ಬ್ರಾಂಡ್‌ ಬೆಂಗಳೂರಿಗೆ ಆದ್ಯತೆ


Team Udayavani, Mar 26, 2017, 12:07 PM IST

brand-bangalore].jpg

ಬೆಂಗಳೂರು: ಸಿಲಿಕಾನ್‌ ವ್ಯಾಲಿ ಖ್ಯಾತಿಯ ಮಹಾನಗರವನ್ನು “ಬ್ರಾಂಡ್‌ ಬೆಂಗಳೂರು’ ಆಗಿ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಈ ಬಾರಿಯ ಬಜೆಟ್‌ನಲ್ಲಿ ಸಾಕಷ್ಟು ಕಾರ್ಯಕ್ರಮಗಳನ್ನು ಪ್ರಕಟಿಸಲಾಗಿದೆ.

ಇ-ಆಡಳಿತಕ್ಕೆ ಹೆಚ್ಚಿನ ಒತ್ತು. ಕಡತ ವಿಲೇವಾರಿ ಬಗ್ಗೆ ಸಾರ್ವಜನಿಕರಿಗೆ ಇ- ಮೇಲ್‌ ಮತ್ತು ಎಸ್‌ಎಂಎಸ್‌ ಮೂಲಕ ಪಾರದರ್ಶಕ­ವಾಗಿ ಮಾಹಿತಿ, ಕಡತ ನಿರ್ವಹಣೆಗೆ ತಂತ್ರಾಂಶ ಅಭಿವೃದ್ಧಿ ಹಾಗೂ ಕಂದಾಯ ಇಲಾಖೆಯ ಕ್ಷೇತ್ರಾಧಿಕಾರಿಗಳಿಗೆ ಟ್ಯಾಬ್‌ ಒದಗಿಸಿ ಸ್ಮಾರ್ಟ್‌ ಸಿಟಿ ಇನಿಷಿಯೇಟಿವ್‌ ಮೊಬೈಲ್‌ ಅಪ್ಲಿಕೇಷನ್‌ ಅನುಷ್ಠಾನಗೊಳಿಸುವ ಕ್ರಮಗಳು ಇದರಲ್ಲಿ ಸೇರಿವೆ.

ಲೆಕ್ಕಪತ್ರ ನಿರ್ವಹಣೆ ಹಾಗೂ ಆರ್ಥಿಕ ವ್ಯವಸ್ಥೆಗೆ ತಂತ್ರಾಂಶಗಳನ್ನು ವಿನ್ಯಾಸಗೊಳಿಸಿ ಅಳವಡಿಸಲು ಕ್ರಮ. ಖಾತಾ ನೋಂದಣಿ ಹಾಗೂ ಸಮಸ್ಯೆಗಳನ್ನು ಗಣಕೀಕೃತಗೊಳಿಸಲುವ ಪದ್ಧತಿ ಅನುಷ್ಠಾನಕ್ಕೆ ಒತ್ತು ನೀಡಲಾಗಿದೆ. ಇಸ್ರೋ ಜತೆ ಒಡಂಬಡಿಕೆ ಮಾಡಿಕೊಂಡು ಇ-ಆಡಳಿತ ಪದ್ಧತಿ ಅನುಷ್ಠಾನಗೊಳಿಸಲು ಪಾಲಿಕೆಯಲ್ಲಿ ಹಾಲಿ ಅಸ್ತಿತ್ವದಲ್ಲಿರುವ ಕಡತ ಹಾಗೂ ದಾಖಲೆಗಳನ್ನು ಸ್ಕ್ಯಾನಿಂಗ್‌ ಹಾಗೂ ಗಣಕೀಕರಣ ಗೊಳಿಸುವುದು.

ಮೊದಲ ಬಾರಿಗೆ ಪಾಲಿಕೆ ನೌಕರರು ಮತ್ತು ಸಿಬ್ಬಂದಿಗಳ ಸೇವಾ ಪುಸ್ತಕ, ಜಾಹೀರಾತು, ಕಂದಾಯ ಹಾಗೂ ಇತರೆ ವಿಭಾಗಗಳ ಕಡತಗಳ ಸ್ಕ್ಯಾನ್‌ ಹಾಗೂ ಗಣಕೀಕರಣಗೊಳಿಸಲು ಕ್ರಮಕೈಗೊಳ್ಳುವ ಬಗ್ಗೆ ಬಜೆಟ್‌ನಲ್ಲಿ ಪ್ರಸ್ತಾಪಿಸಲಾಗಿದೆ.

ಜನರಿಗೆ ನೀಡಿದ ಭರವಸೆಯಂತೆ ಉತ್ತಮ, ಬಜೆಟ್‌ ಕೊಟ್ಟಿದ್ದೇವೆ. ಪಾಲಿಕೆಯ ಆದಾಯ ಮೂಲಗಳು ಹಾಗೂ ಕೇಂದ್ರ, ರಾಜ್ಯ ಸರ್ಕಾರಗಳ ಅನುದಾನಗಳನ್ನು ಗಣನೆಗೆ ತೆಗೆದುಕೊಂಡು ವಾಸ್ತವಿಕ ಬಜೆಟ್‌ ಮಂಡಿಸಿದ್ದೇವೆ. 
– ಜಿ.ಪದ್ಮಾವತಿ ಮೇಯರ್‌ 

ರಾಜ್ಯ ಸರ್ಕಾರದ ಬಜೆಟ್‌ನಲ್ಲಿ ಹೇಳಲಾಗಿ ರುವ ಅಂಶಗಳನ್ನು ಮತ್ತೆ ಓದಲಾಗಿದೆ. ಬಜೆಟ್‌ನಿಂದಾಗಿ ಜನತೆಗೆ ನಿರಾಸೆಯಾಗಿದ್ದು, ರಸ್ತೆ ಅಗೆಯುವುದಕ್ಕೆ ಲಕ್ಷಾಂತರ ದಂಡ ವಿಧಿಸುವುದು ಅವೈಜ್ಞಾನಿಕವಾಗಿದೆ. 
– ರವಿಸುಬ್ರಹ್ಮಣ್ಯ, ಬಿಜೆಪಿ ಶಾಸಕ

ಕಳೆದ ಬಜೆಟ್‌ನಲ್ಲಿ ಬಿಬಿಎಂಪಿಗೆ 7,300 ಕೋಟಿ ಅನುದಾನ ಘೋಷಿಸಿದ್ದ ರಾಜ್ಯ ಸರ್ಕಾರ, ಕೊಟ್ಟಿದ್ದು ಮಾತ್ರ 1,300 ಕೋಟಿ ರೂ. ಉಳಿದ 5,973 ಕೋಟಿ ರೂ. ಏನಾಯ್ತು ಎಂಬ ಬಗ್ಗೆ ಪ್ರಸ್ತುತ ಬಜೆಟ್‌ನಲ್ಲಿ ಪ್ರಸ್ತಾಪಿಸಿಲ್ಲ
– ಪದ್ಮನಾಭರೆಡ್ಡಿ ಪ್ರತಿಪಕ್ಷದ ನಾಯಕ 

ಮಹಿಳೆಯರು ಪ್ರತಿನಿಧಿಸುವ ವಾರ್ಡ್‌ ಗಳಿಗೆ ಹೆಚ್ಚು ಅನುದಾನ ನೀಡಲಾಗುತ್ತಿದೆ ಎಂಬುದು ಕಣ್ಣೊರೆಸುವ ತಂತ್ರವಾಗಿದೆ. ಕಳೆದ ಬಜೆಟ್‌ನಲ್ಲಿ 10 ಲಕ್ಷ ರೂ. ನೀಡುವುದಾಗಿ ಘೋಷಿಸಿದ್ದು, ಈವರೆಗೆ ಅನುದಾನ ಬಂದಿಲ್ಲ.
– ಪೂರ್ಣಿಮಾ ಶ್ರೀನಿವಾಸ್‌, ಬಿಜೆಪಿ ಸದಸ್ಯೆ

ಟಾಪ್ ನ್ಯೂಸ್

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

10-bengaluru’

Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಸೆರೆ

9-bng

Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

Crime: ಅನೈತಿಕ ಸಂಬಂಧ; ವ್ಯಕ್ತಿ ಕೊಲೆಗೆ ಸುಪಾರಿ!

Crime: ಅನೈತಿಕ ಸಂಬಂಧ; ವ್ಯಕ್ತಿ ಕೊಲೆಗೆ ಸುಪಾರಿ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Tiger

Ponnampet; ಹುಲಿ ದಾಳಿಗೆ ಅಸ್ಸಾಂ ಮೂಲದ ಕಾರ್ಮಿಕ ಬಲಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.