ರಾಜ್ಯದ ಎಲ್ಲ ವಿವಿಗಳೂ ಹಗರಣಮಯ


Team Udayavani, Jan 18, 2017, 12:07 PM IST

basavarayareddy.jpg

ಬೆಂಗಳೂರು: ವಿಶ್ವವಿದ್ಯಾಲಯಗಳ ಸುಧಾರಣೆಗೆ ಮುಂದಾಗಿರುವ ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ, ಮೊದಲಿಗೆ ಅಲ್ಲಿ ನಡೆದಿರುವ ಹಗರಣಗಳ ಮೇಲೆ ಕಣ್ಣಿಟ್ಟಿದ್ದಾರೆ. ರಾಜ್ಯದ ಎಲ್ಲಾ 17 ವಿವಿಗಳಲ್ಲೂ  ಬೃಹತ್‌ ಹಗರಣಗಳು ನಡೆದಿರುವುದಾಗಿ ಮೇಲ್ನೋಟಕ್ಕೆ ಕಂಡು ಬರುತ್ತಿದ್ದು, ವಿವಿಗಳಲ್ಲಿ ಕಳೆದ 10 ವರ್ಷಗಳಿಂದ ನಡೆದಿರುವ ಹಗರಣಗಳ ತನಿಖೆಗೆ ಜಿಲ್ಲಾ ಮಟ್ಟದ ಉನ್ನತಾಧಿಕಾರಿಗಳನ್ನು ನೇಮಕ ಮಾಡಲಾಗಿದೆ ಎಂದು ತಿಳಿಸಿದ್ದಾರೆ. 

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿವಿಗಳಲ್ಲಿ ನಡೆದಿರುವ ಹಗರಣಗಳ ಕುರಿತ ಕಡತಗಳು ತಮ್ಮ ಬಳಿ ಇವೆ. ಎಲ್ಲಾ ವಿವಿಗಳಲ್ಲಿ ಒಂದಲ್ಲಾ ಒಂದು ಹಗರಣ ನಡೆದಿದೆ. ಹೀಗಾಗಿ ಪ್ರತಿ ವಿವಿಗಳಲ್ಲೂ  10 ವರ್ಷಗಳಿಂದ ನಡೆದಿರುವ ಹಗರಣಗಳ ತನಿಖೆಗೆ ತನಿಖಾಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಆಯಾ ಜಿಲ್ಲೆಯ ಜಿಲ್ಲಾಧಿಕಾರಿ, ಜಿಪಂ ಹಣಕಾಸು ಅಧಿಕಾರಿ ಮತ್ತು ಲೋಕೋಪಯೋಗಿ ಇಲಾಖೆಯ ಸೂಪರಿಂಟೆಂಡೆಂಟ್‌ ಎಂಜಿನಿಯರ್‌ಗಳು ತನಿಖಾಧಿಕಾರಿಗಳಾಗಿದ್ದು, ಹಗರಣದ ತನಿಖೆ ನಡೆಸಿ ವರದಿ ನೀಡುವಂತೆ ಸೂಚಿಸಲಾಗಿದೆ ಎಂದರು.

ಎಲ್ಲಾ ವಿವಿಗಳು ಸೇರಿ ಸುಮಾರು 500 ಕೋಟಿ ರೂ.ಗೂ ಹೆಚ್ಚು ಮೊತ್ತದ ಹಗರಣ ನಡೆದಿರುವ ಸಾಧ್ಯತೆ ಇದೆ. ತನಿಖಾ ವರದಿ ಕೈಸೇರಿದ ಬಳಿಕವಷ್ಟೇ ನಿಖರ ಮಾಹಿತಿ ಲಭ್ಯವಾಗಲಿದೆ ಎಂದು ಸಚಿವರು ಸುದ್ದಿ ಗಾರರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು. 

ಉನ್ನತ ಶಿಕ್ಷಣ ಅಭಿವೃದ್ಧಿಗೆ ಕ್ರಿಯಾ ಯೋಜನೆ: ರಾಜ್ಯದಲ್ಲಿ ಉನ್ನತ ಶಿಕ್ಷಣಕ್ಕೆ ಪ್ರವೇಶ ಪಡೆಯುತ್ತಿರುವ ವಿದ್ಯಾರ್ಥಿಗಳ ಪ್ರಮಾಣ ಶೇ.27ರಷ್ಟಿದೆ.  ಉನ್ನತ ಶಿಕ್ಷಣದ ದಾಖಲಾತಿ ಪ್ರಮಾಣ ಹೆಚ್ಚಳ, ವಿದೇಶಿ ವಿದ್ಯಾರ್ಥಿಗಳಿಗೆ ಉತ್ತಮ ವಾತಾವರಣ ಕಲ್ಪಿಸಲು ಇನ್ನಷ್ಟು ಉನ್ನತ ಶಿಕ್ಷಣ ಸಂಸ್ಥೆಗಳನ್ನು ತೆರೆಯಲು ಮತ್ತು ಗುಣಮಟ್ಟದ ಶಿಕ್ಷಣ, ಮೂಲಸೌಕರ್ಯ ಅಭಿವೃದ್ಧಿಗೆ ಸರ್ಕಾರ ಕ್ರಿಯಾ ಯೋಜನೆ ಸಿದ್ಧಪಡಿಸಿದೆ. ಇದನ್ನು ಸಿಎಂ ಸಿದ್ದರಾಮಯ್ಯ ಅವರು ಬಜೆಟ್‌ನಲ್ಲಿ ಘೋಷಿಸಲಿದ್ದಾರೆ ಎಂದರು.

ಕ್ಯಾಂಪಸ್‌ ಭೂಮಿ ಒತ್ತುವರಿ: ಬೆಂಗಳೂರು ವಿವಿ ಸೇರಿದಂತೆ ರಾಜ್ಯದ ಬಹುತೇಕ ವಿವಿಗಳ ಕ್ಯಾಂಪಸ್‌ ಭೂಮಿ ಒತ್ತುವರಿಯಾಗಿದ್ದು, ಅದರ ತೆರವಿಗೆ ಕ್ರಮ ಕೈಗೊಳ್ಳಲಾಗುತ್ತಿದೆ. ಬೆಂ.ವಿವಿಯೊಂದರಲ್ಲೇ ನೂರು ಎಕರೆ ಭೂಮಿ ಒತ್ತುವರಿಯಾಗಿರುವ ಸಾಧ್ಯತೆ ಇದೆ. ಹಾಗಾಗಿ ಯಾವ್ಯಾವ ವಿವಿಗಳಲ್ಲಿ ಎಷ್ಟು ಭೂಮಿ ಒತ್ತುವರಿಯಾಗಿದೆ ಎಂದು ಪರಿ ಶೀಲಿಸಿ ಬಳಿಕ ತೆರವುಗೊಳಿಸಲಾಗುತ್ತದೆ ಎಂದು ಹೇಳಿದರು.

ಅತಿಥಿ ಉಪನ್ಯಾಸಕರಿಗೆ ವೇತನ: ಅತಿಥಿ ಉಪನ್ಯಾಸಕರಿಗೆ 8 ತಿಂಗಳಿಂದ ವೇತನ ನೀಡದಿರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿ, ವೇತನಕ್ಕೆ ಸಂಬಂಧಿಸಿದಂತೆ ಸರ್ಕಾರ ಹಣ ಬಿಡುಗಡೆ ಮಾಡಿದೆ. ಆದರೆ, ಕಂಪ್ಯೂಟರ್‌ ಸಮಸ್ಯೆಯಿಂದ ಉಪ ನ್ಯಾಸಕರಿಗೆ ವಿತರಿಸಲು ಸಾಧ್ಯವಾಗಿಲ್ಲ.  ಶೀಘ್ರ ವೇತನ ಅತಿಥಿ ಉಪನ್ಯಾಸಕರ ಕೈಸೇ ರಲಿದೆ ಎಂದು ಭರವಸೆ ನೀಡಿದರು.

ವಿಶ್ವ ಬ್ಯಾಂಕ್‌ನಿಂದ 3500 ಕೋಟಿ ರೂ.ಸಾಲ: ರಾಜ್ಯದಲ್ಲಿ ಶಿಕ್ಷಣ ಗುಣಮಟ್ಟ ಹೆಚ್ಚಳ ಹಾಗೂ ಶಾಲಾ ಕಾಲೇಜುಗಳಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ ವಿಶ್ವ ಬ್ಯಾಂಕ್‌ನಿಂದ ಸುಮಾರು 3500 ಕೋಟಿ ರೂ. ಸಾಲ ಪಡೆಯಲು ರಾಜ್ಯ ಸರ್ಕಾರ ಉದ್ದೇಶಿಸಿದೆ ಎಂದು ಸಚಿವ ಬಸವರಾಜ ರಾಯರೆಡ್ಡಿ ಹೇಳಿದ್ದಾರೆ.

ಟಾಪ್ ನ್ಯೂಸ್

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸತ್ತ ವ್ಯಕ್ತಿಯನ್ನು ಕರೆತಂದು ಸಾಲ ಪಡೆಯಲು ಮುಂದಾದ ಮಹಿಳೆ… ಕೊನೆಗೆ ಆದದ್ದೇ ಬೇರೆ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

10-bengaluru’

Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಸೆರೆ

9-bng

Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

Crime: ಅನೈತಿಕ ಸಂಬಂಧ; ವ್ಯಕ್ತಿ ಕೊಲೆಗೆ ಸುಪಾರಿ!

Crime: ಅನೈತಿಕ ಸಂಬಂಧ; ವ್ಯಕ್ತಿ ಕೊಲೆಗೆ ಸುಪಾರಿ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

Election; ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.