಮೂವರು ಮಹಿಳೆಯರು 2016ರ ಅ. 31ರಂದು ಶ್ರೀಸಾಯಿಗೋಲ್ಡ್‌ ಪ್ಯಾಲೇಸ್‌ಗೆ ಗ್ರಾಹಕರ ಸೋಗಿನಲ್ಲಿ ಬಂದಿದ್ದರು. ಮಳಿಗೆಯಲ್ಲಿದ್ದ ಸೇಲ್ಸ್‌ಗರ್ಲ್ಸ್ಗೆ ಚಿನ್ನಾಭರಣ ತೋರಿಸುವಂತೆ ಹೇಳಿದ್ದರು.  ಕೆಲವು ಒಡವೆಗಳನ್ನು ಪಡೆದಿದ್ದ ಮಹಿಳೆಯರು ಅವುಗಳನ್ನು ಪರಿಶೀಲಿಸುತ್ತಿದ್ದರು.

ಈ ವೇಳೆ ಮತ್ತಷ್ಟು ಒಡವೆಗಳನ್ನು ತೋರಿಸುವಂತೆ ಹೇಳಿದ್ದು, ಸೇಲ್ಸ್‌ಗರ್ಲ್ ಹಿಂದಿರುಗಿ ಬೇರೆ ಚಿನ್ನಾಭರಣ ತೋರಿಸುವಷ್ಟರಲ್ಲಿ ಓರ್ವ ಮಹಿಳೆ ಅಸಲಿ ಚಿನ್ನಾಭರಣಗಳನ್ನು ತಮ್ಮ ಬ್ಯಾಗ್‌ಗೆ ಹಾಕಿಕೊಂಡಿದ್ದು, ಇನ್ನಿಬ್ಬರು ನಕಲಿ ಒಡವೆಗಳನ್ನು ಮಳಿಗೆಯ ಬಾಕ್ಸ್‌ನಲ್ಲಿ ಇಟ್ಟು ಬಳಿಕ ಸ್ಥಳದಿಂದ ಪರಾರಿಯಾಗಿದ್ದರು.

ಅನುಮಾನದಿಂದ ಮಳಿಗೆಯ ಸಿಸಿಟಿವಿಗಳನ್ನು ಪರಿಶೀಲನೆ ನಡೆಸಿದಾಗ ಮೂವರು ಮಹಿಳೆಯರ ಕೈಚಳಕ ಬಯಲಾಗಿತ್ತು. ಈ ಬಾರಿಯೂ ಮೂವರು ಮಹಿಳೆಯರು ಬಂದು ಹಿಂದಿನಂತೆಯೇ ವರ್ತಿಸಿದ್ದು ಮಳಿಗೆ ಸಿಬ್ಬಂದಿಯ ಅನುಮಾನಕ್ಕೆ ಕಾರಣವಾಗಿ ಕಳ್ಳರು ಸಿಕ್ಕಿಬೀಳುವಂತಾಯಿತು.

ಟಾಪ್ ನ್ಯೂಸ್

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.