ಬಿಬಿಎಂಪಿ ಬಜೆಟ್ ಇಂದು ಮಂಡನೆ
Team Udayavani, Feb 28, 2018, 11:53 AM IST
ಬೆಂಗಳೂರು: ಬೆಂಗಳೂರು ಮಹಾನಗರ ಪಾಲಿಕೆಯ ಚುಕ್ಕಾಣಿ ಹಿಡಿದಿರುವ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿಯ ಆಡಳಿತದ ಮೂರನೇ ಬಜೆಟ್ ಬುಧವಾರ ಮಂಡನೆಯಾಗಲಿದ್ದು, ಮುಂಬರುವ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಈ ಬಾರಿಯ ಬಜೆಟ್ನಲ್ಲಿ ನಗರದ ಬಡ ಹಾಗೂ ಮಧ್ಯಮ ವರ್ಗದ ಹಿತಕಾಯುವ ಸಾಧ್ಯತೆ ಇದೆ.
ಜೆಡಿಎಸ್ ಸದಸ್ಯ ಹಾಗೂ ತೆರಿಗೆ ಹಾಗೂ ಆರ್ಥಿಕ ಸ್ಥಾಯಿ ಸಮಿತಿ ಅಧ್ಯಕ್ಷ ಮಹದೇವ್, 2018 – 19ನೇ ಸಾಲಿಗೆ 9300 ಕೋಟಿ ರೂ.ಗಳ ಗಾತ್ರದ ಬಜೆಟ್ ಮಂಡಿಸಲು ಸಜ್ಜಾಗಿದ್ದು, ಹಲವು ಪ್ರಮುಖ ಯೋಜನೆಗಳು ಘೋಷಣೆಯಾಗುವ ನಿರೀಕ್ಷೆಯಿದೆ.
ವಿಧಾನಸಭಾ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡೇ ಸಿದ್ಧಗೊಂಡಿರುವ ಬಜೆಟ್ನಲ್ಲಿ ಪ್ರಮುಖವಾಗಿ ಹಿರಿಯ ನಾಗರಿಕರಿಗೆ ಮಧ್ಯಾಹ್ನದ ಉಚಿತ ಬಿಸಿಯೂಟ, ನಗರದ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ ಬಡವರಿಗೆ ಉಚಿತ ಡಯಾಲಿಸಿಸ್ ಸೇವೆ ಯೋಜನೆ ಘೋಷಣೆಯಾಗುವ ಸಾಧ್ಯತೆಯಿದೆ. ಜೊತೆಗೆ ಪರಿಸರ, ಕೆರೆ, ಉದ್ಯಾನಗಳ ಸಂರಕ್ಷಣೆಗೆ ಹೆಚ್ಚು ಆದ್ಯತೆ, ನೀಡಲಾಗಿದ್ದು ಈ ಮೂರು ಕ್ಷೇತ್ರಗಳಿಗೆ ಬಹುಪಾಲು ಅನುದಾನ ಮೀಸಲಿಡಲು ಚಿಂತನೆ ನಡೆಸಲಾಗಿದೆ ಎಂದು ನಿರೀಕ್ಷಿಸಲಾಗಿದೆ.
ಅಲ್ಲದೆ ನಗರದಲ್ಲಿ ಮಾಲಿನ್ಯ ಪ್ರಮಾಣ ಕಡಿಮೆ ಮಾಡಲು ಹೆಚ್ಚು ಆದ್ಯತೆ ನೀಡುವ ಸಲುವಾಗಿ ಎಲೆಕ್ಟ್ರಿಕ್ ಬೈಕ್ ಹಾಗೂ ಕಾರುಗಳ ಪರಿಚಯ. ಮಾಲಿನ್ಯ ತಪಾಸಣಾ ಮಾಪಕ ಕೇಂದ್ರಗಳ ಸ್ಥಾಪನೆ, ಎರಡು ವಾರಗಳಿಗೊಮ್ಮೆ ಬೈಕ್ ಆ್ಯಂಬುಲೆನ್ಸ್ ಸೇವೆ, ತುರ್ತು ಸಂದರ್ಭಗಳಲ್ಲಿ ಏರ್ ಆ್ಯಂಬುಲೆನ್ಸ್ಗಳಿಗೆ 8 ವಲಯಗಳಲ್ಲಿ ಹೆಲಿಪ್ಯಾಡ್ಗಳ ನಿರ್ಮಾಣ, ಉಚಿತ ಬೈಸಿಕಲ್ ಸೇವೆ, ಮಳೆ ನೀರು ಕೊಯ್ಲು ಯೋಜನೆಗೆ 100 ಕೋಟಿ ರೂ. ಮೀಸಲು. ಒಂಟಿ ಮನೆಗಳ ನಿರ್ಮಾಣಕ್ಕಿದ್ದ ಅನುದಾನದ ಮೊತ್ತವನ್ನು 4ರಿಂದ 5 ಲಕ್ಷಕ್ಕೆ ಏರಿಕೆಸುವ ಕುರಿತು ಆಯವ್ಯಯದಲ್ಲಿ ಸೂಚಿಸುವ ಸಂಭವವಿದೆ.
ಪಾಲಿಕೆಯ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಸಿದ್ದಯ್ಯ ಮತ್ತು ದಾಸಪ್ಪ ಆಸ್ಪತ್ರೆಗಳಲ್ಲಿ ಉಚಿತ ಐಸಿಯು ಸೇವೆ ಆರಂಭ. ತುರ್ತು ವಾಹನಗಳ ಖರೀದಿ, ಬೈಕ್ ರೇಸ್ ಪ್ರಿಯರಿಗೆ ಅನುಕೂಲ ವಾಗುವಂತೆ ಬೈಕ್ ಟ್ರ್ಯಾಕ್ಗಳ ನಿರ್ಮಾಣ ಘೋಷಣೆಯಾಗಲಿದೆ. ಅಷ್ಟೇ ಅಲ್ಲ ಪಾಲಿಕೆ ನೌಕರರ ವೈದ್ಯಕೀಯ ಭತ್ಯೆ ಹೆಚ್ಚಳ, ಪತ್ರಕರ್ತರಿಗೆ ವೈದ್ಯಕೀಯ ವಿಮೆ. ಬಿಬಿಎಂಪಿ ಆಸ್ಪತ್ರೆಗಳಲ್ಲಿ ಜನಿಸುವ ಹೆಣ್ಣು ಮಕ್ಕಳಿಗೆ 25 ಸಾವಿರ ರೂ. ಮೊತ್ತದ ಭಾಗ್ಯಲಕ್ಷ್ಮೀ ಬಾಂಡ್ ನೀಡುವುದು.
ಬಿಬಿಎಂಪಿ ಶಾಲೆಗಳಲ್ಲಿ ಟೆಲಿ ಎಜುಕೇಶನ್ ಇಂಗ್ಲಿಷ್ ಕಲಿಕಾ ತರಗತಿಗಳನ್ನು ಆರಂಭಿಸುವ ಯೋಜನೆಗಳು ಘೋಷಿಸುವ ಸಾಧ್ಯತೆಯಿದೆ. ಇದಲ್ಲದೆ ಮಹಿಳಾ ಕಾರ್ಪೋರೇಟರ್ಗಳ ವಾರ್ಡ್ಗಳಿಗೆ ವಿಶೇಷ ಅನುದಾನ, ಮತ್ತಷ್ಟು ರಸ್ತೆಗಳಿಗೆ ವೈಟ್ ಟಾಪಿಂಗ್ ಭಾಗ್ಯ, ಟೋಟಲ್ ಸ್ಟೇಷನ್ಗಳ ಅಭಿವೃದ್ಧಿಗೆ ಒತ್ತು, ಹೊಸ ಜಾಹೀರಾತು ಹಾಗೂ ಮಾರುಕಟ್ಟೆ ನೀತಿ ಜಾರಿಗೊಳಿಸಲು ತೀರ್ಮಾನಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಸರ್ಕಾರ ನೀಡಿರುವ ಅನುದಾನ ಹಾಗೂ ಪಾಲಿಕೆ ಆರ್ಥಿಕ ಸಂಪನ್ಮೂಲಗಳಿಗೆ ಅನುಗುಣವಾಗಿ ಜನಪರ ವಾಸ್ತವಿಕ ಬಜೆಟ್ ಮಂಡನೆಯಾಗಲಿದೆ.
-ಶಿವರಾಜು, ಆಡಳಿತ ಪಕ್ಷದ ನಾಯಕ
ಪರಿಸರ ಸಂರಕ್ಷಣೆ, ಬಡ ಮಧ್ಯಮ ವರ್ಗದ ಜನರ ಅಭಿವೃದ್ಧಿಗಳಿಗೆ ಜನಪ್ರಿಯ ಕಾರ್ಯಕ್ರಮಗಳನ್ನು ಒಳಗೊಂಡ ನಗರದ ಸರ್ವಾಂಗೀಣ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ
-ಸಂಪತ್ ರಾಜ್, ಮೇಯರ್
ನಗರದ ಸಮಗ್ರ ಅಭಿವೃದ್ಧಿ, ಪರಿಸರ ಸಂರಕ್ಷಣೆಗೆ ಹೆಚ್ಚು ಒತ್ತು ನೀಡಲಾಗಿದ್ದು, ಇದೊಂದು ಜನಪರ ವಾಸ್ತವಿಕ ಬಜೆಟ್ ಆಗಲಿದೆ’
-ಮಹದೇವ್, ಅಧ್ಯಕ್ಷ, ತೆರಿಗೆ ಹಾಗೂ ಆರ್ಥಿಕ ಸ್ಥಾಯಿ ಸಮಿತಿ
* ವೆಂ.ಸುನೀಲ್ಕುಮಾರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
Arrested: 17 ಕೇಸ್ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ
MUST WATCH
ಹೊಸ ಸೇರ್ಪಡೆ
ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್
ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ