ಕಸಾಯಿಖಾನೆಯಲ್ಲಿ ಅಕ್ರಮ
Team Udayavani, Mar 24, 2017, 11:35 AM IST
ಬೆಂಗಳೂರು: ಹಾರೋಹಳ್ಳಿಯಲ್ಲಿ ಕಾಸಾಯಿಖಾನೆ ನಿರ್ಮಿಸುವ ಒಪ್ಪಂದವನ್ನು ಬಿಬಿಎಂಪಿ ಕಾನೂನು ಬಾಹಿರವಾಗಿ ಖಾಸಗಿ ಸಂಸ್ಥೆಯೊಂದಿಗೆ ಮಾಡಿಕೊಂಡಿದೆ ಎಂದು ಪಾಲಿಕೆ ಪ್ರತಿಪಕ್ಷ ನಾಯಕ ಪದ್ಮನಾಭರೆಡ್ಡಿ ಆರೋಪಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಕಾಸಾಯಿಖಾನೆ ನಿರ್ಮಾಣಕ್ಕೆ ಪಾಲಿಕೆ ಟೆಂಡರ್ ಆಹ್ವಾನಿಸಿ ಚೆನ್ನೈ ಅಬಾಟಿಯರ್ ಮತ್ತು ಸಗ್ ಇನಾಸ್ಟ್ರಕ್ಚರ್ ಕಂಪನಿಗೆ ವಹಿಸಿತ್ತು. ಆನಂತರದಲ್ಲಿ ಸಗ್ ಸಂಸ್ಥೆ ಪಾಲಿದಾರಿಕೆಯಿಂದ ಹೊರನಡೆದಿತ್ತು. ಈ ವೇಳೆ ಅಬಾಟಿಯರ್ ಸಂಸ್ಥೆ ಕ್ಯಾಪ್ರಿಮೀಟ್ ಎಂಬ ಹೆಸರಿ ನೊಂದಿಗೆ ನಿರ್ವಹಣೆ ಗುತ್ತಿಗೆಯನ್ನು ಪಡೆದಿದ್ದು, ಪಾಲಿಕೆಯ ಅಧಿಕಾರಿಗಳು ಕಾನೂನು ಬಾಹಿರವಾಗಿ ಅವರಿಗೆ ಐದು ಕೋಟಿ ರೂ. ಬಿಡುಗಡೆ ಮಾಡಿದ್ದಾರೆ,” ಎಂದು ದೂರಿದರು.
ಕಸಾಯಿಖಾನೆ ನಿರ್ವಹಣೆಗೆ 28.40 ಕೋಟಿ ರೂ.ಗಳನ್ನು ನೀಡಬೇಕೆಂದು ಕೋರಿದ್ದ ಕಂಪನಿ ನಂತರದಲ್ಲಿ ನಡೆದ ಸಂಧಾನ ಪ್ರಕ್ರಿಯೆಯಲ್ಲಿ ವಾರ್ಷಿಕ 14.25 ಕೋಟಿ ರೂ.ಗಳಿಗೆ ಒಪ್ಪಿತ್ತು. ಆದರೆ, 19.80 ಕೋಟಿ ರೂ. ನೀಡಿರುವುದು ಅನುಮಾನಗಳಿಗೆ ಕಾರಣವಾಗಿದೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
Arrested: 17 ಕೇಸ್ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ
MUST WATCH
ಹೊಸ ಸೇರ್ಪಡೆ
MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ
Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ
Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ