ಸಂಶೋಧಕರಿಗೆ ಆಕರ ಗ್ರಂಥಗಳೇ ಅಲಭ್ಯ
Team Udayavani, Feb 25, 2017, 12:13 PM IST
ಬೆಂಗಳೂರು: ಅನುವಾದ ಕೃತಿಗಳು ವಿಷಯಾಂತರವಾಗದೆ ವೈವಿಧ್ಯ ಹಾಗೂ ಸಾಂಸ್ಕೃತಿಕ ಪ್ರಸ್ತುತತೆ ಹೊಂದಿರಬೇಕು ಎಂದು ವಿಮರ್ಶಕ ಡಾ.ರಾಜೇಂದ್ರ ಚೆನ್ನಿ ಅಭಿಪ್ರಾಯಪಟ್ಟರು. ಕುವೆಂಪು ಭಾಷಾ ಭಾರತಿ ಪ್ರಾಧಿಕಾರ ಹೊರತಂದಿರುವ 211 ಕೃತಿಗಳನ್ನು ನಗರದ ನಯನ ಸಭಾಂಗಣದಲ್ಲಿ ಶುಕ್ರವಾರ ನಡೆದ ಕಾರ್ಯಕ್ರಮದಲ್ಲಿ ಲೋಕಾರ್ಪಣೆಗೊಳಿಸಿ ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ ಸಂಶೋಧಕರಿಗೆ ಆಕರ ಗ್ರಂಥಗಳೇ ಸಿಗದಂತಾಗಿರುವುದು ಆತಂಕ ಮೂಡಿಸಿದೆ ಎಂದರು.
ಅನ್ಯ ರಾಷ್ಟ್ರ, ಸಮುದಾಯ ಹಾಗೂ ಜಗತ್ತಿನ ಬಗ್ಗೆ ತಿಳಿಸುವ ಅನ್ಯ ಭಾಷೆಯ ಅನುವಾದ ಕೃತಿಗಳು ವೈಜ್ಞಾನಿಕವಾಗಿ ಕ್ರಿಯಾಶೀಲತೆಯಿಂದ ಕೂಡಿರಬೇಕೆ ಹೊರತು ಯಥಾವತ್ತಾಗಿ ಭಟ್ಟಿ ಇಳಿಸಿದಂತಿರಬಾರದು. ಭಾರತೀಯ ಆಧುನಿಕತೆ ಏನು ಎಂಬುದನ್ನು ಈವರೆಗೆ ಸ್ಪಷ್ಟವಾಗಿ ತಿಳಿಯಲು ಸಾಧ್ಯವಾಗಿಲ್ಲ. ಈ ನಡುವೆ ದಲಿತ ಮತ್ತು ಬಂಡಾಯದ ನಂತರವೂ ಕುವೆಂಪು ಭಿನ್ನ ರೀತಿಯಲ್ಲಿ ಆಧುನಿಕತೆಯನ್ನು ಕಟ್ಟಿಕೊಟ್ಟಿದ್ದಾರೆ ಎಂದು ಹೇಳಿದರು.
ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಅಧ್ಯಕ್ಷ ಡಾ. ಕೆ.ವಿ. ನಾರಾಯಣ, ಸಾಮಾನ್ಯ ಓದುಗರನ್ನೇ ಪ್ರಧಾನ ಗುರಿಯಾಗಿಸಿಕೊಂಡು ಹೊಸ ಅನುವಾದ ಕೃತಿಗಳನ್ನು ಪ್ರಕಟಿಸಲಾಗಿದೆ. ಮುಂದಿನ 25 ವರ್ಷಗಳ ಕಾಲ ಸಂಶೋಧಕರು ಸಹ ಇವುಗಳನ್ನು ಮಾದರಿಯಾಗಿ ಉಲ್ಲೇಖೀಸಬಹುದಾಗಿದೆ ಎಂದರು. ಇದೇ ಸಂದರ್ಭದಲ್ಲಿ ಪ್ರಾಧಿಕಾರದ ವೆಬ್ಸೈಟ್ಗೆ ಚಾಲನೆ ನೀಡಲಾಯಿತು. ಪ್ರಾಧಿಕಾರದ ಸದಸ್ಯ ಡಾ. ನಟರಾಜ ಹುಳಿಯಾರ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ