ಬುಧವಾರ ಮಧ್ಯರಾತ್ರಿವರೆಗೆ ಚಿಂತಿಸುತ್ತಲೇ ಇದ್ದ ಶಶಿಕಲಾ


Team Udayavani, Feb 17, 2017, 12:04 PM IST

sasikala.jpg

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ನಿಂದ ನಾಲ್ಕು ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿರುವ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಶಶಿಕಲಾ ನಟರಾಜನ್‌ ಬುಧವಾರ ಮಧ್ಯರಾತ್ರಿವರೆಗೂ ನಿದ್ದೆ ಮಾಡಿರಲಿಲ್ಲ. ಬುಧವಾರ ರಾತ್ರಿ ನೋಂದಣಿ ಕೊಠಡಿಯಲ್ಲೇ ಇದ್ದ ಶಶಿಕಲಾ ಏಕಾಂಗಿಯಾಗಿ ಗಾಢ ಚಿಂತೆಯಲ್ಲಿ ಮುಳುಗಿ ಮಧ್ಯರಾತ್ರಿವರೆಗೂ  ನಿದ್ರಿಸಿರಲಿಲ್ಲ. ಆ ನಂತರ ನಿದ್ರೆಗೆ ಜಾರಿದ್ದರು ಎಂದು ಜೈಲು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. 

ರಾತ್ರಿ ಊಟಕ್ಕೆ ನಿಗದಿಯಾದಂತೆ 2 ಚಪಾತಿ ಹಾಗೂ ಒಂದು ಕಪ್‌ ರೈಸ್‌ ಹಾಗೂ ಸಾಂಬಾರು, ಮೊಸರು ನೀಡಲಾಗಿತ್ತು. ರಾತ್ರಿ 11 ಗಂಟೆಯಾದರೂ ಶಶಿಕಲಾ ಊಟ ಮಾಡದೆ ಮೌನಕ್ಕೆ ಶರಣಾಗಿದ್ದರು. ಆಗ  ಇಳವರಸಿ ಬಲವಂತಪಡಿಸಿದ ನಂತರ ಮೊಸರನ್ನ ಸೇವಿಸಿದರು. ಗುರುವಾರ ಮುಂಜಾನೆ 5.30ರ ಸುಮಾರಿಗೆ ಎಚ್ಚರಗೊಂಡ ಶಶಿಕಲಾ, ಕಾರಾಗೃಹದ ಕೊಠಡಿಯಲ್ಲೇ ವಾಯುವಿಹಾರ ಮಾಡಿದರು.

6.30ಕ್ಕೆ  ಸಿಬ್ಬಂದಿ ಕಾಫಿ ನೀಡಿದ್ದು, ತಿಂಡಿಗೆ ಪೊಂಗಲ್‌ ನೀಡುವಂತೆ ಶಶಿಕಲಾ ಜೈಲು ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಅದರಂತೆ ಪೊಂಗಲ್‌ ನೀಡಲಾಯಿತು. ನ್ಯಾಯಾಲಯ ಅನುಮತಿ ನೀಡಿರುವಂತೆ ತಮಿಳು ಪತ್ರಿಕೆ ಮತ್ತು ಇಂಗ್ಲೀಷ್‌ ಪತ್ರಿಕೆಗಳನ್ನು ಓದಲು ಅವಕಾಶ ಕಲ್ಪಿಸಲಾಗಿತ್ತು. ಬುಧವಾರ ಕೈದಿ ಸಮವಸ್ತ್ರ ಧರಿಸದ ಶಶಿಕಲಾ ಗುರುವಾರ ಜೈಲು ಸಿಬ್ಬಂದಿ ನೀಡಿದ್ದ ಸಮವಸ್ತ್ರ ಧರಿಸಿದರು.

ಶಶಿಕಲಾಗೆ ಬಿಗಿಭದ್ರತೆ: ಜೈಲಿನಲ್ಲಿ ಎಐಎಡಿಎಂಕೆ ಪಕ್ಷದ ಪ್ರಧಾನ ಕಾರ್ಯದರ್ಶಿಯೂ ಆಗಿರುವ ಶಶಿಕಲಾ ಅವರಿಗೆ ಬಿಗಿ ಭದ್ರತೆ ಒದಗಿಸಲಾಗಿದೆ. ಜೈಲಿನ ಕೊಠಡಿ ಸುತ್ತಮುತ್ತ ಮಹಿಳಾ ಸಿಬ್ಬಂದಿ ನೇಮಕ ಮಾಡಲಾಗಿದೆ. ಸಾಮಾನ್ಯ ಕೈದಿಯಾಗಿದ್ದರೂ ಸುರಕ್ಷತೆ ದೃಷ್ಟಿಯಿಂದ ಭದ್ರತೆ ನೀಡಲಾಗಿದೆ. ಒಂದೊಮ್ಮೆ ಅಹಿತಕರ ಘಟನೆ ನಡೆದರೆ ಕರ್ನಾಟಕ ಜೈಲು ಸುರಕ್ಷಿತವಲ್ಲ ಎಂದು ಚೆನ್ನೈ ಕಾಧಿರಾಗೃಹಕ್ಕೆ ವರ್ಗಾಯಿಸುವಂತೆ ಶಶಿಕಲಾ ಕಾನೂನು ಮೊರೆಹೋಗಬಹುದು.

ಹೀಗಾಗಿ, ಸಾಕಷ್ಟು ಭದ್ರತೆ ನೀಡಲಾಗಿದೆ ಎಂದು ಹೇಳಲಾಗಿದೆ. ಮೂಲಗಳ ಪ್ರಕಾರ ಶಶಿಕಲಾ ಅವರು ತಮ್ಮ ವಕೀಲರ ಮೂಲಕ ಚೆನ್ನೈ ಕಾರಾಗೃಹಕ್ಕೆ ತಮ್ಮನ್ನು ವರ್ಗಾಯಿಸುವಂತೆ ಅರ್ಜಿ ಸಲ್ಲಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಅದಕ್ಕೆ ಕಾನೂನಿನಲ್ಲಿ ಅವಕಾಶವೂ ಇದೆ ಎನ್ನಲಾಗಿದೆ.

ಭೇಟಿಗೆ ನಕಾರ
ಜೈಲಿನಲ್ಲಿರುವ ಶಶಿಕಲಾ ಅವರನ್ನು ಭೇಟಿಯಾಗುವ ಸಲುವಾಗಿ ಗುರುವಾರ ಮಾಜಿ ಶಾಸಕ ಗೋಪಾಲಸ್ವಾಮಿ ಸೇರಿದಂತೆ ವಿವಿಧ ಸಂಘಟನೆಗಳ ಕಾರ್ಯಕರ್ತರು ತಮಿಳುನಾಡಿನಿಂದ ಆಗಮಿಸಿದ್ದರು. ಆದರೆ ಭದ್ರತೆ ಹಿನ್ನೆಲೆಯಲ್ಲಿ ಪ್ರವೇಶ ದ್ವಾರದ ಬಳಿಯೇ ಪೊಲೀಸರು ಅವರು ತಡೆದರು.  

ಶಶಿಕಲಾ ಅವರ ಭೇಟಿಗೆ ಬಂದಿದ್ದ ಕರ್ನಾಟಕದ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಪುಗಳೇಂದಿ, ಮಾಜಿ ಶಾಸಕ ಗೋಪಾಲಸ್ವಾಮಿ, ಕಾರ್ಮಿಕ ಘಟಕದ ಅಧ್ಯಕ್ಷ ಮಲಾರ್‌ ವೇಂದನ್‌, ಮಹೇಂದ್ರನ್‌ ಮತ್ತು ಆಸೈತಂಬಿ ಅವರಿಗೆ ಪೊಲೀಸರು ಅವಕಾಶ ನೀಡಲಿಲ್ಲ.

ಹೀಗಾಗಿ,  ಬೆಂಬಲಿಗರು ನಿರಾಸೆಯಿಂದ ಹಿಂದಿರುಗುವಂತಾಯಿತು.  ಗುರುವಾರ ಬೆಳಗ್ಗೆ ಶಶಿಕಲಾ ಅವರೊಂದಿಗೆ ಮುಂದಿನ ಕಾನೂನು ಪ್ರಕ್ರಿಯೆ ಬಗ್ಗೆ ಚರ್ಚಿಸಲು ಆಗಮಿಸಿದ್ದ ಅವರ ವಕೀಲ ಮೂರ್ತಿ ಅವರಿಗೂ ಜೈಲು ಅಧಿಕಾರಿಗಳು ಅವಕಾಶ ಕಲ್ಪಿಸಿಲ್ಲ ಎಂದು ಹೇಳಲಾಗಿದೆ.

ಟಾಪ್ ನ್ಯೂಸ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.