ನಗರದ ಎಲ್ಲ ವಾರ್ಡ್ಗಳಲ್ಲಿ ಕಾಂಪೋಸ್ಟ್ ಖರೀದಿ ಕೇಂದ್ರ
Team Udayavani, Mar 28, 2017, 12:39 PM IST
ಬೆಂಗಳೂರು: ಸಾರ್ವಜನಿಕರು ಹಾಗೂ ಸಂಘ-ಸಂಸ್ಥೆಗಳು ತಯಾರಿಸುವ ಕಾಂಪೋಸ್ಟ್ ಗೊಬ್ಬರ ಖರೀದಿಗೆ ನಗರದ ಎಲ್ಲ 198 ವಾರ್ಡ್ಗಳಲ್ಲಿ ಖರೀದಿ ಕೇಂದ್ರಗಳನ್ನು ತೆರೆಯಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಕರ್ನಾಟಕ ಕಾಂಪೋಸ್ಟ್ ಅಭಿವೃದ್ದಿ ನಿಗಮ ಹಾಗೂ ಬಿಬಿಎಂಪಿಯ ಎಲ್ಲ ತ್ಯಾಜ್ಯ ಘಟಕಗಳ ವತಿಯಿಂದ ಸೋಮವಾರ ವಿಧಾನಸೌಧದ ಮುಂಭಾಗದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ರೈತರಿಗೆ ರಿಯಾಯಿತಿ ದರದಲ್ಲಿ ಕಾಂಪೋಸ್ಟ್ ವಿತರಿಸುವ ಕೃಷಿ ಇಲಾಖೆಯ ಪೈಲಟ್ ಯೋಜನೆಗೆ ಚಾಲನೆ ನೀಡಿ ಮಾತನಾಡಿದ ಅವರು, “ಕಾಂಪೋಸ್ಟ್ ಗೊಬ್ಬರಕ್ಕೆ ಸಾಕಷ್ಟು ಬೇಡಿಕೆ ಬರುತ್ತಿದೆ. ಖರೀದಿಸಲು ರೈತರು ಸಿದ್ಧರಿದ್ದಾರೆ. ಕಾಂಪೋಸ್ಟ್ ಗೊಬ್ಬರ ಹೆಚ್ಚು ಉಪಯುಕ್ತ ಎಂದು ಕೃಷಿ ವಿವಿಗಳು ಪ್ರಮಾಣೀಕರಿಸಿವೆ,” ಎಂದು ತಿಳಿಸಿದರು.
ರಾಜಧಾನಿ ಬೆಂಗಳೂರಿಗೆ ಗಾಬೇìಜ್ ಸಿಟಿ ಎಂದು ಕರೆಯುವಷ್ಟರ ಮಟ್ಟಿಗೆ ಇಲ್ಲಿನ ಕಸದ ಸಮಸ್ಯೆ ಇತ್ತು. ಆದರೆ, ನಮ್ಮ ಸರ್ಕಾರ ಬಂದ ಮೇಲೆ ಕಸವಿಲೇವಾರಿಗೆ ಹೆಚ್ಚಿನ ಹಣ ಕೊಡಲಾಗಿದೆ. ಈಗ ಪರಿಸ್ಥಿತಿ ಬದಲಾಗಿದೆ. ಬೆಂಗಳೂರಿನ ಉದ್ಯಾನನಗರಿ ಖ್ಯಾತಿಯನ್ನು ಉಳಿಸಿಕೊಳ್ಳಲು ಸರ್ಕಾರದ ಜೊತೆಗೆ ಸಾರ್ವಜನಿಕರು ಕೈಜೋಡಿಸಬೇಕು. ಸರ್ಕಾರದ ಹಣವನ್ನು ಸದುಪಯೋಗಪಡಿಸಿಕೊಂಡಾಗ ಮಾತ್ರ ಇದರಲ್ಲಿ ಯಶಸ್ಸು ಸಾಧ್ಯ.
ಬೆಂಗಳೂರು ಸೇರಿದಂತೆ ಇತರ ನಗರಗಳೂ ಸ್ವತ್ಛವಾಗಿರಬೇಕು ಎಂಬುದು ಸರ್ಕಾರದ ಉದ್ದೇಶ. ನಗರಗಳಲ್ಲಿ ಉತ್ಪತ್ತಿಯಾಗುವ ಕಸ ಉಪಯೋಗಕ್ಕೆ ಬಂದು ಅದರಿಂದ ರೈತರಿಗೆ ಅನುಕೂಲವಾಗಬೇಕು,” ಎಂದರು. ಕೃಷಿ ಸಚಿವ ಕೃಷ್ಣಭೈರೇಗೌಡ ಮಾತನಾಡಿ, “ನಾಲ್ಕು ವರ್ಷಗಳ ಹಿಂದೆ ಬೆಂಗಳೂರಿಗೆ ಗಾಬೇìಜ್ ಸಿಟಿ ಎಂದು ಹೇಳಲಾಗುತ್ತಿತ್ತು. ಈಗ ಅದು ಗ್ರೀನ್ ಸಿಟಿ ಆಗಿದೆ. ಬೆಂಗಳೂರು ಕಸದ ಸಮಸ್ಯೆಯಿಂದ ಮುಕ್ತವಾಗಿದೆ.
ತ್ಯಾಜ್ಯ ವಿಲೇವಾರಿಗೆ ಸರ್ಕಾರ ಬಿಬಿಎಂಪಿಗೆ 450 ಕೋಟಿ ರೂ. ನೀಡಿದೆ. ಶೇ.50ರಷ್ಟು ಕಸ ಸಂಸ್ಕರಣೆ ಆಗುತ್ತಿದೆ. 6ರಿಂದ 7 ಕಾಂಪೋಸ್ಟ್ ಘಟಕಗಳನ್ನು ಈಗಾಗಲೇ ಸ್ಥಾಪಿಸಲಾಗಿದ್ದು, ಇದರಲ್ಲಿ ಗೊಬ್ಬರ ಉತ್ಪಾದನೆ ಮಾಡಲಾಗುತ್ತಿದೆ,” ಎಂದರು. ಕಾರ್ಯಕ್ರಮದಲ್ಲಿ ಬೆಂಗಳೂರು ಅಭಿವೃದ್ಧಿ ಸಚಿವ ಕೆ.ಜೆ. ಜಾರ್ಜ್, ಮೇಯರ್ ಪದ್ಮಾವತಿ, ಕರ್ನಾಟಕ ಕಾಂಪೋಸ್ಟ್ ಅಭಿವೃದ್ಧಿ ನಿಗದಮ ಅಧ್ಯಕ್ಷ ಕೆಂಚೇಗೌಡ, ಬಿಬಿಎಂಪಿ ಆಯುಕ್ತ ಮಂಜುನಾಥಪ್ರಸಾದ್ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ
Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್ ಸೆರೆ
Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ
ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್
MUST WATCH
ಹೊಸ ಸೇರ್ಪಡೆ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ