ಭಾರಿ ಪ್ರಮಾಣದ ಆಸ್ತಿ ಜಿಲ್ಲಾಡಳಿತದ ತೆಕ್ಕೆಗೆ


Team Udayavani, Mar 19, 2017, 11:46 AM IST

jaminu.jpg

ಬೆಂಗಳೂರು: ನಗರ ಐದು ತಾಲೂಕುಗಳಲ್ಲಿ ಏಕಕಾಲದಲ್ಲಿ ಸರ್ಕಾರಿ ಭೂಮಿ ಒತ್ತುವರಿ ತೆರವು ಕಾರ್ಯಾಚರಣೆ ನಡೆಸಿದ ಜಿಲ್ಲಾಡಳಿತದ ಅಧಿಕಾರಿಗಳು 835.50 ಕೋಟಿ ಮೌಲ್ಯದ 38.08 ಎಕರೆ ಜಮೀನು ವಶಕ್ಕೆ ಪಡೆದಿದ್ದಾರೆ. 

ಬೆಂಗಳೂರು ಪೂರ್ವ ತಾಲೂಕಿನ ಕೆ.ಆರ್‌.ಪುರ ಹೋಬಳಿಯ ದೇವಸಂದ್ರದ 1 ಎಕರೆಯನ್ನು ವಶಪಡಿಸಿ ಕೊಳ್ಳಲಾಯಿತು. ಬೆಂಗಳೂರು ದಕ್ಷಿಣ  ತಾಲೂಕಿನ ಬೇಗೂರು ಹೋಬಳಿಯ ಹುಳಿಮಾವು ಗ್ರಾಮದ ಸರ್ವೆ ಸಂಖ್ಯೆ 1 ರಲ್ಲಿ 4.31 ಎಕರೆ ಸರ್ಕಾರಿ ಜಾಗವನ್ನು  ವೇಣುಗೋಪಾಲ್‌ ಒತ್ತುವರಿ ಮಾಡಿಕೊಂಡು  ಮನೆಗಳನ್ನು ನಿರ್ಮಿಸಿಕೊಂಡಿದ್ದರು. ಒತ್ತುವರಿ ಜಾಗದಲ್ಲಿ ದೇವಸ್ಥಾನ, ಮೂರು ವಾಣಿಜ್ಯ ಸಂಕೀರ್ಣಗಳು ಮತ್ತು ಅವುಗಳಲ್ಲಿ 32 ಮಳಿಗೆಳನ್ನು ನಿರ್ಮಿಸಲಾಗಿತ್ತು.  

ಒತ್ತುವರಿ ತೆರವಿಗೆ ಮುಂದಾದ ಅಧಿಕಾರಿಗಳ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದರು. ಇದರಿಂದ ಸ್ಥಳದಲ್ಲಿ ಬಿಗುವಿನ ವಾತಾವರಣ ಸೃಷ್ಟಿಯಾಗಿತ್ತು. ನಂತರ ಪೊಲೀಸರು ಒತ್ತುವರಿ ತೆರವು ಕಾರ್ಯಾಚರಣೆ ನಡೆಯಲು ಅನುವು ಮಾಡಿಕೊಟ್ಟರು. ಆನಂತರ ಸ್ಥಳಕ್ಕೆ ಆಗಮಿಸಿದ ಜಿಲ್ಲಾಧಿಕಾರಿ ವಿ.ಶಂಕರ್‌ ಜನರನ್ನು ಸಮಾಧಾನ ಪಡೆಸಿ ದೇವಾಲಯಗಳನ್ನು ಮುಜಾರಾಯಿ ಇಲಾಖೆ ವಶಕ್ಕೆ ನೀಡಿ, ಸ್ಥಳೀಯರನ್ನು ಒಳಗೊಂಡ ದೇವಾಲಯ ಆಡಳಿತ ಮಂಡಳಿ ನೇಮಿಸುವ ಭರವಸೆ ನೀಡಿದರು. 

ಉತ್ತರ ತಾಲೂಕಿನ ದಾಸನಪುರ ಹೋಬಳಿಯ ವಡ್ಡರಹಳ್ಳಿ ಗ್ರಾಮದಲ್ಲಿ 2 ಎಕರೆಯನ್ನು ತಿಮ್ಮಯ್ಯ ಎಂಬುವವರು ಹಾಗೂ ಲಕ್ಷಿಪುರದ ಸರ್ವೆ 4.26 ಎಕರೆ ಜಾಗವನ್ನು ರಾಮಣ್ಣ ಎಂಬುವವರು ಒತ್ತುವರಿ ಮಾಡಿಕೊಂಡಿದ್ದರು. ಒತ್ತುವರಿದಾರರಿಗೆ ನೋಟಿಸ್‌ ನೀಡಿದ ಅಧಿಕಾರಿಗಳು ಜಾಗವನ್ನು ವಶಕ್ಕೆ ಪಡೆದರು.  ಬೆಂಗಳೂರು ಉತ್ತರ (ಅಪರ) ತಾಲೂಕಿನ ಯಲಹಂಕ ತಾಲೂಕಿನ ದೊಡ್ಡ ಬೊಮ್ಮಸಂದ್ರದ 20 ಗುಂಟೆ ಹಾಗೂ ಜಾಲ ಹೋಬಳಿಯ ಹುತ್ತನಹಳ್ಳಿ ಗ್ರಾಮದಲ್ಲಿ  20.15 ಎಕರೆ ಜಾಗವನ್ನು ಒತ್ತುವರಿ ಮಾಡಿಕೊಂಡವರಿಗೆ ನೋಟಿಸ್‌ ನೀಡಿ ಜಿಲ್ಲಾಡಳಿತದ ವಶಕ್ಕೆ ಪಡೆಯಲಾಯಿತು. 

ಸರ್ಜಾಪುರ ಹೋಬಳಿಯ ಕಗ್ಗಲೀಪುರ ಗ್ರಾಮದ 2.11 ಎಕರೆ ಮತ್ತು ಜಿಗಣಿಯ  13 ಗುಂಟೆ, ಹುಲ್ಲಹಳ್ಳಿ ಗ್ರಾಮದಲ್ಲಿ 10 ಗುಂಟೆ ಮತ್ತು ಅತ್ತಿಬೆಲೆ ಹೋಬಳಿ, ಅರೇನೂರು ಗ್ರಾಮದಲ್ಲಿ  29 ಗುಂಟೆ, ಸಮಂದೂರಿನಲ್ಲಿ  22 ಗುಂಟೆ ಜಾಗವನ್ನು ಒತ್ತುವರಿ ಮಾಡಿಕೊಂಡಿದ್ದವರಿಗೆ ನೋಟಿಸ್‌ ನೀಡಿ ತಹಸೀಲ್ದಾರ್‌ ಅವರು ಜಾಗವನ್ನು ವಶಕ್ಕೆ ಪಡೆದರು. 

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.