ಗೆದ್ದವರಂತೆ ಬೀಗುತ್ತಿರುವ ಬಿಜೆಪಿ ನಾಯಕರು
Team Udayavani, Mar 26, 2017, 12:23 PM IST
ಬೆಂಗಳೂರು/ಯಲಹಂಕ: ರಾಜ್ಯದಲ್ಲಿ ಒಬ್ಬ ಕೃಷ್ಣ ಬಿಜೆಪಿಗೆ ಸೇರಿದ್ದರಿಂದ ಈಗಾಗಲೇ 175 ಸ್ಥಾನ ಗೆದ್ದವರಂತೆ ಬಿಜೆಪಿಯವರು ಬೀಗುತ್ತಿದ್ದಾರೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ನರೇಂದ್ರಮೋದಿ, ಎಲ್.ಕೆ. ಅಡ್ವಾಣಿಯೇ ಬಂದು ಪ್ರಚಾರ ಮಾಡಿದರೂ ಬಿಜೆಪಿ ಗೆದ್ದಿದ್ದು ಬರೀ 40 ಸೀಟು ಎಂಬುದನ್ನು ಅರ್ಥಮಾಡಿಕೊಳ್ಳಬೇಕು,” ಎಂದು ಮಾಜಿ ಪ್ರಧಾನಿ ದೇವೇಗೌಡರು ಬಿಜೆಪಿ ನಾಯಕರ ನಡೆಯನ್ನು ವ್ಯಂಗ್ಯ ಮಾಡಿದ್ದಾರೆ.
ಚಿಕ್ಕಬೊಮ್ಮಸಂದ್ರದಲ್ಲಿ ಶನಿವಾರ ಮಹಾನಗರ ಯುವ ಜನತಾದಳ ಆಯೋಜಿಸಿದ್ದ “ಯುವೋತ್ಸವ’ ಉದ್ಘಾಟಿಸಿ ಮಾತನಾಡಿದ ಅವರು, “”ಜೆಡಿಎಸ್ ಪಕ್ಷ ಕಟ್ಟುವುದರಲ್ಲಿ ಪ್ರಮುಖ ಪಾತ್ರ ವಹಿಸಿರುವ ಯುವ ಕಾರ್ಯಕರ್ತರು ಜನರ ಮನ ಪರಿವರ್ತಿಸಬೇಕು. ನಾವು ಅಧಿಕಾರದಲ್ಲಿದ್ದಾಗ ಮಾಡಿದ ಸಾಧನೆಗಳನ್ನು ತಿಳಿಸಬೇಕು. ಮುಂದೆ ಪಕ್ಷಕ್ಕೆ ಒಳ್ಳೆಯ ದಿನಗಳು ಬರಲಿದ್ದು, ಕುಮಾರಸ್ವಾಮಿ ಮುಖ್ಯಮಂತ್ರಿಯಾಗುತ್ತಾರೆ,” ಎಂದು ತಿಳಿಸಿದರು.
“ಉತ್ತರಪ್ರದೇಶದಲ್ಲಿ ಬಿಜೆಪಿ ಗೆದ್ದ ಮಾತ್ರಕ್ಕೆ ಇಡೀ ಹಿಂದೂಸ್ಥಾನವೇ ತನ್ನ ಕೈಯಲ್ಲಿದೆ ಅಂದುಕೊಳ್ಳಬಾರದು. ರಾಜ್ಯದಲ್ಲಿ ಜೆಡಿಎಸ್ ಪಕ್ಷ ಇನ್ನೂ ಇದೆ. ನಾನೂ ಜೀವಂತ ಇದ್ದೇನೆ. ರಾಜ್ಯದಲ್ಲಿ ಅಧಿಕಾರ ನಡೆಸಿದ ಬಿಜೆಪಿ ಏನೇನು ಮಾಡಿದೆ ಎಂಬುದ ಜನರಿಗೆ ಗೊತ್ತಿದೆ,” ಎಂದು ತಿಳಿಸಿದರು. “”ಉತ್ತರಪ್ರದೇಶದಲ್ಲಿ ನಡೆದಂತೆ ಇಲ್ಲಿಯೂ ನಡೆಯಲಿದೆ ಎಂಬುದು ಊಹೆ. ಕರ್ನಾಟದಲ್ಲಿ ಆ ರೀತಿ ರಾಜಕಾರಣ ನಡೆಯುವುದಿಲ್ಲ.
ಜೆಡಿಎಸ್ ಕಾರ್ಯಕರ್ತರು ಮುಂದಿನ ಚುನಾವಣೆಯನ್ನು ಸವಾಲಾಗಿ ಸ್ವೀಕರಿಸಬೇಕು,” ಎಂದು ಕರೆ ನೀಡಿದರು. “ಉತ್ತರ ಪ್ರದೇಶದಲ್ಲಿ ಮುಸ್ಲಿಮರ ಕಸಾಯಿಖಾನೆಗಳನ್ನು ಮುಚ್ಚಿಸಿರುವ ಬಿಜೆಪಿ ಸರ್ಕಾರ, ಅಲ್ಪಸಂಖ್ಯಾತರು ದೇಶ ಬಿಟ್ಟುಹೋಗುವಂತೆ ಮಾಡುವ ಹುನ್ನಾರ ನಡೆಸಿದೆ ,” ಎಂದು ಆರೋಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Fraud: ರೈಸ್ ಪುಲ್ಲಿಂಗ್ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ
Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ
Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!
Glanders infection: ಗ್ಲ್ಯಾಂಡರ್ಸ್ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ
Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ
MUST WATCH
ಹೊಸ ಸೇರ್ಪಡೆ
Box office: ಈ ವಾರ ಬಾಲಿವುಡ್ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?
Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ
Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್
Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ
Fraud: ರೈಸ್ ಪುಲ್ಲಿಂಗ್ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ