ನ್ಯಾ. ಅಬ್ದುಲ್ ನಜೀರ್ಗೆ ಬೀಳ್ಕೊಡುಗೆ
Team Udayavani, Feb 17, 2017, 12:22 PM IST
ಬೆಂಗಳೂರು: ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಯಾಗಿ ಪದನ್ನೋತಿ ಪಡೆದಿರುವ ನ್ಯಾ. ಎಸ್. ಅಬ್ದುಲ್ ನಜೀರ್ ಅವರಿಗೆ ಹೈಕೋರ್ಟ್ ಹಾಗೂ ಬೆಂಗಳೂರು ವಕೀಲರ ಸಂಘದಿಂದ ಗುರುವಾರ ಬೀಳ್ಕೊಡುಗೆ ಸಮಾರಂಭ ಆಯೋಜಿಸಲಾಗಿತ್ತು.
ಹೈಕೋರ್ಟ್ ಸಭಾಂಗಣದಲ್ಲಿ ಗುರುವಾರ ಮಧ್ಯಾಹ್ನ ಹೈಕೋರ್ಟ್ ಹಾಗೂ ಬೆಂಗಳೂರು ವಕೀಲರ ಸಂಘದ ವತಿಯಿಂದ ಏರ್ಪಡಿಸಿದ್ದ ಸರಳ ಸಮಾರಂಭದಲ್ಲಿ ನ್ಯಾ. ಅಬ್ದುಲ್ ನಜೀರ್ ಅವರಿಗೆ ಆತ್ಮೀಯವಾಗಿ ಬೀಳ್ಕೊಡಲಾಯಿತು.
ಹೈಕೋರ್ಟ್ ನ್ಯಾಯಮೂರ್ತಿಗಳ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಮುಖ್ಯ ನ್ಯಾಯಮೂರ್ತಿ ಎಸ್.ಕೆ. ಮುಖರ್ಜಿ ಮಾತನಾಡಿ, “ಸ್ನೇಹಜೀವಿ, ಮೃದು ಸ್ವಭಾವ ಮತ್ತು ಮಿತಭಾಷಿ ಆಗಿರುವ ಅಬ್ದುಲ್ ನಜೀರ್ ಅವರು ತಮ್ಮ 14 ವರ್ಷಗಳ ಸುದೀರ್ಘ ಸೇವಾವಧಿಯಲ್ಲಿ ಅನೇಕ ಉತ್ತಮ ತೀರ್ಪುಗಳನ್ನು ನೀಡಿದ್ದಾರೆ.
ಹೈಕೋರ್ಟ್ನ ಆಡಳಿತ ವಿಚಾರದಲ್ಲಿ ನನಗೆ ಸಂಪೂರ್ಣ ಸಹಕಾರ ನೀಡಿದ್ದಾರೆ,” ಎಂದು ಹೇಳಿದರು. ಬೆಂಗಳೂರು ವಕೀಲರ ಸಂಘ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಸಂಘದ ಅಧ್ಯಕ್ಷ ಎಚ್.ಸಿ. ಶಿವರಾಮು ಮಾತನಾಡಿ, “ಹೈಕೋರ್ಟ್ನಲ್ಲಿ ಉತ್ತಮ ನ್ಯಾಯಮೂರ್ತಿಗಳಾಗಿ ಸೇವೆ ಸಲ್ಲಿಸಿದ ಅಬ್ದುಲ್ ನಜೀರ್ ಅವರು ಸುಪ್ರೀಂಕೋರ್ಟ್ನಲ್ಲೂ ಉತ್ತಮ ಸೇವೆ ಸಲ್ಲಿಸಿ ನ್ಯಾಯಾಂಗ ಕ್ಷೇತ್ರ ಹಾಗೂ ಕರ್ನಾಟಕಕ್ಕೆ ಕೀರ್ತಿ ತರಲಿ,” ಎಂದು ಹಾರೈಸಿದರು.
ಬೀಳ್ಕೊàಡುಗೆ ಸ್ವೀಕರಿಸಿ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡ ನ್ಯಾ. ಅಬ್ದುಲ್ ನಜೀರ್, ತಮ್ಮ ಏಳಿಗೆಗೆ ಕಾರಣರಾದವರನ್ನು ಸ್ಮರಿಸಿಕೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
Narayan Gowda: ಹೆಚ್ಚಿನ ಮತಗಳಿಂದ ಎಚ್ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ