ಚಂದ್ರಶೇಖರ್ ಸ್ವಾಮೀಜಿ ವಿರುದ್ಧ ವಂಚನೆ ದೂರು
Team Udayavani, Feb 25, 2017, 12:00 PM IST
ಬೆಂಗಳೂರು: ಜಾಹೀರಾತು ಹಾಕಿಸುವುದಾಗಿ ಎರಡು ಕೋಟಿ ಹಣ ಪಡೆದು ವಂಚಿಸಿದ್ದ ಆರೋಪದ ಮೇಲೆ ಜ್ಯೋತಿಷಿ ಚಂದ್ರಶೇಖರ್ ಭಟ್ ಅಲಿಯಾಸ್ ಚಂದ್ರಶೇಖರ್ ಸ್ವಾಮೀಜಿ ಸೇರಿ ಮೂವರ ವಿರುದ್ಧ ಆರ್.ಟಿ.ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಕೋರ್ಟ್ ಸೂಚನೆ ಮೇರೆಗೆ ಚಂದ್ರಶೇಖರ್ ಭಟ್, ಸ್ವಾಮೀಜಿ ಪತ್ನಿ ರಜನಿ.ಸಿ ಹಾಗೂ ಗಿರೀಶ್ ಕಾಮತ್ ವಿರುದ್ಧ ಎಫ್ಐಆರ್ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ದೂರುದಾರ ಉದ್ಯಮಿ ಅಶ್ರಫ್ ಅಲಿ ಮತ್ತು ಚಂದ್ರಶೇಖರ್ ಸ್ವಾಮೀಜಿ ಪರಿಚಿತರಾಗಿದ್ದು, ನಗರದ ಅರಮನೆ ರಸ್ತೆಯಲ್ಲಿನ ಅಕ್ಕ-ಪಕ್ಕದ ರಸ್ತೆಗಳಲ್ಲಿ ಬ್ಯಾನರ್, ಹೋರ್ಡಿಂಗ್ಸ್ ಹಾಕಿಸುವುದಾಗಿ 2011ರಲ್ಲಿ ಉದ್ಯಮಿಯಿಂದ ಸ್ವಾಮೀಜಿ 2 ಕೋಟಿ ರೂ. ಪಡೆದಿದ್ದರು.
ಆದರೆ, ಯಾವುದೇ ಬ್ಯಾನರ್ ಹಾಗೂ ಹೋರ್ಡಿಂಗ್ಸ್ ಹಾಕಿಸಿರಲಿಲ್ಲ. ಹೀಗಾಗಿ, ತಮ್ಮ ಹಣ ಹಿಂದಿರುಗಿಸುವಂತೆ ಉದ್ಯಮಿ ಸ್ವಾಮೀಜಿಯನ್ನು ಕೇಳಿಧಿದ್ದರು. ಹಣ ವಾಪಸ್ ನೀಡದ ಹಿನ್ನೆಲೆಯಲ್ಲಿ ಉದ್ಯಮಿ ಸ್ಥಳೀಯ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು. ಇದೀಗ ನ್ಯಾಯಾಲಯದ ಸೂಚನೆ ಮೇರೆಗೆ ಆರೋಪಿಗಳ ವಿರುದ್ಧ ಎಫ್ಐಆರ್ ದಾಖಲಿಸಿಕೊಳ್ಳಲಾಗಿದೆ. ತನಿಖೆ ನಡೆಸಿ ಆರೋಪಿಗಳ ವಿರುದ್ಧ ಮುಂದಿನ ಕ್ರಮಕೈಗೊಳ್ಳಲಾಗುವುದು ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Ferozepur; ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು
Crime: ಮೊಬೈಲ್ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ
Koppala; ದಲಿತರ ಮನೆಯಲ್ಲಿ ಸಾಮಾನ್ಯರಂತೆ ಕುಳಿತು ಉಪಹಾರ ಸೇವಿಸಿದ ಯದುವೀರ ಒಡೆಯರ್
Miami; ವಿಮಾನ ಪ್ರಯಾಣಿಕನ ಪ್ಯಾಂಟ್ ನಲ್ಲಿ ಹಾವುಗಳು! ಮಿಯಾಮಿ ಏರ್ಪೋರ್ಟ್ ನಲ್ಲಿ ಆಗಿದ್ದೇನು?
Dandeli: ನಾಲೆಗೆಸೆದ ಮಗುವಿನ ಮೃತದೇಹ ಪತ್ತೆ